ರಾಜ್ಯದ ಅಭಿವೃದ್ಧಿಗೆ ಮೈತ್ರಿ: ಕುಮಾರಸ್ವಾಮಿ
Team Udayavani, Feb 8, 2021, 4:46 PM IST
ಚನ್ನಪಟ್ಟಣ: ಕೇವಲ ಸಭಾಪತಿ ಸ್ಥಾನಕ್ಕಾಗಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು ಬಿಟ್ಟರೆ, ಬೇರೆ ರೀತಿ ಹೊಂದಾಣಿಕೆ ಇಲ್ಲ. ವಿಷಯಾಧಾರಿತ ಹಾಗೂ ರಾಜ್ಯದ ಅಭಿವೃದ್ಧಿಗೆ ಮೈತ್ರಿಯಾಗುತ್ತೇವೆ ವಿನಾ ಜನವಿರೋಧಿ ನೀತಿಗಳ ವಿರುದ್ಧ ಎಂದಿಗೂ ರಾಜಿ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣ ತಾಲೂಕಿನ ಬೇವೂರಿನಲ್ಲಿ ನೂತನ ಉದ್ಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ನಾನು ಸೂಕ್ಷ್ಮವಾಗಿ ಎಲ್ಲವನ್ನು ಗಮನಿಸುತ್ತಿದ್ದೇನೆ. ಧಾರ್ಮಿಕ ಗುರುಗಳೇ ಸಮಾಜದ ಪರವಾಗಿ ಹೋರಾಟಕ್ಕಿಳಿದಿದ್ದಾರೆ. ಇದು ದಾರಿತಪ್ಪುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಬೇಕು. ಧಾರ್ಮಿಕ ಗುರುಗಳ ಭಾವನೆಗೂ ಸರ್ಕಾರ ಗೌರವ ಕೊಡಬೇಕು ಎಂದರು.
ಇದನ್ನು ಓದಿ:ಉಪಚುನಾವಣೆ ಹೊತ್ತಲ್ಲೇ ಮಸ್ಕಿಗೆ ಮತ್ತೂಂದು ಬಂಪರ್!
ಪ್ರಧಾನಿ ಮೋದಿಗೆ ರೈತರ ಬಗ್ಗೆ ಗೌರವ ಇದ್ದರೆ ರೈತರ ಸಭೆ ಕರೆಯಬೇಕಿತ್ತು. ಕೃಷಿ ಮಂತ್ರಿಯನ್ನು ಬಿಟ್ಟು ಸಭೆ ಮಾಡಿಸುವ ಬದಲು ಸ್ವತಃ ಪ್ರಧಾನಿಗಳೇ ಸಭೆ ಮಾಡಲಿ. ಕೇಂದ್ರದ ಕಾಯ್ದೆಗಳಿಂದ ರೈತರಿಗೆ ಅನುಕೂಲ ಏನೆಂದು ತಿಳಿಸಿ, ಗೊಂದಲ ಪರಿಹರಿಸಬೇಕು. ರೈತರು ಅಕ್ಟೋಬರ್ ವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ. ಕಳೆದ 70 ದಿನಗಳಿಂದ ದೆಹಲಿಯಲ್ಲಿ ಹೋರಾಟ ಮಾಡುತ್ತಿದ್ದು, ದೇಶದಲ್ಲಿ ಶಾಂತಿ ಕಾಪಾಡಲು ಪ್ರಧಾನಿ ಮೋದಿ ಕ್ರಮವಹಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್ : ಗಿನ್ನೆಸ್ ಅಧಿಕಾರಿಗಳ ಭೇಟಿ
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