ಯಶಸ್ವಿ ಅನುಷ್ಠಾನವಾಗಲಿ ಗುಜರಿ ನೀತಿ


Team Udayavani, Feb 3, 2021, 7:20 AM IST

ಯಶಸ್ವಿ ಅನುಷ್ಠಾನವಾಗಲಿ ಗುಜರಿ ನೀತಿ

ಸೋಮವಾರ ಮಂಡನೆಯಾದ ಕೇಂದ್ರ ಬಜೆಟ್‌ ಮೂಲಸೌಕರ್ಯಾ ಅಭಿವೃದ್ಧಿಗೆ ಹಾಗೂ ಸ್ವಾಸ್ಥ್ಯವಲಯಕ್ಕೆ ಕೊಟ್ಟಿರುವ ಆದ್ಯತೆ ಗಮನಾರ್ಹ. ಅದರ ಜತೆಗೆ ಪರಿಸರ ರಕ್ಷಣೆಯ ನಿಟ್ಟಿನಲ್ಲೂ ಅದು ಮಹತ್ವ ಪೂರ್ಣ ಯೋಜನೆಯ ಅನುಷ್ಠಾನಕ್ಕೆ ಮುಂದಾಗಿರುವುದೂ ಶ್ಲಾಘನೀಯ. ಈ ಬಜೆಟ್‌ನಲ್ಲಿ ಕೇಂದ್ರ ಸರಕಾರ “ವಾಹನ ಗುಜರಿ’ ನೀತಿಯನ್ನು ಘೋಷಣೆ ಮಾಡಿದೆ.

ಇದರನ್ವಯ 20 ವರ್ಷ ದಾಟಿದ ಖಾಸಗಿ ವಾಹನಗಳು ಹಾಗೂ 15 ವರ್ಷ ತುಂಬಿದ ವಾಣಿಜ್ಯ ವಾಹನ ಗಳು ಕಡ್ಡಾಯ ಫಿಟೆ°ಸ್‌ ಪರೀಕ್ಷೆಗೆ ಒಳಪಡಬೇಕು. ಆಗ ಅವು ರಸ್ತೆಯಲ್ಲಿ ಓಡಾಡಲು ಅರ್ಹವಾಗಿವೆಯೋ ಅಥವಾ ಗುಜರಿ ಸೇರ ಬೇಕೋ ಎಂದು ನಿರ್ಧರಿಸಲಾಗುತ್ತದೆ. ಜತೆಗೆ 15 ದಿನಗಳಲ್ಲೇ ಹೊಸ ನೀತಿಯ ಅನುಷ್ಠಾನವನ್ನೂ ಮಾಡಲಿರುವುದಾಗಿ ಕೇಂದ್ರ ಹೇಳಿದೆ.

ನಿಸ್ಸಂಶಯವಾಗಿಯೂ ಪರಿಸರದ ದೃಷ್ಟಿಯಿಂದ ಹಾಗೂ ವ್ಯಾವ ಹಾರಿಕ ದೃಷ್ಟಿಯಿಂದ ಇದೊಂದು ಗಮನಾರ್ಹ ನಡೆ. ಇಂದು ದೇಶದ ಮಾಲಿನ್ಯ ಕಾರಕಗಳಲ್ಲಿ ಹಳೆಯ ವಾಹನಗಳ ಪಾತ್ರ ಪ್ರಮುಖವಾಗಿದೆ. ಅಲ್ಲದೇ ಇವುಗಳಿಂದ ಇಂಧನ ಬಳಕೆಯಲ್ಲಿ ಅನಗತ್ಯ ಹೆಚ್ಚಳವೂ ಆಗುತ್ತಿದೆ. ಹೀಗಾಗಿ ಅನಗತ್ಯ ಹಾಗೂ ಹಾನಿಕಾರಕ ವಾಹನಗಳನ್ನು ಗುಜರಿಗೆ ಕಳುಹಿಸುವ ಈ ನೀತಿ ಹಲವು ರೀತಿಗಳಿಂದ ಪರಿಣಾಮಕಾರಿ ಯಾಗುವ ನಿರೀಕ್ಷೆಯಿದೆ. ಈ ವಾಹನ ಗುಜರಿ ನೀತಿಯಿಂದ ಪರಿಸರ ರಕ್ಷಣೆಯಷ್ಟೇ ಅಲ್ಲದೇ, 10 ಸಾವಿರ ಕೋಟಿ ರೂಪಾಯಿಗಳಷ್ಟು ಹೊಸ ಹೂಡಿಕೆ ಹರಿದುಬರುವ ಹಾಗೂ 50 ಸಾವಿರದಷ್ಟೂ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.

