ದೇಶದ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್‍ ಕುಮಾರ್ ಕಟೀಲ್


Team Udayavani, Feb 1, 2021, 6:06 PM IST

nalin

ಬೆಂಗಳೂರು: ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಕ್ಕೆ ಆದ್ಯತೆ ಕೊಡುವ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದು, ಇದು ದೇಶವನ್ನು ವಿಶ್ವವಂದ್ಯವನ್ನಾಗಿ ಪರಿವರ್ತಿಸುವಲ್ಲಿ ಪೂರಕವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಮತ್ತೆರಡು ಮೆಟ್ರೊ ಮಾರ್ಗ (2ಎ ಮತ್ತು 2ಬಿ) ನಿರ್ಮಾಣಕ್ಕೆ 14,788 ಕೋಟಿ ರೂಪಾಯಿ ಮೀಸಲಿಟ್ಟಿರುವುದು ಮಹತ್ವದ ಕ್ರಮವಾಗಿದೆ. ನಗರದ ವಾಹನ ದಟ್ಟಣೆ ನಿವಾರಿಸುವಲ್ಲಿ ಮತ್ತು ಬೆಂಗಳೂರಿಗೆ ಇನ್ನಷ್ಟು ಕೈಗಾರಿಕೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಸಂಬಂಧ ಲಸಿಕೆ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ. ರೈತರ ಆದಾಯ ದ್ವಿಗುಣಗೊಳಿಸಲು ದೂರದೃಷ್ಟಿಯ ಯೋಜನೆ, ಯುವಕರಿಗೆ ಉದ್ಯೋಗಾವಕಾಶ ಹೆಚ್ಚಳಕ್ಕೆ ವಿಶೇಷ ಯೋಜನೆ, ಆರೋಗ್ಯ ಕ್ಷೇತ್ರ ಬಲಪಡಿಸಲು 64,180 ಕೋಟಿ, 500 ಅಮೃತ್ ನಗರಗಳಲ್ಲಿ 2.86 ಕೋಟಿ ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸುವುದು- ಇವೆಲ್ಲವೂ ದೇಶವನ್ನು ಅಭಿವೃದ್ಧಿ ಪಥದಲ್ಲಿ ಒಯ್ಯುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಂಗಳೂರಿನ ಹೋಟೆಲ್ ನಲ್ಲಿ ಯುವತಿಯ ಮೇಲೆ ದಾಳಿ ಪ್ರಕರಣ: ಪ್ರೇಮ ವೈಫಲ್ಯವೇ ಕಾರಣ, ಮೂವರ ಬಂಧನ

ಆತ್ಮನಿರ್ಭರ ಭಾರತ ಮತ್ತು ವೈಯಕ್ತಿಕ ಸ್ವಾವಲಂಬನೆ ನಿಟ್ಟಿನಲ್ಲಿ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ. ಮುಂದಿನ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಬಜೆಟ್ ಪೂರಕವಾಗಲಿದೆ. ಇದಕ್ಕಾಗಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಮತ್ತು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುವುದಾಗಿ ನಳೀನ್ ಕುಮಾರ್ ಕಟೀಲ್  ತಿಳಿಸಿದ್ದಾರೆ.

ಇದನ್ನೂ ಓದಿ:  2021 Budget: ಇದು ರೈತ ಪರ ಹಾಗೂ ಗ್ರಾಮೀಣ ಭಾರತದ ಬಜೆಟ್: ಪ್ರಧಾನಿ ನರೇಂದ್ರ ಮೋದಿ

ಟಾಪ್ ನ್ಯೂಸ್

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.