ದೇಸೀಯ ಉತ್ಪನ್ನಗಳ ಬಳಕೆಗೆ ಮೇಳ

ಕರಕುಶಲ ಕರ್ಮಿಗಳ ಉತ್ತೇಜನಕ್ಕೆ ಮೇಳ ಸಹಕಾರಿ ! ಹುನಾರ್‌ ಹಾಟ್‌ ಕರಕುಶಲ ಮೇಳಕ್ಕೆ ಸದಾನಂದಗೌಡ ಚಾಲನೆ

Team Udayavani, Feb 7, 2021, 1:35 PM IST

2r (4)

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ 25ನೇ ಹುನಾರ್‌ ಹಾಟ್‌ ಕರಕುಶಲ ಮೇಳಕ್ಕೆ ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಚಾಲನೆ ನೀಡಿದರು.

ಆತ್ಮ ನಿರ್ಭರ ಭಾರತ್‌ ಯೋಜನೆಯನ್ನು ಪ್ರೋತ್ಸಾಹಿಸುವ ಜತೆಗೆ ದೇಶದ ವಿವಿಧ ಭಾಗಗಳ ಕಲೆ, ಸಂಸ್ಕೃತಿ ಹಾಗೂ ಆಹಾರ ಪದ್ಧತಿ ಪರಿಚಯಿಸುವ ಸಲುವಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಎನ್‌ಎಂಡಿಎಫ್ಸಿ ವತಿಯಿಂದ ನಗರ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಮೇಳ ಆಯೋಜಿಸಲಾಗಿದ್ದು, ಫೆ.6ರಿಂದ 14ರ ವರೆಗೆ ನಡೆಯಲಿದೆ.

ಬಳಿಕ ಮಾತನಾಡಿದ ಸಚಿವ ಡಿ.ವಿ. ಸದಾನಂದ ಗೌಡ, ಆತ್ಮನಿರ್ಭರ ಯೋಜನೆಗೆ ಪೂರಕವಾಗಿ, ವೋಕಲ್‌ ಫಾರ್‌ ಲೋಕಲ್‌ ಘೋಷಣೆಗೆ ಪುಷ್ಟಿ ನೀಡು ವಂತೆ ದೇಸೀಯ ಉತ್ಪನ್ನಗಳ ಹುನಾರ್‌ ಹಾಟ್‌ ಮೇಳ ವನ್ನು ಆಯೋಜಿಸಲಾಗಿದೆ. ಈ ಮೇಳ ಈಗಾಗಲೇ 24 ಬಾರಿ ದೇಶದ ವಿವಿಧ ಭಾಗಗಳಲ್ಲಿ ನಡೆದಿದ್ದು, ಕರ್ನಾ ಟಕದಲ್ಲಿ ಮೊದಲನೆಯ ಬಾರಿಗೆ ನಡೆಸಲಾಗುತ್ತಿದೆ ಎಂದರು.

ದೇಶದಲ್ಲಿ ಹಲವಾರು ಧರ್ಮ, ಜಾತಿ, ಆಚಾರ- ವಿಚಾರ, ಸಂಸ್ಕೃತಿ ಇದೆ. ಈ ಮೇಳ ವಿವಿಧ ರೀತಿಯ  ಕರಕುಶಲ, ಕಲಾತ್ಮಕ ವಸ್ತುಗಳ ಮೂಲಕ ಆಯಾ ಸಂಸ್ಕೃತಿ, ಧರ್ಮವನ್ನು ಪ್ರತಿನಿಧಿಸುತ್ತದೆ. ದೇಶದಲ್ಲಿ  ಬೃಹತ್‌ ಕೈಗಾರಿಕೆಗಳ ಸಂಖ್ಯೆ ಹೆಚ್ಚಾಗುವಂತೆ ಸಣ್ಣಪುಟ್ಟ ಕರಕುಶಲ ಕೆಲಸಗಳನ್ನು ಮಾಡುವವರ  ಸಂಖ್ಯೆಯೂ ಹೆಚ್ಚಳವಾಗಬೇಕು. ಮೈಸೂರು ಸಿಲ್ಕ್ ಸೀರೆ, ಚನ್ನಪಟ್ಟಣ ಗೊಂಬೆಗಳು ಮತ್ತಿತರ ಸ್ಥಳೀಯ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ದೊರೆಯಬೇಕು. ಈ ನಿಟ್ಟಿನಲ್ಲಿ ಇಂತಹ ಮೇಳಗಳು  ಸಹಕಾರಿಯಾಗುತ್ತವೆ ಎಂದು ಹೇಳಿದರು.

