ತಾಪಂ ಅಧ್ಯಕ್ಷರಿಗೆ ಸನ್ಮಾನ ಸಮಾರಂಭ
ತಾಪಂನಲ್ಲಿ ಕುರುಹಿನಶೆಟ್ಟಿ ಮಹಿಳಾ ಸಂಘದ ವತಿಯಿಂದ ತಾಪಂ ಅಧ್ಯಕ್ಷೆ ದಾಕ್ಷಾಯಿಣಿ ಪೂರ್ಣೇಶ್ ಅವರನ್ನು ಅಭಿನಂದಿಸಲಾಯಿತು.
Team Udayavani, Feb 7, 2021, 5:28 PM IST
ಚಿಕ್ಕಮಗಳೂರು: ತಾಪಂ ಅಧ್ಯಕ್ಷೆ ದಾಕ್ಷಾಯಿಣಿ ಪೂರ್ಣೇಶ್ ಅವರು ಕುರುಹಿನಶೆಟ್ಟಿ ಸಮುದಾಯದ ಏಳಿಗೆಗೆ ಶ್ರಮಿಸುವಂತೆ ಜಿಲ್ಲಾ ಕುರುಹಿನಶೆಟ್ಟಿ ಮಹಿಳಾ ಸಂಘದ ಅಧ್ಯಕ್ಷೆ ಪುಷ್ಪಾ ರಾಜೇಂದ್ರ ಹೇಳಿದರು.
ಶನಿವಾರ ನಗರದ ತಾಪಂನಲ್ಲಿ ಕುರುಹಿನ ಶೆಟ್ಟಿ ಮಹಿಳಾ ಸಂಘದಿಂದ ತಾಪಂ ಅಧ್ಯಕ್ಷೆ ದಾಕ್ಷಾಯಿಣಿ ಪೂರ್ಣೇಶ್ ಅವರನ್ನು ಅಭಿನಂದಿಸಿ ಅವರು
ಮಾತನಾಡಿದರು. ಶಾಸಕ ಸಿ.ಟಿ. ರವಿ ಅವರು ಸಮುದಾಯವನ್ನು ಗುರುತಿಸಿ ತಾಪಂ ಅಧ್ಯಕ್ಷಸ್ಥಾನ ದೊರೆಯುವಂತೆ ಮಾಡಿದ್ದಾರೆ. ಈ ನಿಟ್ಟಿನಲ್ಲ ಅಧ್ಯಕ್ಷರು ಅಭಿವೃದ್ಧಿ ಕಾರ್ಯಗಳನ್ನು ನಡೆಸುವ ಮೂಲಕ ಸಮುದಾಯಕ್ಕೆ ಸರ್ಕಾರಿ ಸೌಲಭ್ಯಗಳನ್ನು ದೊರೆಯುವಂತೆ ಮಾಡಬೇಕು ಎಂದರು.
ತಾಪಂ ಅಧ್ಯಕ್ಷೆ ದಾಕ್ಷಾಯಿಣಿ ಪೂರ್ಣೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಸ್ಥಾನಮಾನಗಳು ಲಭಿಸುತ್ತಿವೆ. ಎಲ್ಲರ ಸಹಕಾರದಿಂದ ಕುರುಹಿನಶೆಟ್ಟಿ ಸಮುದಾಯದ ಏಳಿಗೆಗೆ ಶ್ರಮಿಸುವುದಾಗಿ ತಿಳಿಸಿದರು.
ಕುರುಹಿನ ಶೆಟ್ಟಿ ಮಹಿಳಾ ಸಂಘದ ನಿರ್ದೇಶಕರಾದ ತನುಜಾ ಶಿವಶಂಕರ್, ಚಂದ್ರಾವತಿ ಶಂಕರ್, ಪದ್ಮಾ ಮಹೇಶ್, ಕವಿತಾ ಹಾಲಪ್ಪ, ಕಲಾ ದಾನಪ್ಪ, ಪ್ರತಿಮಾ ಗಿರೀಶ್, ವಿನುತಾ ಪ್ರಭಾಕರ್, ಚಂದ್ರಿಕಾ ತಿಮ್ಮಶೆಟ್ಟಿ, ಪ್ರತಿಮಾ ವೆಂಕಟೇಶ್, ಸೀಮಾ ವಿಶ್ವನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