ಜೀವನ ಸಾಧನೆಯಲ್ಲ ಶೋಧನೆಯಾಗಲಿ: ವಿನಯ ಗುರೂಜಿ


Team Udayavani, Feb 1, 2021, 2:10 PM IST

Life is not about achievement: Vinaya Guruji

ಕೊಪ್ಪಳ: ಮನುಷ್ಯನ ಜೀವನವೆಂಬುದು ಸಾಧನೆ ಮಾಡುವುದಲ್ಲ. ನಮ್ಮೊಳಗೆ ನಾವು ಶೋಧನೆ ಮಾಡಬೇಕು. ಆದರೆ ಇಂದಿನ ವ್ಯವಸ್ಥೆಯಲ್ಲಿ ನಾವೆಲ್ಲರೂ ಹೊರಗೆ ಮನುಷ್ಯರಂತೆ ನಟನೆ ಮಾಡುತ್ತಿದ್ದೇವೆ. ಆದರೆ ನಿಜವಾದ ಮನುಷ್ಯರಲ್ಲ. ಆದ್ದರಿಂದ ಪ್ರತಿಯೊಬ್ಬರು ಭಗವದ್ಗೀತೆ ಪಠಿಸಿದರೇ ಸಾಲದು, ಅದನ್ನು ಅನುಸರಿಸಬೇಕು ಎಂದು ಅವಧೂತ ಶ್ರೀ ವಿನಯ ಗುರೂಜಿ ಹೇಳಿದರು.

ತಾಲೂಕಿನ ಕಿಡದಾಳ ಗ್ರಾಮದಲ್ಲಿನ ಶಾರದಾ ಇಂಟರ್‌ ನ್ಯಾಷನಲ್‌ ಸ್ಕೂಲ್‌ ಮತ್ತು ಕಾಲೇಜ್‌ ಸಭಾಂಗಣದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ದೇಶವು ಮಮ್ಮಿ, ಡ್ಯಾಡಿ ಸಂಸ್ಕೃತಿಯಿಂದ  ಹಾಳಾಗುತ್ತಿದೆ. ಶಾಲೆಗಳಲ್ಲಿ ನಾವು ಬದುಕು, ಸಂಸ್ಕಾರ ಕಲಿಸುತ್ತಿಲ್ಲ. ಇದರಿಂದ ಕಲಿಯುವ ಮಕ್ಕಳು ತಪ್ಪಾಗಿ ಬದುಕು ಸಾಗಿಸಲು ನಿರ್ಧರಿಸುತ್ತಾರೆ. ಆದ್ದರಿಂದ ಅವರಿಗೆ ನಾವು ಸಂಸ್ಕಾರ ಕೊಡಬೇಕಾಗಿದೆ.

ಪ್ರತಿಯೊಂದು ಶಾಲೆಯಲ್ಲೂ ಭಗವದ್ಗೀತೆಯ ಪಾಠವಾಗಬೇಕಾಗಿದೆ. ಪ್ರತಿದಿನ ಅರ್ಧ ಗಂಟೆಅದನ್ನು ಪಠಣ ಮಾಡಿ ಅನುಸರಿಸುವುದನ್ನು  ಮಕ್ಕಳಿಗೆ ಕಲಿಸಿಕೊಡುವ ಅಗತ್ಯವಿದೆ ಎಂದರು.

