ಗುರುಭವನಕ್ಕೆ ಸೌಲಭ್ಯ ಕಲ್ಪಿಸಿ
ಗುರುಭವನಕ್ಕೆ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಶಿಕ್ಷಕರ ಸಂಘದಿಂದ ಶಾಸಕ ಚಂದ್ರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
Team Udayavani, Jan 28, 2021, 4:20 PM IST
ಹೊಳಲ್ಕೆರೆ: ಶಿಕ್ಷಕರ ಆಶಾಗೋಪುರ ಎನ್ನಲಾಗಿರುವ ಗುರುಭವನ ನಿರ್ಮಾಣ ಹಂತದಲ್ಲಿದ್ದು, ಸೂಕ್ತ ಅನುದಾನವಿಲ್ಲದೆ ಅನಾಥವಾಗಿ ಬಿಟ್ಟಿದೆ. ಹಾಗಾಗಿ 1400 ಶಿಕ್ಷಕರ ಕನಸಾಗಿರುವ ಶಿಕ್ಷಕರ ಗುರುಭವನಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಶಿಕ್ಷಕ ಸಂಘದ ಅಧ್ಯಕ್ಷ ಜಿ.ಎಂ.ಶಿವಣ್ಣ ಮನವಿ ಮಾಡಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ಎಂ.ಚಂದ್ರಪ್ಪ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ನಿರ್ವಹಣೆ ಇಲ್ಲದ ಪರಿಣಾಮ ಶಿಕ್ಷಕರ ಸಂಘದ ಗುರುಭವನ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಶಿಕ್ಷಕ ಸಮುದಾಯದ ನಿ ಧಿ ಸೇರಿದಂತೆ ವಿವಿಧ ಅನುದಾನಗಳಲ್ಲಿ ನಿರ್ಮಾಣಗೊಂಡಿರುವ ಶಿಕ್ಷಕ ಗುರುಭವನವನ್ನು ದುರಸ್ತಿಗೊಳಿಸಿ ಶಿಕ್ಷಕರ ಸಮುದಾಯಕ್ಕೆ ಬೇಕಾದ ಶೈಕ್ಷಣಿಕ ತರಬೇತಿ, ಸಭೆ ಸಮಾರಂಭಗಳನ್ನು ಕೈಗೊಳ್ಳಲು ತುಂಬಾ ಅಗತ್ಯವಾಗಿದ್ದು, ಸೂಕ್ತ ಅನುದಾನ ನೀಡುವ ಮೂಲಕ ಮಾದರಿ ಗುರುಭವನವನ್ನಾಗಿ ನಿರ್ಮಾಣ ಮಾಡಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ ಎಂದರು. ದೇವರಾಜಯ್ಯ, ಲೋಕೇಶ್, ಮಂಜುನಾಥ, ಸತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