ಕನ್ನಡ ಆಡಳಿತ-ಸಂವಹನ ಭಾಷೆಯಾಗಲಿ : ಡಾ| ವಿಜಯಾದೇವಿ


Team Udayavani, Feb 2, 2021, 7:25 PM IST

Shimoga District 15th Kannada Literary Conference

ಶಿವಮೊಗ್ಗ: ರಾಜ್ಯದಲ್ಲಿ ಸಂಪೂರ್ಣವಾಗಿ ಕನ್ನಡ ಭಾಷೆ ಅನುಷ್ಠಾನಗೊಳಿಸುವ ಬಗ್ಗೆ ಕನ್ನಡದ ಇಡೀ ಸಮುದಾಯ ಜಾಗೃತಗೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಶಿವಮೊಗ್ಗ ಜಿಲ್ಲಾ 15 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಡಾ|ವಿಜಯಾದೇವಿ ಹೇಳಿದರು.

ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರ ಜತೆ ಸಂವಾದ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯವಾಗಿ ಸೂಚನಾಪತ್ರ, ನ್ಯಾಯಾಲಯದ ಆದೇಶಗಳು ಆಂಗ್ಲ ಭಾಷೆಯಲ್ಲಿ ಬರುತ್ತವೆ. ನ್ಯಾಯಾಲಯದ ಆದೇಶ ಕನ್ನಡದಲ್ಲಿ ಬರಬೇಕೆಂದು ಹೇಳುವ ಹಕ್ಕು ಸಾಹಿತಿಗಳಿಗಿಲ್ಲ. ಆದರೆ ಆದೇಶ ಪ್ರತಿ ಸ್ವೀಕರಿಸುವವರಿಗೆ ಅರ್ಥವಾಗುವ ಭಾಷೆಯಲ್ಲಿ ಇರಬೇಕು ಎಂಬುದು ತಮ್ಮ ಅನಿಸಿಕೆ ಎಂದರು. ಕನ್ನಡ ಸಮುದಾಯ ಜಾಗೃತಗೊಂಡು ರಾಜ್ಯದ ಎಲ್ಲ ಆಡಳಿತಾತ್ಮಕ ವಿಷಯ, ಕಚೇರಿಗಳಲ್ಲಿ ಹಾಗೂ ಸಂವಹನ ನಡೆಸಲು ಎಲ್ಲೆಲ್ಲಿ ಕನ್ನಡ ಭಾಷೆ ಬಳಸಲು ಸಾಧ್ಯವೋ ಅಲ್ಲೆಲ್ಲಾ ಕನ್ನಡವನ್ನೇ ಬಳಸುವಂತೆ ಒತ್ತಾಯಿಸಬೇಕಾಗಿರುವುದು ಕನ್ನಡಿಗರ ಕರ್ತವ್ಯವಾಗಿದೆ ಎಂದು ಅಭಿಪ್ರಾಯಟ್ಟರು.

ಕುವೆಂಪು ಅವರು ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳಲ್ಲಿಯೂ ಆಯಾ ವಿಷಯದ ಪಠ್ಯಕ್ರಮಗಳನ್ನು ಮಕ್ಕಳಿಗೆ ಕನ್ನಡದಲ್ಲಿಯೂ ಬೋಧನೆ ಮಾಡುವಂತೆ ಹಾಗೂ ವಿಷಯದ ಪಠ್ಯಗಳು ಕನ್ನಡದಲ್ಲಿ ಸಿಗುವಂತಾಗಬೇಕು ಎಂದಿದ್ದರು. ವಿಶ್ವವಿದ್ಯಾಲಯದ ಪ್ರತಿ ವಿಭಾಗ ಹಾಗೂ ಅದರ ಕಚೇರಿಗಳಲ್ಲಿ ಕನ್ನಡ ಬಳಸುವ ಬಗ್ಗೆ ಕ್ರಮ ಕೈಗೊಳ್ಳುವ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು. ಕನ್ನಡ ಭಾಷಾ ಸಾಹಿತ್ಯವೇ ನನ್ನ ಜೀವನದ ಸಾಧನೆಗೆ ಪ್ರೇರಣೆ. ಕನ್ನಡ ಸಾಹಿತ್ಯವು ಕಲಿಸಿದ ಜೀವನ ಮಾರ್ಗದಲ್ಲಿ ಸಾಗಿಬಂದು ಈ ವರೆಗಿನ ಕಾರ್ಯಗಳನ್ನು ಮಾಡಿದ್ದೇನೆ. ಎಲ್ಲ ಸಾಧನೆಗೂ ಕನ್ನಡ ಭಾಷೆಯೇ ಪ್ರೇರಕ ಶಕ್ತಿಯಾಗಿದೆ. ಮಕ್ಕಳಿಗೆ ಕನ್ನಡದ ಶ್ರೇಷ್ಠ ಸಾಹಿತ್ಯದ ಬಗ್ಗೆ ಪರಿಚಯಿಸುವ ಕೆಲಸ ಆಗಬೇಕು ಎಂದರು.

ಇದನ್ನೂ ಓದಿ :ಅನೈತಿಕ ಸಂಬಂಧ ; ಪತಿಯಿಂದಲೇ ಪತ್ನಿ, ಪ್ರಿಯಕರನ ಕೊಲೆ

ಜಿಲ್ಲಾ ಕಸಾಪ ಕಾರ್ಯದರ್ಶಿ ರುದ್ರಮುನಿ ಸಜ್ಜನ್‌ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಚ್‌.ಎನ್‌. ಮಹಾರುದ್ರ ಆಶಯ ನುಡಿಗಳನ್ನಾಡಿದರು. ಮಮತಾ ಹೆಗ್ಡೆ, ಡಾ|ಎನ್‌.ಆರ್‌. ಮಂಜುಳಾ, ಲಕ್ಷ್ಮೀಶಾಸ್ತ್ರಿ, ರುಕ್ಮಿಣಿ ಆನಂದ್‌, ಶಾಲಿನಿ ರಾಮಸ್ವಾಮಿ, ವಿನೋದ ಆನಂದ, ಜಿ.ಎಸ್‌. ಸರೋಜಾ, ಶೀಲಾ ಸುರೇಶ್‌, ಕೆ.ವೈ. ರಾಮಚಂದ್ರಪ್ಪ, ಶ್ರೀರಂಜಿನಿ ದತ್ತಾತ್ರಿ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.