ಕಾರ್ಡಿಯಕ್‌ ಆ್ಯಂಬುಲೆನ್ಸ್‌ ಸೇವೆ ಪ್ರಾರಂಭ


Team Udayavani, Feb 6, 2021, 6:49 PM IST

Launch of Cardiac Ambulance Service

ಮುಂಬಯಿ: ಡಹಾಣೂ ರೋಡ್‌ ಪಶ್ಚಿಮದ ಪ್ರತಿಷ್ಠಿತ ಜನತಾ ಸಹಕಾರಿ ಬ್ಯಾಂಕ್‌ನ ನೂತನ ಹಾಗೂ ಸುಸಜ್ಜಿತ ಕಾರ್ಡಿಯಕ್‌ ಆ್ಯಂಬುಲೆನ್ಸ್‌ ಸೇವೆಯನ್ನು ಡಹಾಣೂವಿನ ಉಪ ಜಿಲ್ಲಾಧಿಕಾರಿ, ಸಮಾಜ ಸೇವಕಿ ಆಶಿಮಾ ಮಿತ್ತಲ್‌ ಐಎಎಸ್‌ ಅವರು ಜ. 26ರಂದು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಮಿಹಿರ್‌ ಚಂದ್ರಕಾಂತ್‌ , ಉಪಾಧ್ಯಕ್ಷ ಭಾವೇಶ್‌ ದೇಸಾಯಿ, ಬ್ಯಾಂಕ್‌ನ ಹಿರಿಯ ಪ್ರಬಂಧಕ ಜಯಂತ್‌ ಬಾರಿ, ನಿರ್ದೇಶಕ ಮಂಡಳಿಯ ಸದಸ್ಯರು, ಬ್ಯಾಂಕ್‌ನ ಸಿಬಂದಿ, ಡಹಾಣೂ ಪರಿಸರದ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.

ನೂತನ ಆ್ಯಂಬುಲೆನ್ಸ್‌ ಬಗ್ಗೆ ಮಾಹಿತಿ ನೀಡಿದ ಕಾರ್ಯಾಧ್ಯಕ್ಷ ಮಿಹಿರ್‌  ಅವರು, ಡಹಾಣೂ ಪರಿಸರದಲ್ಲಿ ವಾಸವಾಗಿರುವವರಿಗೆ ತುರ್ತು ಸಂದರ್ಭಗಳಲ್ಲಿ ಈ ರೀತಿಯ ಸುಸಜ್ಜಿತ ಆ್ಯಂಬುಲೆನ್ಸ್‌ ಅನ್ನು ಈ ವರೆಗೆ ಹೊರಗಿನಿಂದ ತರಿಸಬೇಕಾಗಿತ್ತು. ಇದು ಸರಿಯಾದ ಸಮಯಕ್ಕೆ ಸಿಗುತ್ತಿರಲಿಲ್ಲ. ಇದರ ಜತೆಗೆ ಅಧಿಕ ವೆಚ್ಚವೂ ಆಗುತ್ತಿತ್ತು. ತುರ್ತು ಚಿಕಿತ್ಸೆಯ ಸಂದರ್ಭ ಅಗತ್ಯದ ವಿಶೇಷ ಉಪಕರಣನ್ನೊಳ ಗೊಂಡ ಸೇವೆಯ ಆವಶ್ಯಕತೆ ಮನ ಗಂಡು ಈ ನೂತನ ಆ್ಯಂಬುಲೆನ್ಸ್‌ ಆರಂಭಿಸಿದ್ದೇವೆ. ಇತ್ತೀಚೆಗೆ ನಮ್ಮನ್ನ ಗಲಿದ ಬ್ಯಾಂಕ್‌ ಅಧ್ಯಕ್ಷ ದಿ| ರಾಜೇಶ್‌ ಪಾರೇಖ್‌ ಸುಸಜ್ಜಿತ ಆ್ಯಂಬುಲೆನ್ಸ್‌ ಬಗ್ಗೆ ಇಚ್ಛೆ ವ್ಯಕ್ತಪಡಿಸಿ ದ್ದರು. ಅದನ್ನು ಇಂದು ಪೂರ್ಣಗೊಳಿಸಿದ್ದೇವೆ
ಎಂದು ವಿವರಿಸಿದರು.

ಮುಂಬಯಿ – ಸೂರತ್‌ ವರೆಗೆ ಖಾಸಗಿ ಕಾರ್ಡಿಯಕ್‌ ಆ್ಯಂಬುಲೆನ್ಸ್‌ ಗಾಗಿ 20ರಿಂದ 22 ಸಾವಿರ ರೂ. ಗಳಷ್ಟು ವ್ಯಯಿಸಬೇಕಾಗಿದ್ದು, ಡಹಾಣೂ ಜನತಾ ಬ್ಯಾಂಕ್‌ನ ವತಿಯಿಂದ ಕನಿಷ್ಠ ದರ 12 ಸಾವಿರ ರೂ. ಗಳಿಗೆ ಈ ಸೇವೆಯನ್ನು ಒದಗಿಸುವ ಬಗ್ಗೆ ಇದೇ ಸಂದರ್ಭದಲ್ಲಿ ನಾಗರಿಕರಿಗೆ ಘೋಷಿಸಲಾಯಿತು.

ಇದನ್ನೂ ಓದಿ:ಸಿನಿಮಾ ಮನರಂಜನಾ ಮಾಧ್ಯಮ

ಕೋವಿಡ್  ಮಾರ್ಗಸೂಚಿಯಂತೆ ಜರಗಿದ ಈ ಸರಳ ಸಮಾರಂಭ ವನ್ನು ರಿಬ್ಬನ್‌ ಕತ್ತರಿಸುವ ಮೂಲಕ ಪ್ರಾರಂಭಿಸಿದ ಮಿತ್ತಲ್‌, ಸಾರ್ವಜನಿ ಕರ ತುರ್ತು ಆರೋಗ್ಯ ಸೇವೆಯ ಅಗತ್ಯವನ್ನು ಗಮನದಲ್ಲಿರಿಸಿ ಬ್ಯಾಂಕ್‌ ಆರಂಭಗೊಳಿಸಿದ ಈ ಮಾನವೀಯತೆಯ ಸೇವೆ ಶ್ಲಾಘ ನೀಯ. ಮಾನವೀಯ ಕಳಕಳಿ
ಯುಳ್ಳ ಇಂತಹ ಕಾರ್ಯ ಭವಿಷ್ಯದಲ್ಲಿಯೂ ಜರಗುತ್ತಾ ಇರಲಿ ಎಂದು ಶುಭ ಕೋರಿದರು. ಕಾರ್ಡಿಯಕ್‌ ಆ್ಯಂಬುಲೆನ್ಸ್‌ ತುರ್ತು ಸೇವೆಗಾಗಿ ನಾಗರಿಕರು 7249569069 ಅಥವಾ 9022471569 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

 

ಟಾಪ್ ನ್ಯೂಸ್

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.