ಸಾಹಿತ್ಯ ಪರಿಷತ್ತಿಗೆ ಸಮರ್ಥ ಅಭ್ಯರ್ಥಿ ಅಗತ್ಯ

ಜಿಲ್ಲಾಧ್ಯಕ್ಷ ಸ್ಥಾನದ ಅಕಾಂಕ್ಷಿಗಳು-ಸಮಾನ ಮನಸ್ಕರ ಪೂರ್ವಭಾವಿ ಸಭೆಯಲ್ಲಿ ಸಾಹಿತಿ ಚಟ್ನಳ್ಳಿ ಮಹೇಶ್‌ ಅಭಿಮತ

Team Udayavani, Jan 29, 2021, 5:52 PM IST

29-29

ಚಿಕ್ಕಮಗಳೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯದಲ್ಲೇ ಮುಂಚೂಣಿಯಲ್ಲಿರಬೇಕೆಂಬುದು ಸಾಹಿತ್ಯಾಸಕ್ತರ ಅಭಿರುಚಿಯಾಗಿದ್ದು, ಸಾಹಿತ್ಯ ಪರಿಷತ್‌ಗೆ ದಿಕ್ಕನ್ನು ತೋರಿಸಿ ಕೊಟ್ಟಿದ್ದ ಪ್ರೊ| ಚಂದ್ರಯ್ಯನಾಯ್ಡು ಅವರ ಅವಧಿಯಲ್ಲಿ ಜನಸಾಮಾನ್ಯರ ಪರಿಷತ್ತಾಗಿ ವಿಶೇಷ ಆಯಾಮ ಹೊಂದಿದ್ದು ಅದೇ ಗತವೈಭವ ಮರುಕಳಿಸಬೇಕಾದರೆ ಸಮರ್ಥ ಅಭ್ಯರ್ಥಿ ಆಯ್ಕೆ ಅಗತ್ಯ ಎಂದು ಸಾಹಿತಿ ಚಟ್ನಳ್ಳಿ ಮಹೇಶ್‌ ಹೇಳಿದರು.

ಗುರುವಾರ ನಗರದ ವಿಜಯಪುರ ಸದಾಶಿವ ಶಾಸ್ತ್ರಿ ಭವನದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷರ ಚುನಾವಣೆ ಕುರಿತಂತೆ ಜಿಲ್ಲಾಧ್ಯಕ್ಷ ಆಕಾಂಕ್ಷಿಗಳು, ಸಮಾನ ಮನಸ್ಕರು ನಡೆಸಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕೆಲವು ಬದಲಾವಣೆಗಳಿಂದ ಸಾಹಿತ್ಯ ಪರಿಷತ್‌ನ
ಕಾಲಾವಧಿ 5 ವರ್ಷಕ್ಕೆ ನಿಗದಿಯಾಗಿರುವುದರಿಂದ ಸದ್ಯದಲ್ಲೇ ಕನ್ನಡ ಸಾಹಿತ್ಯ ಪರಿಷತ್‌ನ ಚುನಾವಣೆಗಳು ನಡೆಯತ್ತವೆ. ಸೂರಿ ಶ್ರೀನಿವಾಸ್‌ ಅವರು ಅಭ್ಯರ್ಥಿ ಆಕಾಂಕ್ಷಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದಿ.ಅಜ್ಜಂಪುರ ಜಿ.ಸೂರಿ ಅವರು ಜಿಲ್ಲಾಧ್ಯಕ್ಷರಾಗಿದ್ದಾಗ ಬದ್ಧತೆ, ಸಾಹಿತ್ಯದ ಬಗ್ಗೆ ಇರುವ ಕಳಕಳಿಯ ಹಾದಿಯನ್ನು ಸಾಹಿತ್ಯ ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ಮುಂದುವರಿಸಿಕೊಂಡು ಬಂದು ಸಾಹಿತ್ಯ ಪರಿಷತ್ತನ್ನು ಸಮರ್ಥವಾಗಿ ನಡೆಸಲು ಅಗತ್ಯ ವಾದ ಆಲೋಚನೆಗಳನ್ನು ಹೊಂದಿದ್ದಾರೆ ಎಂದರು.

