ಹುಬ್ಬಳ್ಳಿಯಲ್ಲಿ ACB ಬೇಟೆ: ಲಕ್ಷಾಂತರ ರೂ. ಮೌಲ್ಯದ ಗರಿ ಗರಿ ನೋಟು, ಚಿನ್ನಾಭರಣ ಪತ್ತೆ
Team Udayavani, Feb 2, 2021, 3:17 PM IST
ಹುಬ್ಬಳ್ಳಿ: ನೀರಾವರಿ ಇಲಾಖೆ ಇಇ ದೇವರಾಜ ಶಿಗ್ಗಾಂವಿ ಅವರ ಬ್ಯಾಂಕ್ ಲಾಕರ್ ಓಪನ್ ಮಾಡಲಾಗಿದ್ದು, ಲಕ್ಷಾಂತರ ರೂ. ನಗದು, ಚಿನ್ನಾಭರಣ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಬ್ಯಾಂಕ್ ಲಾಕರ್ ನಲ್ಲಿ ಲಕ್ಷಾಂತರ ರೂ. ಮೌಲ್ಯದ 500ರೂ. ಮುಖಬೆಲೆಯ ಗರಿ ಗರಿ ನೋಟುಗಳು ಪತ್ತೆಯಾಗಿದೆ. ಇಂಡಿಯನ್ ಓವರ್ ಸಿಸ್ ಬ್ಯಾಂಕ್ ನಲ್ಲಿ 56.50 ಲಕ್ಷ ರೂ. ನಗದು ಹಾಗೂ ಅರ್ಧ ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಪತ್ನಿ, ಅಳಿಯನ ಹೆಸರಿನಲ್ಲಿ ಬ್ಯಾಂಕ್ ಲಾಕರ್ ಹೊಂದಲಾಗಿದೆ ಎಂದು ಹೇಳಲಾಗುತ್ತಿದೆ.
ಇದಕ್ಕೂ ಮೊದಲು ಗೋಕುಲ ರಸ್ತೆ ಕೋಟಿಲಿಂಗನಗರ ಎಂ.ಸಿ. ಪಾಟೀಲ ಬಡಾವಣೆ ಮಲ್ಲಿಕಾರ್ಜುನ ಉದ್ಯಾನವನ ಬಳಿಯ ದೇವರಾಜ ಶಿಗ್ಗಾವಿ ಅವರ ತಾಯಿಯು ಪರಸ್ಥಳಕ್ಕೆ ತೆರಳಿದ್ದು, ಅವರ ಬರುವಿಕೆಗಾಗಿ ಎಸಿಬಿ ಅಧಿಕಾರಿಗಳು ಸ್ಥಳದಲ್ಲೇ ಮುಕ್ಕಾಂ ಹೂಡಿದ್ದರು.
ಇದನ್ನೂ ಓದಿ: “ಮಹಾ ಯಡವಟ್ಟು”: 12 ಮಕ್ಕಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್: ಮಕ್ಕಳು ಅಸ್ವಸ್ಥ
ಬಳ್ಳಾರಿಯಲ್ಲಿ ವಿಮ್ಸ್ ಮಾಜಿ ನಿರ್ದೇಶಕ ಶ್ರೀನಿವಾಸ ಮನೆ ಮೇಲೂ ಎಸಿಬಿ ದಾಳಿ ನಡೆದಿದ್ದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ವಿಮ್ಸ್ ನಿರ್ದೇಶಕರಾಗಿ ಬಳ್ಳಾರಿಯಲ್ಲಿ ಸೇವೆ ಸಲ್ಲಿಸಿದ್ದ ಶ್ರೀನಿವಾಸ ಅವರು, ಸದ್ಯ ಕೊಪ್ಪಳದ ಔಷಧ ವಿಭಾಗದ ಹೆಚ್.ಓ. ಡಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇಂದು ಮುಂಜಾನೆಯಿಂದಲೇ ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎಸಿಬಿ ದಾಳಿ ನಡೆದಿದೆ. ಈ ವೇಳೆ ನಗದು, ಚಿನ್ನಾಭರಣ ಸೇರಿದಂತೆ ಹಲವು ಅಕ್ರಮ ಸಂಪತ್ತು ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ತ್ರಿಪುರಾ-ಬಾಂಗ್ಲಾ ಗಡಿಯಲ್ಲಿ ಗೋ ಕಳ್ಳ ಸಾಗಣೆ, ಬಿಎಸ್ ಎಫ್ ಮೇಲೆ ಹಲ್ಲೆ: ಗುಂಡಿನ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
MUST WATCH
ಹೊಸ ಸೇರ್ಪಡೆ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