ಜನವರಿ 26 ಹಿಂಸಾಚಾರ ಕೇಸ್: ಪ್ರಮುಖ ಆರೋಪಿ ದೀಪ್ ಮಾಹಿತಿ ಕೊಟ್ರೆ 1 ಲಕ್ಷ ಬಹುಮಾನ
ಪ್ರಕರಣದಲ್ಲಿ ಇವರೆಲ್ಲ ಶಾಮೀಲಾಗಿದ್ದು, ಇವರ ಹೆಸರನ್ನು ಎಫ್ ಐಆರ್ ನಲ್ಲಿ ದಾಖಲಿಸಲಾಗಿದೆ
Team Udayavani, Feb 3, 2021, 11:10 AM IST
ನವದೆಹಲಿ: ಗಣರಾಜ್ಯೋತ್ಸವ(ಜ.26) ದಿನಾಚರಣೆಯಂದು ರೈತರ ಟ್ರ್ಯಾಕ್ಟರ್ ರಾಲಿ ವೇಳೆ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದೀಪ್ ಸಿಧು ಸೇರಿದಂತೆ ಪ್ರಮುಖ ಆರೋಪಿಗಳ ಕುರಿತು ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಬುಧವಾರ (ಫೆ.3, 2021) ಘೋಷಿಸಿದ್ದಾರೆ.
ಇದನ್ನೂ ಓದಿ:ಸುಬ್ರಹ್ಮಣ್ಯ: ಶೌಚಾಲಯದಲ್ಲಿ ಬಂಧಿಯಾದ ಚಿರತೆ ಹಿಡಿಯಲು ಕಾರ್ಯಚರಣೆ ಆರಂಭಿಸಿದ ಅರಣ್ಯ ಇಲಾಖೆ
ವರದಿಗಳ ಪ್ರಕಾರ, ಪ್ರಮುಖ ಆರೋಪಿಗಳಾದ ನಟ ದೀಪ್ ಸಿಧು, ಜುಗ್ ರಾಜ್ ಸಿಂಗ್, ಗುರ್ಜೋತ್ ಸಿಂಗ್ ಮತ್ತು ಗುರ್ಜಂತ್ ಸಿಂಗ್ ಕುರಿತು ಮಾಹಿತಿ ನೀಡಿದವರಿಗೆ ತಲಾ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ.
ಜನವರಿ 26ರ ಹಿಂಸಾಚಾರದಲ್ಲಿ ಶಾಮೀಲಾದ ಜಜ್ಬೀರ್ ಸಿಂಗ್, ಬೂಟಾ ಸಿಂಗ್, ಸುಖ್ ದೇವ್ ಸಿಂಗ್ ಮತ್ತು ಇಕ್ಬಾಲ್ ಸಿಂಗ್ ಕುರಿತು ಮಾಹಿತಿ ನೀಡಿದವರಿಗೆ ತಲಾ 50 ಸಾವಿರ ರೂಪಾಯಿ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ.
ಜನವರಿ 26ರ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಮತ್ತು ಕೆಂಪುಕೋಟೆಯಲ್ಲಿ ಧಾರ್ಮಿಕ ಬಾವುಟ(ನಿಶಾನ್ ಸಾಹೀಬ್) ಹಾರಿಸಿದ ಪ್ರಕರಣದಲ್ಲಿ ಇವರೆಲ್ಲ ಶಾಮೀಲಾಗಿದ್ದು, ಇವರ ಹೆಸರನ್ನು ಎಫ್ ಐಆರ್ ನಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರೈತರ ಟ್ರ್ಯಾಕ್ಟರ್ ರಾಲಿ ವೇಳೆ ನಡೆದ ಹಿಂಸಾಚಾರ ಮತ್ತು ಧಾರ್ಮಿಕ ಬಾವುಟ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ಈವರೆಗೂ ಗುರುತಿಸಿರುವ 12 ಮಂದಿ ಗಲಭೆಕೋರರ ವಿರುದ್ಧ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