“ಉತ್ಸವ ದಿ ಹಂಪಿ’ : ಇಂದಿನಿಂದ ಕಾರು-ಬೈಕ್ ರೇಸ್
ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಚಾಂಪಿಯನ್ಸ್ ಭಾಗಿ
Team Udayavani, Jan 29, 2021, 5:07 PM IST
ಹೊಸಪೇಟೆ: ನಗರದಲ್ಲಿ “ಉತ್ಸವ ದಿ ಹಂಪಿ’ ಹೆಸರಿನಲ್ಲಿ ಕಾರು ಹಾಗೂ ಬೈಕ್ ರೇಸ್ ನಡೆಸಲು ಫೆಸ್ಟಿವಲ್ ಆಫ್ ಮೋಟರ್ ನ್ಪೋರ್ಟ್ಸ್ ಆಸೋಶಿಯೇಷನ್ ನಿರ್ಧರಿಸಿದ್ದು, ಜ.29ರಿಂದ ಒಂದು ವಾರಗಳ ಕಾಲ ನಡೆಯಲಿದೆ ಎಂದು ಆಯೋಜಕ ಗಿರೀಜ್ ಶಂಕರ ಜೋಶಿ ತಿಳಿಸಿದರು.
ನಗರ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯನಗರ ಮೋಟರ್ ನ್ಪೋರ್ಟ್ಸ್ ಅಕಾಡೆಮಿ, ಫೆಡರೇಶನ್ ಆಫ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ಸ್ ಆಫ್ ಇಂಡಿಯಾ ಸಂಸ್ಥೆ ವತಿಯಿಂದ ತಾಲೂಕಿನ ರಾಜಪುರ, ಜಂಬುನಾಥ ಹಳ್ಳಿ, ಧರ್ಮಸಾಗರ ಗ್ರಾಮದಲ್ಲಿ ಬೈಕ್, ಕಾರ್ ಹಾಗೂ ಜೀಪ್ ರೇಸ್ ನಡೆಯಲಿದೆ ಎಂದರು.
ದ್ವಿಚಕ್ರ ವಾಹನ, ನಾಲ್ಕು ಚಕ್ರ ವಾಹನ, ಟೈಮ್ ಸ್ಪೀಡ್ ಡಿಸ್ಟನ್ಸ್ ರ್ಯಾಲಿ, ಸಿಂಗಲ್ ಟ್ರಾಕ್ ಆಟೋಕ್ರಾಸ್ ಸ್ಪರ್ಧೆಗೆ ದೇಶದ ವಿವಿಧೆಡೆಯ 250ಕ್ಕೂ ರಾಷ್ಟ್ರೀಯ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಮಂಗಳೂರು, ಬೆಂಗಳೂರು, ಕೊಯಮತ್ತೂರನಲ್ಲಿ ಕ್ರೀಡೆ ಆಯೋಜಿಸಲಾಗಿದೆ. ಅಂತಿಮವಾಗಿ ಹಂಪಿ ಭಾಗದಲ್ಲಿ ಆಯೋಜಿಸಲಾಗಿದೆ. 120ರಿಂದ 2450 ಸಿಸಿ ಬೈಕ್ಗಳು ರೇಸ್ ನಲ್ಲಿ ಭಾಗಿಯಾಗಲಿವೆ ಎಂದರು.
ಜ.29ರಂದು ನಗರದ ತಾಲೂಕು ಕ್ರೀಡಾಂಗಣದಲ್ಲಿ ಸಚಿವ ಆನಂದ ಸಿಂಗ್ ಉತ್ಸವ ದಿ ಹಂಪಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ವಿಜಯನಗರ ಸಾಮ್ರಾಜ್ಯದ ಸಂಸ್ಕೃತಿ, ಪರಂಪರೆಯನ್ನು ಆಚರಿಸುವ ಹಂಪಿ ಉತ್ಸವದಿಂದ ಸ್ಪೂರ್ತಿ ಪಡೆದಿದೆ. ಇದರಿಂದ ಹಂಪಿ ಪ್ರದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಸುವುದು ಮತ್ತು ವಿಶ್ವ ಭೂಪಟದಲ್ಲಿ ಮತ್ತೂಂದು ಗುರುತನ್ನು ನೀಡುವ ಗುರಿ ಹೊಂದಿದೆ ಎಂದರು.
ಶ್ಯಾಮ್ ಕೋಠಾರಿ, ಐಶ್ವರ್ಯ, ಜಿ.ಎಸ್. ಜೋಶಿ, ಸಂತೋಷ್ ಎಚ್. ಎಂ. ರೋಹಿತ್ ಗೌಡ, ಸಿ.ಕೆ. ಚಿನ್ನಪ್ಪ, ದರ್ಪನ್ ಗೌಡ ಇನ್ನಿತರರಿದ್ದರು.
ಓದಿ : ಏಳು-ಬೀಳು ಸಹಜ ಮೆಟ್ಟಿ ನಿಲ್ಲುವುದೇ ಜೀವನ..!; ಇದು ಇನ್ಫಿ ನಾರಾಯಣಮೂರ್ತಿ ಅವರ ಬದುಕಿನ ಪಾಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
ಪ್ರಜ್ವಲ್ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ
Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್