ಪಶುಪಾಲನೆಗೆ ಬಜೆಟ್ ನಲ್ಲಿ ಉತ್ತೇಜನ ನೀಡಲಾಗಿದೆ: ಸಚಿವ ಪ್ರಭು ಚವ್ಹಾಣ್
Team Udayavani, Feb 1, 2021, 6:24 PM IST
ಬೆಂಗಳೂರು: ದೇಶ ಕೋವಿಡ್ ಸಂಕಷ್ಟದಿಂದ ಈಗಷ್ಟೇ ಚೆತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಶಾದಾಯಕ ಬಜೆಟ್ ನೀಡಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.
ಮೂಲ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಿದ್ದು ಸ್ವಾಗತಾರ್ಹ, ರೈತರು ಪಶುಪಾಲಕರಿಗೆ ಉತ್ತೇಜನ ನೀಡಲು ರೂ.16.5 ಲಕ್ಷ ಕೋಟಿ ಸಾಲ ಯೋಜನೆಗೆ ಉದ್ದೇಶಿಸಿದ್ದು ಸಂತಸ ತಂದಿದೆ. ಪಶುಸಂಗೋಪನೆ, ಡೈರಿ ಮತ್ತು ಮೀನುಗಾರಿಕೆಗೆ ಹೆಚ್ಚಿನ ಸಾಲ ಒದಗಿಸುವ ಅವಕಾಶ ಮಾಡಿದ್ದು ಪಶು ಪಾಲನೆ, ಡೈರಿ ಮತ್ತು ಜಾನುವಾರು ಸಾಕಣೆದಾರರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ: ದೇಶದ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್ ಕುಮಾರ್ ಕಟೀಲ್
ಅಲ್ಲದೇ ಪಶುಪಾಲನೆ, ಹೈನುಗಾರಿಕೆ, ಕುಕ್ಕುಟ ಉದ್ಯಮಕ್ಕೆ ರೂ. 30 ಸಾವಿರ ಕೋಟಿಯಿಂದ ರೂ.40 ಸಾವಿರ ಕೋಟಿಗೆ ಹೆಚ್ಚಳ ಮಾಡಿದ್ದು ಈ ಉದ್ಯಮವನ್ನು ಅವಲಂಬಿಸಿರುವವರಲ್ಲಿ ಆಶಾ ಭಾವನೆ ಮೂಡಿಸಿದಂತಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ದೇಶವನ್ನು ಸಂಕಷ್ಟದಿಂದ ಪಾರು ಮಾಡಲಿದೆ ಎಂದು ಪ್ರಭು ಚವ್ಹಾಣ್ ಹೇಳಿದ್ದಾರೆ.
ಇದನ್ನೂ ಓದಿ: ಮಂಗಳೂರಿನ ಹೋಟೆಲ್ ನಲ್ಲಿ ಯುವತಿಯ ಮೇಲೆ ದಾಳಿ ಪ್ರಕರಣ: ಪ್ರೇಮ ವೈಫಲ್ಯವೇ ಕಾರಣ, ಮೂವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