ಹದಿನಾಲ್ಕು ವರ್ಷವಾದ್ರೂ ತಪ್ಪದ ವನವಾಸ!

2006ರಲ್ಲಿ ಮಂಜೂರಾಗಿರುವ ಇಲ್ಲಿನ ಮೊರಾರ್ಜಿ ವಸತಿ ಶಾಲೆ ಆರಂಭದಲ್ಲಿ ಎಪಿಎಂಸಿಯ ಮಳಿಗೆಯಲ್ಲಿತ್ತು.

Team Udayavani, Feb 4, 2021, 4:38 PM IST

ಹದಿನಾಲ್ಕು ವರ್ಷವಾದ್ರೂ ತಪ್ಪದ ವನವಾಸ!

ಮಸ್ಕಿ: ಪಟ್ಟಣದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿ ಬರೋಬ್ಬರಿ 14 ವರ್ಷ ಕಳೆದಿವೆ. ಆದರೆ, ಸ್ವಂತ ನೆಲೆ ಇಲ್ಲ. ಭತ್ತದ ಮೂಟೆ ತುಂಬುವ ಗೋದಾಮುವೊಂದರಲ್ಲೇ ಮಕ್ಕಳನ್ನು ಕೂಡಿ ಹಾಕಲಾಗಿದ್ದು, ನಿತ್ಯ ಅಲ್ಲೇ ಊಟ-ಪಾಠ, ವಾಸ್ತವ್ಯ!.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಯಾದ ಮಕ್ಕಳ ಫಜೀತಿ ಇದು. ವಾಸ್ತವ್ಯದೊಂದಿಗೆ ಹೈಟೆಕ್‌ ಉಚಿತ ಶಿಕ್ಷಣ ಪಡೆಯಲು ಈ ವಸತಿ ಶಾಲೆಗೆ ಪ್ರವೇಶಕ್ಕಾಗಿ ಮಕ್ಕಳು 5ನೇ ತರಗತಿಯಿಂದಲೇ ಪ್ರತ್ಯೇಕ ಕೋಚಿಂಗ್‌ ಪಡೆದು, ಪರೀಕ್ಷೆಯಲ್ಲಿ ಪಾಸಾಗಿ ಆಯ್ಕೆಯಾಗುತ್ತಾರೆ. 6ನೇ ತರಗತಿಯಿಂದ 10ನೇ ತರಗತಿವರೆಗೂ ವ್ಯಾಸಂಗ್‌ ಮಾಡಲು ಭವಿಷ್ಯದ ಕನಸು ಹೊತ್ತು ಬರುತ್ತಾರೆ. ಆದರೆ, ಮಸ್ಕಿ ವಸತಿ ಶಾಲೆಗೆ ಆಯ್ಕೆಯಾಗಿ ಬಂದ ಇಲ್ಲಿನ ಮಕ್ಕಳಿಗೆ ಮಾತ್ರ ಗುಣಮಟ್ಟದ ಶಿಕ್ಷಣ, ಹೈಟೆಕ್‌ ಸೌಕರ್ಯಗಳ ಬದಲು ಬಂಧನದ ಅನುಭವವಾಗುತ್ತಿದೆ. ಯಾವ ಸೌಕರ್ಯಗಳು ನೆಟ್ಟಗಿರದ ಕಾರಣ ಮಕ್ಕಳು ವನವಾಸ ಅನುಭವಿಸುವಂತಾಗಿದೆ.

