ನೂತನ ಮಂದಿರದ ನಿರ್ಮಾಣಕ್ಕೆ ಭಕ್ತರ ಸಹಕಾರ ಅಗತ್ಯ: ವಿನೋದ್‌ ವಾಘಸಿಯಾ


Team Udayavani, Feb 7, 2021, 7:44 PM IST

New temple construction requires the cooperation of believers

ಮುಂಬಯಿ: ಸಮಿತಿಯು ಕಳೆದ 17 ವರ್ಷಗಳಿಂದ ಸದಸ್ಯರ ಹಾಗೂ ಭಕ್ತರ ಸಹಾಕಾರದಿಂದ ಪ್ರತಿಯೊಂದು ಕಾರ್ಯಕ್ರಮವನ್ನೂ ಯಶಸ್ವಿಯಾಗಿ ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಈ ಜಾಗದಲ್ಲಿ ಶ್ರೀ ಶನೀಶ್ವರ ಮಂದಿರದ ನಿರ್ಮಾಣದ ಕೆಲಸವು ಆರಂಭಗೊಳ್ಳಲಿದೆ. ಮಂದಿರದ ರೂಪುರೇಷೆಯು ವಾಸ್ತು ತಜ್ಞರ ಮತ್ತು ಧಾರ್ಮಿಕ ಚಿಂತಕರ ಸಲಹೆ ಸೂಚನೆಯನ್ನು ಪಡೆದು ಶೀಘ್ರದಲ್ಲೇ ತಯಾರಾಗಲಿದೆ. ಈ ಧಾರ್ಮಿಕ ಕಾರ್ಯಕ್ಕೆ ಸರ್ವ ಭಕ್ತರ ಸಹಕಾರ ಅಗತ್ಯ ಎಂದು ಸಮಿತಿಯ ಗೌರವಾಧ್ಯಕ್ಷ ಹಾಗೂ ಮಹಾಸಭೆಯ ಅದ್ಯಕ್ಷ ವಿನೋದ್‌ ವಾಘಸಿಯಾ ಹೇಳಿದರು.

ಅವರು ಜ. 24ರಂದು ಮಂದಿರದ ವಠಾರದಲ್ಲಿ ನಡೆದ ಸಂಸ್ಥೆಯ 17ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

ಅದಕ್ಷೆ ವಿದ್ಯಾ ಅಶೋಕ್‌ ಕರ್ಕೇರ ಅವರು ಮಾತನಾಡಿ, ತನ್ನೊಂದಿಗೆ ಹಲವಾರು ಯಶಸ್ವೀ ಕಾರ್ಯಕ್ರಮಗಳನ್ನು ನಡೆಸಲು ಸಹಕರಿಸಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಎಲ್ಲರ ಸಹಕಾರದಿಂದ ಭವ್ಯ ಶನೀಶ್ವರ ಮಂದಿರ ಶೀಘ್ರದಲ್ಲೇ ನಿರ್ಮಾಣವಾಗಲಿ ಎಂದರು. ಉಪಾಧ್ಯಕ್ಷರಾದ ಸಂಪತ್‌ ಶೆಟ್ಟಿ ಅವರು ಮಾತನಾಡಿ, 2004ರಲ್ಲಿ ಅಶೋಕ್‌ ಕರ್ಕೇರರ ಸಾರಥ್ಯದಲ್ಲಿ ಹಲವಾರು ಧಾರ್ಮಿಕ ಮುಖಂಡರ ಮತ್ತು ದಾನಿಗಳ ಸಹಕಾರದಿಂದ ಆರಂಭಗೊಂಡ ಶ್ರೀ ಶನೀಶ್ವರ ಸೇವಾ ಸಮಿತಿಯು ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಶ್ರದ್ಧಾಭಕ್ತಿಯ ಕೇಂದ್ರವಾಗಿ ಮೆರೆಯುತ್ತಿದೆ. ಮುಂದಿನ ದಿನಗಳಲ್ಲಿ ಗೌರವಾಧ್ಯಕ್ಷರಾದ ವಿನೋದ್‌ ವಾಘಸಿಯಾ ಹಾಗೂ ಅಧ್ಯಕ್ಷೆ ವಿದ್ಯಾ ಕರ್ಕೇರ ಅವರ ಸಂಪೂರ್ಣ ಬೆಂಬಲ ಮತ್ತು ಭಕ್ತರ ಸಹಕಾರದಿಂದ ಮೀರಾ-ಭಾಯಂದರ್‌ನಲ್ಲಿ ನಿರ್ಮಾಣವಾಗಲಿರುವ ಭವ್ಯ ಶನಿಮಂದಿರದ ನಿರ್ಮಾಣಕ್ಕೆ ನಾವೆಲ್ಲಾ ಸಹಕರಿಸೋಣ ಎಂದರು.