ರಾಜ್ಯ ಯುವಜನ ಹಾಗೂ ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ದೇಸೀಯ ಉತ್ಪನ್ನಗಳ ಬಳಕೆ ಹೆಚ್ಚಾಗಬೇಕು. ಆಗ ಮಾತ್ರ ಪ್ರಧಾನಿ ಮೋದಿಯವರ ಹೇಳಿಕೆಯಂತೆ ಲೋಕಲ್‌ ಟು ಗ್ಲೋಬಲ್‌ ಆಗಲು ಸಾಧ್ಯ. ಚೀನಾ ವಸ್ತುಗಳ ಬಳಕೆ ಬಿಟ್ಟು, ಪ್ರತಿ ಮನೆಯಲ್ಲೂ ಸ್ಥಳೀಯ ಉತ್ಪನ್ನಗಳ ಬಳಕೆ ಆರಂಭವಾಗಬೇಕು. ದೇಸೀಯ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆಯ ಸಮಸ್ಯೆ ಇದೆ.  ಅದಕ್ಕಾಗಿ ಉತ್ತಮ ಮಾರುಕಟ್ಟೆ ನಿರ್ಮಾಣ ಆಗಬೇಕು. ಆ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೆಲಸ ಮಾಡಲಿದೆ ಎಂದರು.

ಇದನ್ನೂ ಓದಿ :ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪಕ್ಷಾಂತರ

ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್‌ ಸಿಂಹ, ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಪಿ.ಕೆ.ದಾಸ್‌, ಎನ್‌ಎಂಡಿ ಎಫ್ಸಿ ಮುಖ್ಯಸ್ಥ ಮೊಹಮದ್‌ ಶಹಬಾಜ್‌ ಆಲಿ, ಸಿಪಿಎಸ್‌ ಭಕ್ಷಿ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್‌ ಕುಮಾರ್‌ ಗೌಡ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

Telangana: ACP ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ; 3.5 ಕೋಟಿ ರೂ. ಆಸ್ತಿ ಪತ್ತೆ!

1-eqwwqewqe

KKR ಫೈನಲ್ ಲಗ್ಗೆ ಸಂಭ್ರಮ : ಶಾರುಖ್ ಖಾನ್ ಕ್ಷಮೆ ಕೇಳಿದ್ದು ಯಾಕೆ? Watch Video

1-mysore

Mysore: ಒಂದೇ ಕುಟುಂಬದ ನಾಲ್ವರು ಸಾವು; ಅನಿಲ ಸೋರಿಕೆ ಶಂಕೆ

7

ಹೊಯ್ಸಳ ಪೊಲೀಸರನ್ನು ಕಳ್ಳ ಕಳ್ಳ ಎಂದು ಬೆನ್ನಟ್ಟಿದ ಸಾರ್ವಜನಿಕರು!

1-dasdasd

NDA ಅಭ್ಯರ್ಥಿ ವಿರುದ್ಧ ಸ್ಪರ್ಧೆ: ಖ್ಯಾತ ನಟ ಪವನ್ ಸಿಂಗ್ ಬಿಜೆಪಿಯಿಂದ ಉಚ್ಚಾಟನೆ

6

Bengaluru: 13 ವರ್ಷದ ಅಪ್ರಾಪ್ತ ಸಹೋದರನಿಂದಲೇ 3 ತಿಂಗಳ ಗರ್ಭಿಣಿಯಾದ ತಂಗಿ!

Rave party: ದಾಳಿ ವೇಳೆ ಈಜುಕೊಳಕ್ಕೆ ಡ್ರಗ್ಸ್‌ ಎಸೆದ ವ್ಯಸನಿಗಳು

Rave party: ದಾಳಿ ವೇಳೆ ಈಜುಕೊಳಕ್ಕೆ ಡ್ರಗ್ಸ್‌ ಎಸೆದ ವ್ಯಸನಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mysore

Mysore: ಒಂದೇ ಕುಟುಂಬದ ನಾಲ್ವರು ಸಾವು; ಅನಿಲ ಸೋರಿಕೆ ಶಂಕೆ

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

8

Bengaluru Road: ಮಳೆ ನಿಂತ ನಂತರ ರಸ್ತೆ ಗುಂಡಿ ದುರಸ್ತಿ  ಶುರು 

7

ಹೊಯ್ಸಳ ಪೊಲೀಸರನ್ನು ಕಳ್ಳ ಕಳ್ಳ ಎಂದು ಬೆನ್ನಟ್ಟಿದ ಸಾರ್ವಜನಿಕರು!

6

Bengaluru: 13 ವರ್ಷದ ಅಪ್ರಾಪ್ತ ಸಹೋದರನಿಂದಲೇ 3 ತಿಂಗಳ ಗರ್ಭಿಣಿಯಾದ ತಂಗಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Telangana: ACP ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ; 3.5 ಕೋಟಿ ರೂ. ಆಸ್ತಿ ಪತ್ತೆ!

1-eqwwqewqe

KKR ಫೈನಲ್ ಲಗ್ಗೆ ಸಂಭ್ರಮ : ಶಾರುಖ್ ಖಾನ್ ಕ್ಷಮೆ ಕೇಳಿದ್ದು ಯಾಕೆ? Watch Video

1-mysore

Mysore: ಒಂದೇ ಕುಟುಂಬದ ನಾಲ್ವರು ಸಾವು; ಅನಿಲ ಸೋರಿಕೆ ಶಂಕೆ

Actor Yash: ರಾಮಾಯಣದಲ್ಲಿ ರಿಯಲ್‌ ಗೋಲ್ಡ್‌ ಬಳಕೆ

Actor Yash: ರಾಮಾಯಣದಲ್ಲಿ ರಿಯಲ್‌ ಗೋಲ್ಡ್‌ ಬಳಕೆ

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.