ಏನಿದೆ ಪರಿಸ್ಥಿತಿ?: ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸ್ವಂತ ಕಟ್ಟಡವೇ ಇಲ್ಲ. ಬಾಡಿಗೆ ಕಟ್ಟಡವೊಂದರಲ್ಲಿ ನಡೆದಿದ್ದು, ಅದೂ ಗೋದಾಮುವೊಂದರಲ್ಲಿ ನಡೆಸಲಾಗುತ್ತಿದೆ. ಮೂಟೆ ತುಂಬುವ ಕಟ್ಟಡಗಳಲ್ಲಿ 300 ವಿದ್ಯಾರ್ಥಿಗಳನ್ನು ಹಾಕಲಾಗಿದೆ. ನಿತ್ಯ ಇಲ್ಲಿಯೇ ಊಟ, ಪಾಠ, ವಾಸ್ತವ್ಯ. ಹೊಸದಾಗಿ ಇಲ್ಲಿಗೆ ಆಯ್ಕೆಯಾಗಿ ಬರುವ ವಿದ್ಯಾರ್ಥಿಗಳು ಪರಿಸ್ಥಿತಿ ಕಂಡು ನಾಲ್ಕು ದಿನದಲ್ಲೇ ಮನೆಯ ದಾರಿ ಹಿಡಿಯುತ್ತಾರೆ. ಇನ್ನು ಕೆಲ ವಿದ್ಯಾರ್ಥಿಗಳು ಓದು-ಅಭ್ಯಾಸಕ್ಕಾಗಿ ಇಂತಹ ಪರಿಸ್ಥಿತಿ ಅನಿವಾರ್ಯ ಎಂದು ಹೊಂದಿಕೊಳ್ಳುತ್ತಿದ್ದಾರೆ.

ಬಹುತೇಕ ಬಡ ವಿದ್ಯಾರ್ಥಿಗಳೇ ಇಲ್ಲಿ ಪ್ರವೇಶ ಪಡೆಯುವುದರಿಂದ ಅ ಧಿಕಾರಿಗಳು ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೇವಲ ಕಟ್ಟಡದ ಸಮಸ್ಯೆ ಮಾತ್ರವಲ್ಲದೇ ಗುಣಮಟ್ಟ ಶಿಕ್ಷಣ ಕೊರತೆ, ಆಟೋಟಗಳಿಗೆ ಅವಕಾಶ ಇಲ್ಲದೇ ಇರುವುದು, ಊಟದಲ್ಲಿ ಗುಣಮಟ್ಟ ಕಾಪಾಡಿಕೊಳ್ಳದೇ ಇರುವುದು ಸೇರಿ ಹಲವಾರು ಸವಾಲುಗಳು ಇಲ್ಲಿನ ವಸತಿ ಶಾಲೆ ಮಕ್ಕಳು ಅನುಭವಿಸುತ್ತಿದ್ದಾರೆ.

ಆಸಕ್ತಿ ಕೊರತೆ: ಬಾಳೆಕಾಯಿ ಮಿಲ್‌ನಲ್ಲಿ ನಡೆಯುತ್ತಿರುವ ಇಲ್ಲಿನ ವಸತಿ ಶಾಲೆಗೆ ಪ್ರತ್ಯೇಕ ಕಟ್ಟಡ ನಿರ್ಮಾಣಕ್ಕಾಗಿ ಮುದಗಲ್‌ ರಸ್ತೆ ಮಾರ್ಗದಲ್ಲಿ 5 ಎಕರೆ ಸರಕಾರಿ ಜಮೀನು ಗುರುತು ಮಾಡಿ ಇಲ್ಲಿನ ವಸತಿ ಶಾಲೆಗೆ ಹಸ್ತಾಂತರ ಮಾಡಲಾಗಿದೆ. ಅಲ್ಲದೇ ಹೆಚ್ಚುವರಿ 3 ಎಕರೆ ಭೂಮಿ ಹಂಚಿಕೆಗೂ ಪ್ರಸ್ತಾವನೆ ಜಿಲ್ಲಾಧಿ ಕಾರಿ ಕಚೇರಿಯಲ್ಲಿದೆ. ಆದರೆ, ಪ್ರತ್ಯೇಕ ಕಟ್ಟಡ ನಿರ್ಮಾಣಕ್ಕೆ ಬಜೆಟ್‌ ಹಂಚಿಕೆಗೆ ಆಸಕ್ತಿ ತೋರುತ್ತಿಲ್ಲ.

