ಆಲ್ಬಂ ಸಾಂಗ್‌ನಲ್ಲಿ ಮೇಘಾ ಶೆಟ್ಟಿ ಗ್ಲಾಮರಸ್‌ ಲುಕ್‌


Team Udayavani, Feb 4, 2021, 9:59 AM IST

ಆಲ್ಬಂ ಸಾಂಗ್‌ನಲ್ಲಿ ಮೇಘಾ ಶೆಟ್ಟಿ ಗ್ಲಾಮರಸ್‌ ಲುಕ್‌

ಕಿರುತೆರೆಯ “ಜೊತೆ ಜೊತೆಯಲಿ…’ ಧಾರಾವಾಹಿಯ ಮೂಲಕ ಗಮನ ಸೆಳೆದಿರುವ ನಟಿ ಮೇಘಾ ಶೆಟ್ಟಿ, ಸದ್ಯ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ “ತ್ರಿಬಲ್‌ ರೈಡಿಂಗ್‌’ ಚಿತ್ರದ ಮೂಲಕ ಹಿರಿತೆರೆಗೆ ಪ್ರವೇಶ ಪಡೆಯಲು ರೆಡಿಯಾಗಿದ್ದಾರೆ. ಈಗಾಗಲೇ “ತ್ರಿಬಲ್‌ ರೈಡಿಂಗ್‌’ ಚಿತ್ರದ ಒಂದಷ್ಟು ಭಾಗದ ಚಿತ್ರೀಕರಣ ಪೂರ್ಣಗೊಳಿಸಿರುವ ನಟಿ ಮೇಘಾ ಶೆಟ್ಟಿ, ಇದರ ನಡುವೆಯೇ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

ಹೌದು, ಕನ್ನಡದ ರ್ಯಾಪರ್‌ ಚಂದನ್‌ ಶೆಟ್ಟಿ ಸಂಗೀತ ಸಂಯೋಜಿಸಿ, ಜೊತೆಗೆ ಧ್ವನಿಯಾಗಿರುವ “ನೋಡುಶಿವ…’ ಎಂಬ ಮ್ಯೂಸಿಕ್‌ ಆಲ್ಬಂನಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ “ಪರಾರಿ’ ಎಂಬ ಚಿತ್ರವನ್ನು ನಿರ್ಮಿಸಿದ್ದ ಸುಮಿತ್‌ ಎಂ.ಕೆ ಈ ಮ್ಯೂಸಿಕ್‌ ಆಲ್ಬಂ ನಿರ್ಮಿಸುತ್ತಿದ್ದು, ಹಾಡಿಗೆ ಸಾಹಿತ್ಯ ರಚಿಸಿರುವುದರ ಜೊತೆಗೆ ಮೇಘಾ ಶೆಟ್ಟಿ ಜೊತೆಗೆ ಆಲ್ಬಂ ಹಾಡಿಗೆ ಹೆಜ್ಜೆಯನ್ನೂ ಹಾಕಿದ್ದಾರೆ.

ಇದನ್ನೂ ಓದಿ:ಪ್ರಜ್ವಲ್‌ ದೇವರಾಜ್‌ ಹೊಸಚಿತ್ರಕ್ಕೆ ಅದಿತಿ ಪ್ರಭುದೇವ ನಾಯಕಿ

ಅದ್ಧೂರಿ ವೆಚ್ಚದಲ್ಲಿ ನಿರ್ಮಾಣವಾಗಿರುವ “ನೋಡು ಶಿವ…’ ಮ್ಯೂಸಿಕ್‌ ಆಲ್ಬಂನಲ್ಲಿ ಮೇಘಾ ಶೆಟ್ಟಿ, ಸುಮಿತ್‌ ಎಂ.ಕೆ ಅವರೊಂದಿಗೆ ಗಾಯಕ ಚಂದನ್‌ ಶೆಟ್ಟಿ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿ¨ªಾರೆ. ಉಳಿದಂತೆ ಸುಮಾರು 60ಕ್ಕೂ ಹೆಚ್ಚು ನೃತ್ಯ ಕಲಾವಿದರು, 150ಕ್ಕೂ ಅಧಿಕ ಸಹಕಲಾವಿದರು ಈ ಮ್ಯೂಸಿಕ್‌ ಆಲ್ಬಂನ ಹಾಡಿನಲ್ಲಿ ಅಭಿನಯಿಸಿದ್ದಾರೆ.

