ಏನಿದು ಘಟನೆ; ಇತಿಹಾಸದ ಪುಟದಲ್ಲಿ ಚೌರಿ-ಚೌರಾ ಹುತಾತ್ಮರ ನಿರ್ಲಕ್ಷ್ಯ; ಪ್ರಧಾನಿ ಮೋದಿ
ಚೌರಿ ಚೌರಾ ಹುತಾತ್ಮರ ಸ್ಮರಣಾರ್ಥವಾಗಿ ಉತ್ತರಪ್ರದೇಶ ಸರ್ಕಾರ ಎಲ್ಲಾ 74 ಜಿಲ್ಲೆಗಳಲ್ಲಿ ವರ್ಷ ಪೂರ್ತಿ ಸಮಾರಂಭ
Team Udayavani, Feb 4, 2021, 12:45 PM IST
ಲಕ್ನೋ: ಭಾರತದ ಇತಿಹಾಸದ ಪುಟಗಳಲ್ಲಿ ಚೌರಿ-ಚೌರಾ ಘಟನೆಯಲ್ಲಿ ಹುತಾತ್ಮರಾದವರಿಗೆ ಸಲ್ಲಬೇಕಾದ ಗೌರವ ದೊರತಿಲ್ಲವಾಗಿತ್ತು. ಆದರೆ ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದ್ದ ಹುತಾತ್ಮರನ್ನು ಗೌರವಿಸುವ ನಿಟ್ಟಿನಲ್ಲಿ ಚೌರ-ಚೌರ ಶತಮಾನೋತ್ಸವ ಆಚರಿಸಿದ ಉತ್ತರಪ್ರದೇಶ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು.
ಇದನ್ನೂ ಓದಿ:ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆ ಯತ್ನ: ಪತಿ ಸ್ಥಳದಲ್ಲೇ ಸಾವು, ಪತ್ನಿ ಗಂಭೀರ
ಚೌರಿ ಚೌರಾ ಘಟನೆ ಕೇವಲ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವುದಕ್ಕೆ ಮಾತ್ರ ಸೀಮಿತವಾಗಿಲ್ಲ. ಈ ಘಟನೆಯಿಂದ ದೊಡ್ಡ ಸಂದೇಶ ರವಾನೆಯಾಗಿದೆ. ಆದರೆ ಹಲವು ಕಾರಣಗಳಿಂದ ಇದನ್ನು ಸಣ್ಣ ಘಟನೆ ಎಂಬಂತೆ ಬಿಂಬಿಸಲಾಗಿತ್ತು. ನಾವು ಘಟನೆಯನ್ನು ಸಂದರ್ಭಕ್ಕೆ ತಕ್ಕಂತೆ ಅವಲೋಕಿಸಬೇಕಾಗಿದೆ. ಇದು ಕೇವಲ ಪೊಲೀಸ್ ಠಾಣೆಗೆ ಹಚ್ಚಿದ ಬೆಂಕಿಯಲ್ಲ, ಜನರ ಹೃದಯದಲ್ಲಿತ್ತು ಎಂದು ಪ್ರಧಾನಿ ಹೇಳಿದರು.
ದುರದೃಷ್ಟವಶಾತ್ ಐತಿಹಾಸಿಕ ಘಟನೆ ಬಗ್ಗೆ ಈವರೆಗೂ ಹೆಚ್ಚು ಚರ್ಚೆಯಾಗಿಲ್ಲ. ಚೌರಿ ಚೌರಾ ಹುತಾತ್ಮರಿಗೆ ಇತಿಹಾಸದ ಪುಟಗಳಲ್ಲಿ ಸಲ್ಲಬೇಕಾಗಿದ್ದ ಗೌರವ ಸಿಕ್ಕಿಲ್ಲ. ಹುತಾತ್ಮರ ರಕ್ತ ದೇಶದ ಮಣ್ಣಿನಲ್ಲಿದ್ದು, ಅದು ನಮ್ಮ ಸ್ಫೂರ್ತಿಗೆ ಕಾರಣವಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಮರಕ್ಕೆ ಢಿಕ್ಕಿ ಹೊಡೆದ ಕಾರು: ಮಹಿಳೆ ಸಾವು, ಮೂವರಿಗೆ ಗಂಭೀರ ಗಾಯ
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ(ಫೆ.04, 2021) ಉತ್ತರಪ್ರದೇಶದ ಗೋರಖ್ ಪುರ್ ಜಿಲ್ಲೆಯಲ್ಲಿ ಚೌರಿ-ಚೌರಾ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು.
ಚೌರಿ ಚೌರಾ ಹುತಾತ್ಮರ ಸ್ಮರಣಾರ್ಥವಾಗಿ ಉತ್ತರಪ್ರದೇಶ ಸರ್ಕಾರ ಎಲ್ಲಾ 74 ಜಿಲ್ಲೆಗಳಲ್ಲಿ ವರ್ಷ ಪೂರ್ತಿ ಸಮಾರಂಭ ನಡೆಸಲು ನಿರ್ಧರಿಸಿದೆ.
ಏನಿದು ಚೌರಿ-ಚೌರಾ ಘಟನೆ?
ಗೋರಖ್ ಪುರ್ ಜಿಲ್ಲೆಯ ಚೌರಿ-ಚೌರಾ ಪ್ರದೇಶದಲ್ಲಿ 1922ರ ಫೆಬ್ರುವರಿ 4ರಂದು ನಡೆದ ಭೀಕರ ಘಟನೆ ಇದಾಗಿದೆ. ಮಹಾತ್ಮಗಾಂಧಿ ನೀಡಿದ್ದ ಅಸಹಕಾರ ಚಳವಳಿ ಕರೆ ಹಿನ್ನೆಲೆಯಲ್ಲಿ ಚೌರಾ-ಚೌರಾದಲ್ಲಿ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನಾಕಾರರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟಾಗ ಗುಂಡಿನ ದಾಳಿ ನಡೆಸಿದ್ದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದರು. ಈ ಘಟನೆಯಲ್ಲಿ ಮೂವರು ನಾಗರಿಕರು ಹಾಗೂ 22 ಪೊಲೀಸರು ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು