ಅಕ್ರಮ ನಳ ಸಕ್ರಮಕ್ಕೆ ತೀರ್ಮಾನ

ಹೊಸ ಸಂಪರ್ಕಕ್ಕೆ 3500 ರೂ. ಶುಲ್ಕ ನಿಗದಿ

Team Udayavani, Jan 29, 2021, 5:39 PM IST

29-27

ಹರಪನಹಳ್ಳಿ: ಪುರಸಭೆ ಅಧ್ಯಕ್ಷ ಮಂಜುನಾಥ ಇಂಜತ್ಕರ್‌ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪಟ್ಟಣದ ಸುಮಾರು 4900
ಅಕ್ರಮ ನಳಗಳನ್ನು ಸರ್ಕಾರ ನಿಗದಿಪಡಿಸಿದರ ಪಾವತಿಸಿಕೊಂಡು ಸಕ್ರಮಗೊಳಿಸಲು ತೀರ್ಮಾನಿಸಲಾಯಿತು.

ಅಲ್ಲದೇ ಹೊಸ ಸಂಪರ್ಕ ಪಡೆಯುವವರಿಗೆ 3500 ರೂ. ಶುಲ್ಕ ನಿಗದಿಪಡಿಸಲಾಯಿತು. ಹೊಸ ನಳ ಸಂಪರ್ಕಕ್ಕೆ 5 ಸಾವಿರರೂಗಳನ್ನು ನಿಗದಿ ಮಾಡಬೇಕು ಎಂಬ ಅಧಿಕಾರಿಗಳ ಮನವಿಗೆ ಆಕ್ಷೇಪ ವ್ಯಕ್ತತಪಡಿಸಿದ ಸದಸ್ಯರಾದ ಡಿ.ಅಬ್ದುಲ್‌ರಹಿಮಾನ್‌, ಎಂ.ವಿ.ಅಂಜಿನಪ್ಪ, ಟಿ.ವೆಂಕಟೇಶ,
ಗೊಂಗಡಿ ನಾಗರಾಜ್‌ ಅವರು ಸಾಮಾನ್ಯ ಜನರಿಗೆ ಶುಲ್ಕ ಹೊರೆಯಾಗುತ್ತದೆ. ಕಡಿಮೆ ಮಾಡಬೇಕು ಎಂದಾಗ ಸುದೀರ್ಘ‌ ಚರ್ಚೆ ನಡೆದು ಅಂತಿಮವಾಗಿ 3500 ರೂ. ಶುಲ್ಕ ನಿಗದಿಗೆ ನಿರ್ಣಯ ಕೈಗೊಳ್ಳಲಾಯಿತು. ಪುರಸಭಾ ಕಚೇರಿಯ ಕಂದಾಯ
ವಿಭಾಗದಲ್ಲಿ ಬಹಳಷ್ಟು ಸಮಸ್ಯೆಯಿದ್ದು, ಕಡತಗಳ ವಿಲೇವಾರಿ ಮಾಡಲು ವಿಳಂಬ ಮಾಡಲಾಗುತ್ತಿದೆ. ಅಧಿಕಾರಿಗಳು ಇದೇ ರೀತಿ ನಿರ್ಲಕ್ಷ  ವಹಿಸಿದ್ದ ಮುಂದಿನ ದಿನಗಳಲ್ಲಿ ಸಭೆ ನಡೆಸಲು ಬಿಡುವುದಿಲ್ಲ ಎಂದು ಹಿರಿಯ ಸದಸ್ಯ ಎಂ.ವಿ.ಅಂಜಿನಪ್ಪ ಕಿಡಿಕಾರಿದಾಗ ಇದಕ್ಕೆ ಧ್ವನಿಗೂಡಿಸಿದ ಸದಸ್ಯ ಎಸ್‌.ಜಾಕೀರಹುಸೇನ್‌ ಅವರು ಸದಸ್ಯರು ಕೊಟ್ಟ ಅರ್ಜಿಗಳಿಗೆ ಸ್ಪಂದನೆ ಇಲ್ಲ, ಇನ್ನೂ ಸಾರ್ವಜನಿಕರ ಪಾಡೇನು
ಎಂದು ಪ್ರಶ್ನಿಸಿದರು.

ಸದಸ್ಯರಾದ ಎಚ್‌.ಎಂ.ಅಶೋಕ್‌, ಗೊಂಗಡಿ ನಾಗರಾಜ್‌ ಅವರು ಸಿಬ್ಬಂದಿ ವರ್ಗದವರ ಕಾರ್ಯವೈಖರಿ ಸರಿಯಿಲ್ಲ. ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಮುಖ್ಯಾ ಧಿಕಾರಿಗಳು ವಾರ್ಡ್‌ಗಳ ಭೇಟಿ ಮಾಡಿ ಸಮಸ್ಯೆಗಳ ಪರಿಶೀಲಿಸಿ ಪರಿಹಾರ ನೀಡಬೇಕು ಎಂದು ತಾಕೀತು
ಮಾಡಿದರು. ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ನ್ಯಾಯಾಲಯದ ಜಡ್ಜ್ಗಳಂತೆ ಕೆಲಸ ಮಾಡಬೇಕು ಎಂದು ಸದಸ್ಯ ಅಬ್ದುಲ್‌ ರಹೀಮಾನ್‌ ಸಾಬ್‌ ಅ ಧಿಕಾರಿಗಳಿಗೆ ಸಲಹೆ ನೀಡಿದರು.

