ಉತ್ತಮ ಶಿಕ್ಷಣ ಪಡೆದು ಪ್ರಗತಿ ಸಾಧಿಸಿ: ಕೊಟ್ರೇಶ್
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶುಭಾಕಾಂಕ್ಷ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಕೊಟ್ರೇಶ್ ಮಾತನಾಡಿದರು.
Team Udayavani, Feb 6, 2021, 4:38 PM IST
ಸಂಡೂರು: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಐಕ್ಯೂಎಸ್ಸಿ ಅಡಿಯಲ್ಲಿ ಮತ್ತು ವಿಭಾಗವಾರು ಹಮ್ಮಿಕೊಳ್ಳಲಾಗುತ್ತಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಇವುಗಳಲ್ಲಿ ಪಾಲ್ಗೊಳ್ಳುವ ಮೂಲಕ ಉತ್ತಮ ಶಿಕ್ಷಣ ಪಡೆಯುವುದರ ಜೊತೆಗೆ ಪ್ರಗತಿ ಸಾಧಿಸಬೇಕು ಎಂದು ಪ್ರಾಂಶುಪಾಲರಾದ ಕೊಟ್ರೇಶ್ ತಿಳಿಸಿದರು.
ಅವರು ಪಟ್ಟಣದ ಸರ್ಕಾರ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶುಭಾಕಾಂಕ್ಷ(ಇಂಡಕ್ಷನ್ ಪ್ರೋಗ್ರಾಮ್) 2 ದಿನಗಳ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾಲೇಜು ಪ್ರಾರಂಭವಾದಾಗ ಪ್ರೌಢಶಾಲಾ ಕಟ್ಟಡದಲ್ಲಿ ಪ್ರಾರಂಭವಾಗಿ ಇಂದು ಸ್ವಂತ ಹಾಗೂ ವಿಶೇಷವಾದ ಕಟ್ಟಡದಲ್ಲಿ ನಡೆಯುತ್ತಿದ್ದು ಹೆಮ್ಮೆಯ ಸಂಗತಿಯಾಗಿದೆ. ಪ್ರಾರಂಭದಲ್ಲಿ
ಕೆಲವೇ ವಿದ್ಯಾರ್ಥಿಗಳಿದ್ದರು. ಆದರೆ ಈಗ ವಿಜ್ಞಾನ, ವಾಣಿಜ್ಯ, ಕಲಾವಿಭಾಗದಲ್ಲಿ ಒಟ್ಟು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಅದಕ್ಕೆ ಬೇಕಾದ ಗ್ರಂಥಾಲಯ, ಸಿಬ್ಬಂದಿ ವ್ಯವಸ್ಥೆ, ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಆದ್ದರಿಂದ ಉತ್ತಮ ರೀತಿಯಲ್ಲಿ ಶಿಸ್ತಿನೊಂದಿಗೆ ಶಿಕ್ಷಣದ ಲಾಭ ಪಡೆದುಕೊಳ್ಳಬೇಕು ಎಂದು ಕರೆನೀಡಿದರು.
ಈ ಸಂದರ್ಭದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ಕಾರ್ಯಕ್ರಮದ ಸಂಯೋಜಕರಾದ ಕಿಶೋರ್.ಇ.ಜಿ. ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಪ್ರಶಾಂತ ಮೋರೆ, ಕೊಟ್ರೇಶ್ .ಪಿ. ಕಿಶೋರ್, ಶಂಕರಗೌಡ, ರೇಖಾ.ಇ.ಜಿ., ಸಲ್ಮಾ ಇತರ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