ಕೆಲವೇ ದಿನಗಳ ಹಿಂದಷ್ಟೇ ಕೇಂದ್ರ ಸರಕಾರ ಪರಿಸರಕ್ಕೆ ಮಾರಕವಾದ ಹಳೆಯ ಖಾಸಗಿ ವಾಹನಗಳ ವಿರುದ್ಧ ಹಸಿರು ತೆರಿಗೆ ಪರಿಕಲ್ಪನೆಯ ಮೂಲಕ ಸಮರ ಘೋಷಿಸಿತ್ತು. 8 ವರ್ಷಗಳಿಗಿಂತ ಹಳೆಯದಾಗಿರುವ ವಾಹನಗಳಿಗೆ ಶೀಘ್ರದಲ್ಲಿಯೇ ಹಸರು ತೆರಿಗೆ ಹೇರುವ ಪ್ರಸ್ತಾವಕ್ಕೆ ಕೇಂದ್ರೀಯ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ ಒಪ್ಪಿಗೆ ನೀಡಿದೆ. ಈ ಕುರಿತು ರಾಜ್ಯಗಳ ಅಭಿಪ್ರಾಯ ಸಂಗ್ರಹಿಸಿ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದೂ ಅದು ಹೇಳಿದೆ. ಈ ಎಲ್ಲ ಸಂಗತಿಗಳು ಹಳೆಯ ವಾಹನಗಳ ವಿಚಾರದಲ್ಲಿ ಕೇಂದ್ರ ಸರಿಯಾದ ಹೆಜ್ಜೆಯಿಡುತ್ತಿದೆ ಎನ್ನುವುದನ್ನು ಸೂಚಿಸುತ್ತದೆ. ಸೆಂಟರ್‌ ಫಾರ್‌ ಸೈನ್ಸ್‌ ಆ್ಯಂಡ್‌ ಎನ್‌ವೈರ್ನಮೆಂಟ್‌(ಸಿಎಸ್‌ಇ) ಪ್ರಕಾರ 2025ರ ವೇಳೆಗೆ ಭಾರತದಲ್ಲಿ 2 ಕೋಟಿಗೂ ಹೆಚ್ಚು ಹಳೆಯ ವಾಹನಗಳ ಬೃಹತ್‌ ಭಾರ ಸೃಷ್ಟಿಯಾಗಲಿದೆ. ಈ ವಾಹನಗಳು ವಾತಾವರಣಕ್ಕೆ ಭಾರೀ ಹಾನಿ ಮಾಡುವ ಸಾಧ್ಯತೆ ಇಲ್ಲದಿಲ್ಲ. 2014ರಲ್ಲಿ ಐಐಟಿ ಬಾಂಬೆ ದೇಶಾದ್ಯಂತ ನಡೆಸಿದ ಅಧ್ಯಯನದ ಪ್ರಕಾರ 2005ಕ್ಕೂ ಪೂರ್ವದ ವಾಹನಗಳೇ ಇಂದು ದೇಶದಲ್ಲಿ ವಾಹನಗಳಿಂದ ಉಂಟಾಗುತ್ತಿರುವ ವಾಯುಮಾಲಿನ್ಯದಲ್ಲಿ 70 ಪ್ರತಿಶತ ಕಾರಣೀಕರ್ತವಾಗಿವೆ. ಹೀಗಾಗಿ ಗುಜರಿ ನೀತಿ ಹಾಗೂ ಸಂಭಾವ್ಯ ಹಸರು ತೆರಿಗೆ ಪದ್ಧತಿ ಈ ಸಮಸ್ಯೆಗೆ ಯಾವ ಪ್ರಮಾಣದಲ್ಲಿ ಪರಿಹಾರ ಒದಗಿಸಲಿವೆಯೋ ಎಂಬ ನಿರೀಕ್ಷೆಯಂತೂ ಹುಟ್ಟಿಕೊಂಡಿದೆ.

ಟಾಪ್ ನ್ಯೂಸ್

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.