ಸಹಕಾರಿ ತತ್ವದಲ್ಲಿ ಸಹಕಾರವೇ ಮೊದಲು: ನಾಡಗೌಡ

ನಗರದಲ್ಲಿ ಕೆಎಂಎಫ್‌ ಉಪವಿಭಾಗದ ಕಚೇರಿಯನ್ನು ಗಣ್ಯರು ಉದ್ಘಾಟಿಸಿದರು.

Team Udayavani, Feb 1, 2021, 6:56 PM IST

1-24

ಸಿಂಧನೂರು: ರೈತರ ಕಲ್ಯಾಣವೇ ನಮ್ಮ ಮುಖ್ಯ ಧ್ಯೇಯ. ರಾಯಚೂರು, ಬಳ್ಳಾರಿ, ಕೊಪ್ಪಳ ಹಾಲು ಉತ್ಪಾದಕರ ಒಕ್ಕೂಟವೂ ಆ ನಿಟ್ಟಿನಲ್ಲಿ
ಮುನ್ನಡೆಯುತ್ತಿದ್ದು, ಸಹಕಾರವೇ ಮೊದಲು ಎಂಬ ಸಿದ್ಧಾಂತವನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು
ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ನಗರದಲ್ಲಿ ಕೆಎಂಎಫ್‌ನ ಉಪವಿಭಾಗೀಯ ಕಚೇರಿ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸ ಮಾತನಾಡಿದರು. ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿರುವ ನನಗೆ ಗೊತ್ತಿರುವ ಪ್ರಕಾರ, ಇಲ್ಲಿ ಮೋಸಕ್ಕೆ ಅವಕಾಶವಿಲ್ಲ. ಇರುವ ಸೌಲಭ್ಯಗಳನ್ನು
ಸದ್ಬಳಕೆ ಮಾಡಿಕೊಂಡು ಮುನ್ನಡೆಯುವವರಿಗೆ ಭವಿಷ್ಯವಿದೆ ಎಂದರು.

ನಯಾಪೈಸೆಯೂ ಬೇಡ: ಕೆಎಂಎಫ್‌ ಅಧ್ಯಕ್ಷ, ಹಗರಿಬೊಮ್ಮನಹಳ್ಳಿ ಶಾಸಕ ಎಸ್‌.ಭೀಮಾನಾಯ್ಕ ಕಚೇರಿ ಉದ್ಘಾಟಿಸಿ ಮಾತನಾಡಿ, ಕೊರೊನಾ ಸಂದರ್ಭದಲ್ಲಿ 2 ಲಕ್ಷ 35 ಸಾವಿರ ಲೀ. ಸಂಗ್ರಹಣಾ ಸಾಮರ್ಥ್ಯದ ಒಕ್ಕೂಟಕ್ಕೆ ಹಾಲು ಸಂಗ್ರಹಣೆಯಲ್ಲಿ
ನಷ್ಟವಾದರೂ ರೈತರಿಗೆ ನಷ್ಟ ಮಾಡಿಲ್ಲ. ರಾಜ್ಯ 16 ಒಕ್ಕೂಟಗಳ ಪೈಕಿ ರಾಯಚೂರು, ಕೊಪ್ಪಳ, ಬಳ್ಳಾರಿ ಒಕ್ಕೂಟ ಮಾತ್ರ ರೈತರಿಗೆ ಲಾಭ ಕೊಟ್ಟಿದೆ. ಜೂನ್‌, ಜುಲೈನಲ್ಲಿ 40 ಲಕ್ಷ ರೂ.ನಷ್ಟವಾದರೂ ಅದರ ಹೊರೆ ರೈತರ ಮೇಲೆ ಹೇರಿಲ್ಲ. ಆದರೂ, ನಾವು ಸಿಂಧನೂರಿನಲ್ಲಿ 70 ಕೋಟಿ ರೂ. ವೆಚ್ಚದ ಪಶು ಆಹಾರ ಘಟಕ, 20 ಕೋಟಿ ರೂ. ವೆಚ್ಚದ ಮೆಗಾ ಡೈರಿ ಸ್ಥಾಪಿಸಲು ಚಿಂತನೆ ನಡೆಸಲಾಗಿದೆ. ಬಳ್ಳಾರಿಯಲ್ಲಿ 120 ಕೋಟಿ ರೂ. ವೆಚ್ಚದ ಮೆಗಾ ಡೈರಿ ಸ್ಥಾಪನೆಗೆ ಮುಂದಾದರೂ ಅಲ್ಲಿನ ಜಿಲ್ಲಾಧಿಕಾರಿ ಸೂಕ್ತ ಜಾಗ ತೋರಿಸದ್ದರಿಂದ 6 ತಿಂಗಳಿಂದ
ವಿಳಂಬವಾಗಿದೆ ಎಂದರು.

ಕೆಎಂಎಫ್‌ ಅಧ್ಯಕ್ಷನಾದ ಬಳಿಕ ನನಗೆ ಸಿಕ್ಕ 30 ಲಕ್ಷ ರೂ. ವೆಚ್ಚದ ವಾಹನ ತಿರಸ್ಕರಿಸಿದ್ದೇನೆ. ಹಾಗೆ ಟಿಎ, ಡಿಎ ಅಂತಾ ಕೊಟ್ಟ 1 ಲಕ್ಷ 17 ಸಾವಿ ರೂ.ಗಳನ್ನು ಕೆಎಂಎಫ್‌ಗೆ ವಾಪಸ್‌ ಕೊಟ್ಟಿರುವೆ. ಅಷ್ಟೇ ಅಲ್ಲ; ತಿಂಗಳಿಗೆ 3 ಸಾವಿರ ರೂ.ಡೀಸೆಲ್‌ ಖರ್ಚು ಹಾಕಲು ಅವಕಾಶವಿದ್ದರೂ ಆ ಮೊತ್ತವನ್ನು ನಾನೊಬ್ಬ ಶಾಸಕನಾಗಿ ಪಡೆದುಕೊಂಡಿಲ್ಲ ಎಂದರು. ಪಿಎಲ್‌ಡಿಬಿ ಬ್ಯಾಂಕ್‌ ಅಧ್ಯಕ್ಷ ಎಂ.ದೊಡ್ಡ
ಬಸವರಾಜ್‌, ಜಿ.ಪಂ ಸದಸ್ಯ ಅಮರೇಗೌಡ ವಿರೂಪಾಪುರ, ನಗರಸಭೆ ಸದಸ್ಯ ಎಚ್‌.ಬಾಷಾ,
ರಾಬಕೋ ನಿರ್ದೇಶಕರಾದ ಜಿ.ಸತ್ಯನಾರಾಯಣ, ಎಂ.ಸತ್ಯನಾರಾಯಣ, ಭೀಮನಗೌಡ, ಶ್ರೀಕಾಂತಪ್ಪ, ಜಿ.ನಾಗವೇಣಿ, ಕವಿತಾ ಗುಳಗಣ್ಣವರ್‌, ನೆಕ್ಕಂಟಿ ಸೀತಾರಾಮಲಕ್ಷ್ಮಿ, ಆತ್ಮಕೂರಿ ರವೀಂದ್ರ ಸೇರಿದಂತೆ ಇತರರು ಇದ್ದರು. ಶಿಕ್ಷಕ ವೀರೇಶ ಗೋನವಾರ ನಿರೂಪಿಸಿದರು.

ಓದಿ: ಮಕ್ಕಳ ಸಾಧನೆಯಲ್ಲಿ ತಂದೆ-ತಾಯಿ ಪಾತ್ರ ಮುಖ್ಯ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.