ಕಡೂರು ತಾಲೂಕು ಮಾಜಿ ಅಧ್ಯಕ್ಷ ಸೂರಿ ಶ್ರೀನಿವಾಸ್‌ ಮಾತನಾಡಿ, ಕನ್ನಡದ ಮನಸ್ಸುಗಳನ್ನು ಒಂದುಗೂಡಿಸಿದ್ದ ದಿ. ಚಂದ್ರಯ್ಯನಾಯ್ಡು, ತಂದೆ ಜಿ. ಸೂರಿ, ಕೋದಂಡ ರಾಮಶ್ರೇಷ್ಠಿ ಅವರು ಸಾಹಿತ್ಯ ಕ್ಷೇತ್ರದ ಕಾಯಕದಲ್ಲಿ ತೊಡಗಿಸಿಕೊಂಡಿದ್ದನ್ನು ನೋಡುತ್ತಲೇ ಬೆಳೆದವನು. ಕಡೂರು ತಾಲೂಕು ಕಸಾಪ ಅಧ್ಯಕ್ಷನಾದ ಸಂದರ್ಭ ಹಿರಿಯ ಸಾಹಿತ್ಯಾಭಿಮಾನಿಗಳ ಮಾರ್ಗದರ್ಶನದಲ್ಲಿ ಗ್ರಾಮ ಮಟ್ಟದಿಂದ ಜಿಲ್ಲಾ ಸಮ್ಮೇಳನಗಳನ್ನು ಮಾಡಿ 18ಲಕ್ಷ ರೂ. ಕನ್ನಡಭವನ ನಿರ್ಮಿಸಲಾಗಿದೆ. ದತ್ತಿ ಉಪನ್ಯಾಸಕ್ಕೆ ಕಸಾಪ ಸೀಮಿತವಾಗಬಾರದು. ಕಾವ್ಯ ಕಮ್ಮಟ, ಕನ್ನಡಭಾಷೆ, ಸಾಹಿತ್ಯ ಬೆಳೆಯವ ರಸಗ್ರಹಣ ಕಮ್ಮಟ ಮಾಡಬೇಕೆಂಬ ಪರಿಕಲ್ಪನೆ ಹೊಂದಿ ಅಧ್ಯಕ್ಷ ಆಕಾಂಕ್ಷಿಯಾಗಿದ್ದು, ನೀವು ಇಂದು ಪ್ರೋತ್ಸಾಹದ ಮಾತನಾಡಿ ಉತ್ತೇಜಿಸಿರುವುದು ಸಂತೋಷ ತಂದಿದೆ ಎಂದರು.

ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಕೆ.ಆರ್‌. ಅನಿಲ್‌ಕುಮಾರ್‌ ಮಾತನಾಡಿ, ಗಡಿಭಾಗ, ಕನ್ನಡಿಗರಿಗೆ ತೊಂದರೆಯಾದಾಗ ಧ್ವನಿಯಾಗಬೇಕು, ಕಸಾಪ ಜಿಲ್ಲೆಯ ಸಾಮಾನ್ಯ ಜನರಿಗೆ ತಲುಪಿದೆ ಎಂದರೆ ಪ್ರೊ| ಚಂದ್ರಯ್ಯನಾಯ್ಡು ಅವರನ್ನು ನೆನೆಸಿಕೊಳ್ಳ ಬೇಕು ಎಂದರು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ತೇಗೂರು ಜಗದೀಶ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯಾವುದಾದರೂ ಕಸಾಪ
ಮೆರವಣಿಗೆಗಳಿಗೆ ಮಾತ್ರ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ನೆನಪಿಸಿಕೊಂಡು ನಮ್ಮನ್ನು ಅಷ್ಟಕ್ಕೆ ಸೀಮಿತ ಮಾಡಿದ್ದಾರೆ. ನಾವು ಬೀದಿಗೆ ಬಂದು ಹೋರಾಟ ಮಾಡಬೇಕಾದರೆ ಸಾಹಿತ್ಯ ಪರಿಷತ್‌ ನಿಂದ ಇತ್ತೀಚಿನ ದಿನಗಳಲ್ಲಿ ಬೆಂಬಲಿಸದಿರುವುದು ವಿಪರ್ಯಾಸ. ಮುಂದೆ ಆ ರೀತಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಸಭೆಯಲ್ಲಿ ಓಂಕಾರಸ್ವಾಮಿ, ಡಾ| ಎಂ.ಎಸ್‌. ನಂಜುಂಡಸ್ವಾಮಿ, ರಂಗಪ್ಪ, ಡಾ| ರಾಜ್‌ ಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಐ.ಕೆ.
ಓಂಕಾರೇಗೌಡ, ಸದಸ್ಯ ವರಸಿದ್ದಿ ವೇಣುಗೋಪಾಲ್‌, ವಾಣಿ ಚಂದ್ರಯ್ಯ ನಾಯ್ಡು, ಲಕ್ಷ್ಮೀ ಶ್ಯಾಮರಾವ್‌, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನವರತ್ನ ಇಂದುಕುಮಾರ್‌, ವಕೀಲರಾದ ಡಿ.ಎಸ್‌. ಮಮತಾ, ಜಗದೀಶ್‌, ನಟರಾಜ್‌, ವಿವಿಧ ಸಂಘಟನೆಯ ಬಿ.ಎಂ. ಕುಮಾರ್‌, ಚಿ.ಸ. ಪ್ರಭುಲಿಂಗ ಶಾಸ್ತ್ರಿ, ಕಳವಾಸೆ ರವಿ, ಎಲ್‌.ವಿ. ಕೃಷ್ಣಮೂರ್ತಿ ಇದ್ದರು.

ಓದಿ : ವೈದ್ಯರ ತಾಂತ್ರಿಕ ಗೋಷ್ಠಿಗೆ ಚಾಲನೆ

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.