ಸದಸ್ಯ ಟಿ.ವೆಂಕಟೇಶ ಮಾತನಾಡಿ, ವಾರ್ಡ್‌ಗಳಲ್ಲಿ ಅನೇಕ ಸಮಸ್ಯೆಗಳಿದ್ದು, ಪ್ರತಿ ತಿಂಗಳಿಗೊಮ್ಮೆ ಸಭೆ ಕರೆಯಬೇಕು. ಒಂದೇ ಬಾರಿಗೆ 19 ವಿಷಯಗಳನ್ನು ಚರ್ಚೆಗೆ ತಂದರೆ ಹೇಗೆ ಚರ್ಚಿಸೋದು ಎಂದು ಅಧ್ಯಕ್ಷರಿಗೆ ಪ್ರಶ್ನಿಸಿದರು. ಮುಂದಿನ ದಿನಗಳಲ್ಲಿ ಪ್ರತಿ ತಿಂಗಳು ಸಭೆ ಕರೆದು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಅಧ್ಯಕ್ಷ ಮಂಜುನಾಥ ಇಜಂತಕರ್‌ ತಿಳಿಸಿದರು. ಮಹಿಳಾ ಸದಸ್ಯರಾದ ಲಕ್ಕಮ್ಮ, ಯಲ್ಲಮ್ಮ, ಅವರು ತಮ್ಮ ತಮ್ಮ ವಾರ್ಡ್‌ಗಳಲ್ಲಿ ಬೀದಿ ದೀಪ, ಚರಂಡಿ, ನೀರಿನ ಸಮಸ್ಯೆ ಕುರಿತು ಗಮನ ಸೆಳೆದು ಕೂಡಲೇ ಸಮಸ್ಯೆ ನೀಗಿಸಿ ಎಂದು
ಕೋರಿದರು.

ಪಟ್ಟಣದ ಪಠಾಣೆಗೇರಿಯಲ್ಲಿ ಕುಡಿಯುವ ನೀರಿನ ಜೊತೆ ಚರಂಡಿ ಮತ್ತು ಶೌಚಾಲಯ ನೀರು ಕಲುಷಿತವಾಗಿ ದಿನನಿತ್ಯ ಪೂರೈಕೆಯಾಗುತ್ತಿದೆ. ಪೈಪ್‌ಲೈನ್‌ ಹೊಸದಾಗಿ ಮಾಡುವಂತೆ ಸದಸ್ಯ ಎಸ್‌.ಜಾಕೀರ್‌ ಹುಸೇನ್‌ ಮನವಿ ಮಾಡಿದಾಗ ಪಟ್ಟಣದ ತುರ್ತಾಗಿ ಆಗಬೇಕಾಗಿರುವುಗಳನ್ನು ಗುರುತಿಸಿ ಕಾಮಗಾರಿ ಮಾಡುವುದಾಗಿ ಅಧ್ಯಕ್ಷರು ಭರವಸೆ ನೀಡಿದರು.

ಪಾಠಣಗೇರಿಯಲ್ಲಿ ಕಳೆದ ಒಂದು ದಶಕದಿಂದ ಧಾರ್ಮಿಕ ಕೇಂದ್ರದ ಸಮೀಪವಿರುವ ಸಾರ್ವಜನಿಕ ಶೌಚಾಲಯ ಉಪಯೋಗಿಸುತ್ತಿಲ್ಲ, ಹೀಗಾಗಿ
ಗ್ರಂಥಾಲಯವಾಗಿ ಪರಿವರ್ತನೆ ಮಾಡುವಂತೆ ಎಸ್‌.ಜಾಕೀರಹುಸೇನ್‌ ಮಾಡಿದಾಗ ಧಾರ್ಮಿಕ ಸ್ಥಳದ ನಿರುಪಯುಕ್ತವಾಗಿ
ಶೌಚಾಲಯ ಗುರುತಿಸಿ ಮುಂದಿನ ಸಭೆಯಲ್ಲಿ ನಿರ್ಧರಿಸುವುದಾಗಿ ಅಧ್ಯಕ್ಷರು ತಿಳಿಸಿದರು.

ಉಪಾಧ್ಯಕ್ಷೆ ನಿಟ್ಟೂರು ಭೀಮವ್ವ ಹಾಗೂ ಸದಸ್ಯರು, ಮುಖ್ಯಾಧಿಕಾರಿ ಬಿ.ಆರ್‌.ನಾಗರಾಜನಾಯ್ಕ, ಆರೋಗ್ಯಾಧಿಕಾರಿ ಮಂಜುನಾಥ್‌, ಸಮುದಾಯ ಸಂಘಟನಾಧಿ ಕಾರಿ ಲೋಕಾನಾಯ್ಕ ಇತರರು ಹಾಜರಿದ್ದರು.

ಓದಿ : ಕೋವಿಡ್‌ ಕಾರಣ ಹೇಳಬೇಡಿ, ಕಾರ್ಯಪ್ರವೃತ್ತರಾಗಿ

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.