ಇತ್ತೀಚೆಗೆ ಬನ್ನೇರುಘಟ್ಟ ರಸ್ತೆಯ ಎ.ಎಂ.ಸಿ ಇಂಜನಿಯರಿಂಗ್‌ ಕಾಲೇಜ್‌ ಆವರಣದಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. “ಎಂ.ಕೆ ಆರ್ಟ್ಸ್’ ಬ್ಯಾನರ್‌ನಲ್ಲಿ ಮೋನಿಕಾ ಕಲ್ಲುರಿ ಈ ಆಲ್ಬಂ ಸಾಂಗ್‌ ನಿರ್ಮಾಣ ಮಾಡಿದ್ದು, ಭಜರಂಗಿ ಮೋಹನ್‌ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. “ಹೆಬ್ಬುಲಿ’ ಖ್ಯಾತಿಯ ಕರುಣಾಕರ್‌ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ.

ಸಾಮಾನ್ಯವಾಗಿ ಸಿನಿಮಾದ ಹಾಡುಗಳನ್ನು ಅದ್ಧೂರಿಯಾಗಿ ಚಿತ್ರೀಕರಿಸುತ್ತಾರೆ. ಆದರೆ ಮ್ಯೂಸಿಕ್‌ ಆಲ್ಬಂ ಹಾಡಿಗೆ ಇಷ್ಟೊಂದು ವೆಚ್ಚ ಮಾಡು ವುದು ಅಪರೂಪ. ನಮಗೆ ಗೊತ್ತಿರುವಂತೆ, ಕನ್ನಡದ ಮಟ್ಟಿಗೆ ಇಷ್ಟು ಅದ್ಧೂರಿಯಾಗಿ ಮೂಡಿ ಬಂದಿರುವ ಮೊದಲ ಮ್ಯೂಸಿಕ್‌ ಆಲ್ಬಂ ಸಾಂಗ್‌ ಎನ್ನುವುದು ತಂಡದ ಮಾತು.

ಸುಮಾರು ಮೂರುವರೆ ನಿಮಿಷಗಳ ಅವಧಿಯ “ನೋಡು ಶಿವಾ…’ ಮ್ಯೂಸಿಕ್‌ ವಿಡಿಯೋ ಆಲ್ಬಂ ಸಾಂಗ್‌ ಇದೇ ತಿಂಗಳ ಕೊನೆಗೆ ಆನಂದ್‌ ಆಡಿಯೋ ಯೂ-ಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆಯಾಗಲಿದೆ.

ಇನ್ನು ಇಲ್ಲಿಯವರೆಗೆ ಟ್ರೆಡಿಷನಲ್‌ ಲುಕ್‌ನಲ್ಲಿ ಕಾಣಿಸಿಕೊಂಡು ನೋಡುಗರ ಗಮನ ಸೆಳೆದಿದ್ದ ಮೇಘಾ ಶೆಟ್ಟಿ, ಈ ಮ್ಯೂಸಿಕ್‌ ಆಲ್ಬಂನಲ್ಲಿ ತುಂಬ ಗ್ಲಾಮರಸ್‌ ಆಗಿ, ಬೋಲ್ಡ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಒಟ್ಟಾರೆ ಮೇಘಾ ಶೆಟ್ಟಿಯ ಹೊಸ ಲುಕ್‌ ನೋಡುಗರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಈ ಮ್ಯೂಸಿಕ್‌ ಆಲ್ಬಂ ರಿಲೀಸ್‌ ಆದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.