ಇದನ್ನೂ ಓದಿ:ಅತೀ ಹೆಚ್ಚು ಡೌನ್ ಲೋಡ್: ಟಿಕ್ ಟಾಕ್ ಹಿಂದಿಕ್ಕಿ ಅಗ್ರಸ‍್ಥಾನ ಪಡೆದ ಟೆಲಿಗ್ರಾಂ

ಮಂದಿರದಲ್ಲಿ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮವು ಬಹಳ ಅಚ್ಚುಕಟ್ಟಾಗಿ ಶ್ರದ್ಧಾಭಕ್ತಿಯಿಂದ ನಡೆಯುತ್ತಿದ್ದು, ಕಾರ್ಯಕಾರಿ ಸಮಿತಿಯ ಸದಸ್ಯರ ಉತ್ತಮ ಕಾರ್ಯ ತತ್ಪರತೆಯಿಂದ ಕ್ಷೇತ್ರದ ಮೇಲಿನ ನಂಬಿಕೆ ಇಟ್ಟು ಬರುವ ಭಕ್ತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚಾಗುತ್ತಿರುವುದು ಈ ಜಾಗದ ವಿಶೇಷತೆಯಾಗಿದೆ. ಇಂಥಹ ಪವಿತ್ರ ಕ್ಷೇತ್ರದಲ್ಲಿ ದೇವರ ಸೇವೆಯನ್ನು ಮಾಡುವ ಅವಕಾಶ ಸಿಕ್ಕಿರುವುದು ಈ ಸಮಿತಿಯ ಸದಸ್ಯರ ಸೌಭಾಗ್ಯ ಎಂದು ಧಾರ್ಮಿಕ ಚಿಂತಕ, ವಿದ್ವಾನ್‌ ರಾಧಾಕೃಷ್ಣ ಭಟ್‌ ಅವರು ನುಡಿದು ಆಶೀರ್ವಚನ ನೀಡಿ ಶುಭಹಾರೈಸಿದರು.

ತುಳುನಾಡ ಸೇವಾ ಸಮಾಜ ಮೀರಾ-ಭಾಯಂದರ್‌ ಅಧ್ಯಕ್ಷರಾದ ಡಾ| ರವಿರಾಜ್‌ ಸುವರ್ಣ, ಮಹಿಳಾ ವಿಭಾಗದ ಅದ್ಯಕ್ಷೆ ಮಲ್ಲಿಕಾ ಶೆಟ್ಟಿ,ಉಪಾಧ್ಯಕ್ಷ ಗುಣಕಾಂತ ಶೆಟ್ಟಿ ಕರ್ಜೆ, ವಸಂತಿ ಶೆಟ್ಟಿ. ಮತ್ತು ಕಾರ್ಕಳ ಸದಾನಂದ್‌ ಪೂಜಾರಿಯವರು ಸಮಿತಿಯಲ್ಲಿ 2004ರಿಂದ ನಡೆದು ಬಂದ ಧಾರ್ಮಿಕ ಕಾರ್ಯದ ಬಗ್ಗೆ ಸಂದಭೋìಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಕೋಶಾಧಿಕಾರಿ ಅಚ್ಚುತಾ ಕೋಟ್ಯಾನ್‌, ಮಾಲಾ ಜೈನ್‌, ಜತೆ ಕೋಶಾಧಿಕಾರಿ ಜಯಕರ ಶೆಟ್ಟಿ ಮುದ್ರಾಡಿ ಉಪಸ್ಥಿತದ್ದರು. ಕಾರ್ಕಳ ಸದಾನಂದ್‌ ಅವರು ವಂದಿಸಿದರು.
ಮಹಾಸಭೆಯಲ್ಲಿ ಸದಸ್ಯರ ಅನುಮತಿಯೊಂದಿಗೆ ಕಾರ್ಯಕಾರಿ ಸಮಿತಿಯ ಕೆಲವು ಸ್ಥಾನಗಳನ್ನು ಬದಲಾವಣೆ ಮಾಡಲಾಯಿತು.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.