ತೆಕ್ಕಟ್ಟೆ: ಬೈಕ್ ಗೆ ಕಾರು ಢಿಕ್ಕಿ; ಗಂಭೀರ ಗಾಯಗೊಂಡ ಬೈಕ್ ಸವಾರ
Team Udayavani, Jan 31, 2021, 7:37 PM IST
ತೆಕ್ಕಟ್ಟೆ: ತೆಕ್ಕಟ್ಟೆ ರಾ.ಹೆ. 66 ಶ್ರೀ ಮಹಾಲಿಂಗೇಶ್ವರ ದೇವಳದ ಸಮೀಪ ಬೈಕ್ಗೆ ಮಾರುತಿ 800 ಕಾರು ಢಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜ.31ರ ಸಂಜೆ ಸಂಭವಿಸಿದೆ.
ಕೋಟದಿಂದ ಕೋಟೇಶ್ವರ ಕಡೆಗೆ ಸಾಗುತ್ತಿದ್ದ ಮಾರುತಿ 800 ಕಾರು ನೇರವಾಗಿ ಬಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಣೂರು ನಿವಾಸಿ ದಾರುಅಜ್ಜಿಮನೆ ಆನಂದ ಕಾಂಚನ್ (62) ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಹಿಂಬದಿ ಸವಾರ ರತ್ನಾಕರ ದೇವಾಡಿಗ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ತತ್ ಕ್ಷಣವೇ ಸ್ಥಳೀಯರು ಕೋಟೇಶ್ವರ ಖಾಸಗಿ ಆಸ್ಪತೆಗೆ ಸಾಗಿಸಿದ್ದಾರೆ.
ಮಾನವೀಯತೆ ಮೆರೆದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ:
ತೆಕ್ಕಟ್ಟೆ ರಾ.ಹೆ.66 ರ ಪ್ರಮುಖ ಭಾಗದಲ್ಲಿ ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಹಲವಾರು ಮಂದಿ ಒಂದೆಡೆ ನೆರೆದಿದ್ದರು. ಈ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆಯವರು ತತ್ಕ್ಷಣವೇ ಘಟನಾ ಸ್ಥಳಕ್ಕೆ ಬಂದು ಸಾರ್ವಜನಿಕರಿಂದ ಮಾಹಿತಿ ಪಡೆದು ಕೋಟ ಪೊಲೀಸ್ ಠಾಣಾ ಗಮನಕ್ಕೆ ತರುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