ಇಲ್ಲಿನ ಚುನಾಯಿತ ಪ್ರತಿನಿಧಿಗಳು, ಅಧಿಕಾರಿ ವರ್ಗ  ಮಕ್ಕಳ ಭವಿಷ್ಯವನ್ನೇ ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಸ್ವಂತ ಕಟ್ಟಡ ಇಲ್ಲದೇ ಗೋದಾಮು ವಾಸಕ್ಕಾಗಿ
ಮಾಸಿಕ 2,92,500 ರೂ. ಸರಕಾರ ಬಾಡಿಗೆ ಪಾವತಿ ಮಾಡುತ್ತಿದೆ. ಮನಸು ಮಾಡಿದರೆ, ಈ ಬಾಡಿಗೆ ಮೊತ್ತದಲ್ಲೇ ಅಧಿ ಕಾರಿಗಳು ಸ್ವಂತ ಕಟ್ಟಡ ನಿರ್ಮಾಣ
ಮಾಡಬಹುದು. ಆದರೆ ಇಚ್ಛಾಶಕ್ತಿ ಕೊರತೆ ಕಾರಣಕ್ಕೆ ವಿದ್ಯಾರ್ಥಿಗಳು ಮಾತ್ರ 14 ವರ್ಷ ಕಳೆದರೂ ವನವಾಸದಲ್ಲೇ ಕಾಲ ಕಳೆಯುತ್ತಿದ್ದಾರೆ.

ಪ್ರಸ್ತಾವನೆಯಲ್ಲೇ ಗಿರಕಿ
2006ರಲ್ಲಿ ಮಂಜೂರಾಗಿರುವ ಇಲ್ಲಿನ ಮೊರಾರ್ಜಿ ವಸತಿ ಶಾಲೆ ಆರಂಭದಲ್ಲಿ ಎಪಿಎಂಸಿಯ ಮಳಿಗೆಯಲ್ಲಿತ್ತು. ಪಾಳು ಬಿದ್ದ ಈ ಎಪಿಎಂಸಿಯಲ್ಲಿ ಹುಳ-ಉಪ್ಪಡಿ, ಕಿಡಗೇಡಿಗಳ ಹಾವಳಿಯಿಂದಾಗಿ 2016ರಲ್ಲಿ ಖಾಸಗಿ ಗೋದಾಮಿಗೆ ಶಿಫ್ಟ್‌ ಆಗಿದೆ. ಭೂಮಿ ಮಂಜೂರಾದರೂ ಕಟ್ಟಡ ನಿರ್ಮಾಣಕ್ಕೆ ಬಿಡುಗಡೆ ಮಾಡಿ ಎಂದು ವಸತಿ ಶಾಲೆ ಪ್ರಾಂಶುಪಾಲರು ಹಲವು ಬಾರಿ ಪತ್ರ ಬರೆದಿದ್ದಾರೆ. ಆದರೆ ಇಲಾಖೆ ಎಂಜಿನಿಯರ್‌ ಗಳು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಹಣ ಬಿಡುಗಡೆಯಾಗಿಲ್ಲ.

ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ಕೋರಿ ಹಲವು ಬಾರಿ ಪತ್ರ ಬರೆದಿದ್ದೇವೆ. ಆದರೆ ಈ ಬಗ್ಗೆ ಇನ್ನೂ ಏನು ಪೊಗ್ರೆಸ್‌ ಆಗಿಲ್ಲ. ಜಿಲ್ಲಾ, ರಾಜ್ಯಮಟ್ಟದ ಅಧಿಕಾರಿಗಳ ಗಮನಕ್ಕೂ ತರಲಾಗಿದೆ.
ಸುಭಾಷ್‌ಚಂದ್ರ,
ಪ್ರಾಂಶುಪಾಲರು, ವಸತಿ ಶಾಲೆ ಮಸ್ಕಿ

ಇಲ್ಲಿನ ಮಕ್ಕಳು ಇಕ್ಕಟ್ಟು-ಬಿಕ್ಕಟ್ಟಿನಲ್ಲಿ ವಾಸ ಮಾಡುತ್ತಿದ್ದಾರೆ. ಸರಕಾರ ಶಿಕ್ಷಣಕ್ಕೆ ಕೋಟ್ಯಂತರ ರೂ. ಮೀಸಲಿಟ್ಟರೂ ಇಲ್ಲಿನ ಮಕ್ಕಳಿಗೆ ಸೌಲಭ್ಯ ಸಿಗುತ್ತಿಲ್ಲ. ಅಧಿಕಾರಿಗಳು, ಚುನಾಯಿತರು ಇತ್ತ ಗಮನ ಹರಿಸಬೇಕು.
ಕೃಷ್ಣ ಡಿ.ಚಿಗರಿ, ಮಸ್ಕಿ ಪಟ್ಟಣ ನಿವಾಸಿ

*ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.