ಬಂಟ್ವಾಳ: ಬಂಗಾರ ದೋಚಲು ಕೆಲಸದಾಕೆಯ ಖತರ್ನಾಕ್ ಪ್ಲ್ಯಾನ್: ಕೊನೆಗೂ ಸಾವಿನ ರಹಸ್ಯ ಬಯಲು !


Team Udayavani, Feb 3, 2021, 6:01 PM IST

bantwal

ಬಂಟ್ವಾಳ: ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಪೊಲೀಸ್ ತನಿಖೆಯ ವೇಳೆ ಕೊಲೆಯಾಗಿ ತಿರುವು ಪಡೆದಿದ್ದು, ಕೊಲೆ ಆರೋಪಿಗಳನ್ನು ಬಂಟ್ವಾಳ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕೆಲಸದಾಕೆಯೇ  ಸ್ನೇಹಿತರ ಜೊತೆ ಸೇರಿಕೊಂಡು ವೃದ್ಧೆಯನ್ನು ಕೊಲೆ ಮಾಡಿ ಆಭರಣ ದೋಚಲು ಯೋಜನೆ ರೂಪಿಸಿದ್ದರು. ಆದರೇ ಬಂಟ್ವಾಳ ಪೋಲೀಸರ ಕಾರ್ಯಕ್ಷಮತೆಯಿಂದ ಕೊಲೆ ಪ್ರಕರಣ ಬಯಲಾಗಿ  ಆರೋಪಿಗಳು ಅಂದರ್ ಆಗಿದ್ದಾರೆ. .

ಅಮ್ಡಾಡಿ ಗ್ರಾಮದ ಎಲ್ಮಾ ಪ್ರಶ್ಚಿತ ಬರೆಟ್ಟೋ(25), ನರಿಕೊಂಬು ನಿವಾಸಿಯಾದ ಸತೀಶ ಮತ್ತು ಚರಣ್‌ ಬಂಧಿತ ಆರೋಪಿಗಳು.

ಇದನ್ನೂ ಓದಿ:  ಸತತ 3ನೇ ದಿನವೂ ಬಾಂಬೆ ಷೇರುಪೇಟೆ ಭರ್ಜರಿ ವಹಿವಾಟು; 50 ಸಾವಿರ ಗಡಿ ದಾಟಿದ ಸೆನ್ಸೆಕ್ಸ್

ಘಟನೆಯ ವಿವರ

ಜ. 26 ರಂದು ಬಂಟ್ವಾಳ ತಾಲೂಕು ಅಮ್ಮುಂಜೆ ಗ್ರಾಮದಲ್ಲಿ ಬೆನೆಡಿಕ್ಟ್‌ ಕಾರ್ಲೋ [72] ಎಂಬ ಮಹಿಳೆಯು ಮನೆಯಲ್ಲಿ ಸಾವನ್ನಪ್ಪಿದ್ದು ಇದೊಂದು  ಅಸಹಜ ಸಾವು ಎಂದು  ಬಂಟ್ವಾಳ ಗ್ರಾಮಾಂತರ ಪೋಲೀಸ್  ಠಾಣೆಯಲ್ಲಿ ಪ್ರಕರಣ  ದಾಖಲಾಗಿತ್ತು.

ಫೆ. 02 ರಂದು ಮೃತೆ ಬೆನೆಡಿಕ್ಟ್‌ ಕಾರ್ಲೋ ರವರ ಪುತ್ರ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಆಗಮಿಸಿ ತಮ್ಮ ತಾಯಿಯ ಸಾವಿನ ಬಗ್ಗೆ ಅನುಮಾನವಿದೆ ಎಂದು ಹೇಳಿ ದೂರು ನೀಡಿದ್ದರು.  ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು  ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಈ ವೇಳೆ ಬೆನೆಡಿಕ್ಟ್‌ ಕಾರ್ಲೋ ರವರನ್ನು ನೋಡಿಕೊಳ್ಳಲು ನೇಮಿಸಿದ್ದ ಅಮ್ಡಾಡಿ ಗ್ರಾಮದ  ಎಲ್ಮಾ ಪ್ರಶ್ಚಿತ ಬರೆಟ್ಟೋ, ಕಾರ್ಲೋ ರವರ ಬಳಿ ಇದ್ದ ಬಂಗಾರವನ್ನು ದೋಚಲು ನರಿಕೊಂಬು ನಿವಾಸಿಗಳಾದ ಸತೀಶ ಮತ್ತು ಚರಣ್‌ ರವರೊಂದಿಗೆ ಸೇರಿಕೊಂಡು ಜ. 25 ರಂದು ಬೆನೆಡಿಕ್ಟ್‌ ಕಾರ್ಲೋ ರವರ ಮನೆಯಲ್ಲಿ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ದೃಢಪಟ್ಟಿದೆ.

ಇದನ್ನೂ ಓದಿ: ನಾನು ಇರುವವರೆಗೂ ಜಿ.ಟಿ.ಡಿ ಯನ್ನು ವಾಪಸ್ ಜೆಡಿಎಸ್‌ಗೆ ಸೇರಿಸಿಕೊಳ್ಳುವುದಿಲ್ಲ: HDK ಆಕ್ರೋಶ

ಇದೀಗ ಮೂವರು ಆರೋಪಿಗಳನ್ನು  ಬಂಧಿಸಿ  ನಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಕೊಲೆ ಮಾಡಿ ದೋಚಿದ್ದ 91 ಗ್ರಾಂ ಬಂಗಾರವನ್ನು ವಶಕ್ಕೆ ಪಡೆಯಲಾಗಿದೆ.

ಕಾರ್ಯಾಚರಣೆಯಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರಾದ  ವೈಲೆಂಟೈನ್‌ ಡಿʻಸೋಜಾ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕರಾದ ಟಿ.ಡಿ, ನಾಗರಾಜ್‌ ರವರ ನೇತೃತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ. ಎಂ.ಎಸ್, ವಿಟ್ಲ ಠಾಣಾ ಪಿ.ಎಸ್.ಐ ವಿನೋದ್‌, ಹಾಗೂ ಹೆಚ್.ಸಿಗಳಾದ ಗಿರೀಶ್‌, ಸುರೇಶ್‌, ಜನಾರ್ದನ, ಶ್ರೀಮತಿ ಪ್ರಮೀಳಾ, ಕಿರಣ್‌, ಪಿ.ಸಿಗಳಾದ ನಝೀರ್‌, ಪುನೀತ್‌, ಮನೋಜ್‌, ಪ್ರಸನ್ನರವರ ತಂಡ ಭಾಗಿಯಾಗಿದ್ದರು.

ಇದನ್ನೂ ಓದಿ: ಮಾತುಕತೆ ಮೂಲಕ ಚಿತ್ರಮಂದಿರ ಸಮಸ್ಯೆ ಬಗೆಹರಿಸಲಾಗುವುದು: ಡಿಸಿಎಂ ಅಶ್ವಥ್ ನಾರಾಯಣ್

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.