ಭಾರತ ನಿರ್ಮಾಣವಾಗಿರುವುದು ಕಾಸು, ಬಂಗಾರ, ವಜ್ರದಿಂದಲ್ಲ, ಸಂಸ್ಕಾರದಿಂದ. ಆದ್ದರಿಂದ ಆ ಸಂಸ್ಕಾರವನ್ನು ನಾವು ಮಕ್ಕಳಿಗೆ ಕಲಿಸಬೇಕಾಗಿದೆ. ದುಡ್ಡು ಮಾಡುವುದು ದೊಡ್ಡದಲ್ಲ, ಮಾಡಿದ ದುಡ್ಡನ್ನು ಸಂಸ್ಕಾರಯುತವಾಗಿ ಹೇಗೆ ಬಳಕೆ ಮಾಡಬೇಕು ಎನ್ನುವುದು ಮುಖ್ಯ. ಕಲ್ಲು ದೇವರಿಗೆ ಅರ್ಧ ಕೆಜಿ ತುಪ್ಪ ಸುರಿಯುವ ಬದಲು ಬಡ ಮಕ್ಕಳಿಗೆ ಆ ತುಪ್ಪ ನೀಡಿದರೇ ಅದುವೇ ಸಂಸ್ಕಾರ. ಆದರೆ, ನಾವು ಅದನ್ನು ಮಾಡುತ್ತಿಲ್ಲ. ಸಂಸ್ಕಾರ ನೀಡುವಾಗಲು ತಾರತಮ್ಯ ಮಾಡಲಾಗುತ್ತದೆ ಎಂದರು.

ಯಾವ ದೇವರು ಸಹ ನಮಗೆ ಬಂಗಾರದ ಕಳಸ ಮಾಡಿಸಿ, ಗೋಪುರ ಕಟ್ಟಿಕೊಡಿ ಎಂದು ಕೇಳಿಲ್ಲ. ನೀವು ಮಾಡುವ ತಪ್ಪಿನಿಂದಾಗಿ ಇಂದು ದೇವರ ಬಗ್ಗೆ ತಪ್ಪು ಕಲ್ಪನೆ ಮೂಡಿದೆ. ಯಾವ ದೇವರು ಸಹ ಇದನ್ನು ಕೊಡಿ ಎಂದು ಕೇಳುವುದೇ ಇಲ್ಲ. ಇದನ್ನು ಭಗವದ್ಗೀತೆ ಹೇಳುತ್ತದೆ. ಆದರೆ ನಾವು ಅದನ್ನು ಅನುಸರಿಸದೆ ಅದನ್ನು ತಪ್ಪಾಗಿ ಅರ್ಥೈಸಿ, ತಪ್ಪು ಸಂದೇಶ ನೀಡುತ್ತಿದ್ದೇವೆ ಎಂದರು.

ಇದನ್ನೂ ಓದಿ:ಯುವ ಮೋರ್ಚಾದಿಂದ ಸ್ವತ್ಛತಾ ಕಾರ್ಯಕ್ರಮ

ಉತ್ತರ ಕರ್ನಾಟಕದಲ್ಲಿ ಇಂದಿಗೂ ದಾಸೋಹ ಪರಂಪರೆಯಿದೆ. ಇದರಿಂದ ಇಲ್ಲಿ ದೇವರು ನೆಲೆಸಿದ್ದಾನೆ. ಇಂತಹ ದಾಸೋಹ ಪರಂಪರೆ ತೀರಾ ಅಗತ್ಯವಾಗಿದೆ. ನಿಮ್ಮ ದುಡಿಮೆಯಲ್ಲಿ ಒಂದಿಷ್ಟು ಪಾಲನ್ನು ದಾಸೋಹ ಅಥವಾ ಬಡ ಮಕ್ಕಳ ಕಲ್ಯಾಣಕ್ಕೆ ಮೀಸಲು ಇಟ್ಟರೆ ಅದುವೇ ನಿಜವಾದ ಸೇವೆ. ಪಾಲಕರೂ ಮಕ್ಕಳಿಗೆ ಬದುಕಿನ ಮೌಲ್ಯಗಳ ಪಾಠ ಹೇಳಿಕೊಡಬೇಕು. ಯಾವುದು ಮಾಡಬೇಕು ಯಾವುದು ಮಾಡಬಾರದು ಎನ್ನುವುದನ್ನು ತಿಳಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಚಕ್ರವರ್ತಿ ಅವರು ಶ್ರೀವಿನಯ ಗುರೂಜಿ ಅವರು ಪರಿಚಯಿಸಿದರು. ಆಡಳಿತ ಮಂಡಳಿಯ ಸಂಸ್ಥಾಪಕ ವಿ.ಆರ್‌. ಪಾಟೀಲ್‌, ಎಸ್‌.ಆರ್‌. ಪಾಟೀಲ್‌ ಹಾಗೂ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.