ನಡ್ಡಾ v/s ದೀದಿ : ಪ. ಬಂಗಾಲದಲ್ಲಿ ಯಾತ್ರೆ ಜಗಳ
Team Udayavani, Feb 6, 2021, 7:05 AM IST
ಕೋಲ್ಕತಾ: ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಮತ್ತು ಟಿಎಂಸಿ ನಡುವಿನ ಗುದ್ದಾಟವೂ ಜೋರಾಗಿದೆ. ನಾದಿಯಾ ಜಿಲ್ಲೆಯ ನವದ್ವೀಪದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪರಿವರ್ತನಾ ಯಾತ್ರೆಗೆ ಒಪ್ಪಿಗೆ ಕೊಡಲು ಪಶ್ಚಿಮ ಬಂಗಾಲ ಸರಕಾರ ನಿರಾಕರಿಸಿದೆ. ಆದರೆ, ಇದೇ ಸ್ಥಳದಲ್ಲಿ ಸಾರ್ವಜನಿಕ ರಾಲಿ ನಡೆಸಲು ಒಪ್ಪಿಗೆ ನೀಡಲಾಗಿದೆ ಎಂದು ಜಿಲ್ಲಾ ಎಸ್ಪಿ ಹೇಳಿದ್ದಾರೆ.
ವಿಚಿತ್ರವೆಂದರೆ ನಾದಿಯಾ ಜಿಲ್ಲೆಯಲ್ಲೇ ಶನಿವಾರ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಎರಡು ದಿನಗಳ ಜನಸಮರ್ಥನಾ ಯಾತ್ರೆಯೂ ಆರಂಭವಾಗಲಿದೆ. ಬಿಜೆಪಿ ಮತ್ತು ಟಿಎಂಸಿ ಯಾತ್ರೆಗಳು ಒಟ್ಟೊಟ್ಟಿಗೆ ಶುರುವಾಗುವ ಸಾಧ್ಯತೆ ಇದೆ. ಹೀಗಾಗಿ ನಮ್ಮ ಯಾತ್ರೆಗೆ ಒಪ್ಪಿಗೆ ಕೊಡಲು ನಿರಾಕರಿಸಲಾಗಿದೆ ಎಂಬುದು ಬಿಜೆಪಿ ಆರೋಪ. ಅದನ್ನು ಅಲ್ಲಗಳೆದಿರುವ ಮಮತಾ ಬ್ಯಾನರ್ಜಿ, ಬಿಜೆಪಿಯ ಯಾತ್ರೆಗೆ ಅನುಮತಿ ನಿರಾಕರಿಸಿಲ್ಲ. ಮುಖ್ಯ ಕಾರ್ಯದರ್ಶಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಲ್ಲಿ ಟಿಎಂಸಿಯ ಪಾತ್ರವಿಲ್ಲ ಎಂದಿದ್ದಾರೆ. ಇದರ ಜತೆಗೆ ನಾದಿಯಾ ಜಿಲ್ಲಾಡಳಿತ ಕೂಡ ಯಾತ್ರೆಗೆ ಅನುಮತಿ ನಿರಾಕರಿಸಲಾಗಿಲ್ಲ. ಆದರೆ ಜೆ.ಪಿ. ನಡ್ಡಾ ಅವರಿಗೆ ಝಡ್+ ಪ್ಲಸ್ ಭದ್ರತೆ ಇರುವುದರಿಂದ ನಾವು ಈ ಬಗ್ಗೆ ವ್ಯವಸ್ಥೆ ಮಾಡುವುದಕ್ಕಾಗಿ ವಿವರಣೆ ಕೇಳಿದ್ದೇವೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?