ಹೋಟೆಲ್ ನಲ್ಲಿ ಕುಳಿತಿದ್ದ ಯುವತಿಗೆ ಹಳೆಯ ಗೆಳೆಯನ ಗ್ಯಾಂಗ್ ನ ದಾಳಿ: ಚೂರಿ ಇರಿತ
ಮಂಗಳೂರಿನ ಕದ್ರಿಯಲ್ಲಿ ನಡೆದ ಘಟನೆ
Team Udayavani, Feb 1, 2021, 9:40 AM IST
ಮಂಗಳೂರು: ತನ್ನ ಗೆಳೆಯರೊಂದಿಗೆ ಯುವತಿಯೊಬ್ಬರು ಹೋಟೆಲ್ ನಲ್ಲಿ ಕುಳಿತಿದ್ದಾಗ ಆಕೆಯ ಹಳೆ ಪರಿಚಯದ ಸ್ನೇಹಿತ ಮತ್ತು ಆತನ ಗೆಳೆಯರು ಏಕಾಏಕಿ ದಾಳಿ ನಡೆಸಿದ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ.
ಜ.30ರಂದು ಮಧ್ಯಾಹ್ನ ಕದ್ರಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ:ದುಷ್ಕರ್ಮಿಗಳಿಂದ ಮಾಜಿ ಸಿಎಂ ಧರಂಸಿಂಗ್ ಅವರ ದೂರದ ಸಂಬಂಧಿಯ ಅಪಹರಿಸಿ ಕೊಲೆ
ಯುವತಿಯು ತನ್ನ ಮೂವರು ಗೆಳೆಯರೊಂದಿಗೆ ಕುಳಿತಿದ್ದಾಗ ಏಕಾಏಕಿ ನುಗ್ಗಿದ ನಾಲ್ವರು ಯುವಕರು ದಾಳಿ ನಡೆಸಿದ್ದಾರೆ. ಹೋಟೆಲ್ ನಲ್ಲಿ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದು, ಈ ವೇಳೆ ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಯುವತಿಯೊಂದಿಗೆ ಇದ್ದ ಯುವಕ ಚೂರಿ ಇರಿತದಿಂದ ಗಾಯಗೊಂಡಿದ್ದಾನೆ.
ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.