ಮುಸ್ಲಿಮರ ಹಿನ್ನಡೆಗೆ ಜನಪ್ರತಿನಿಧಿಗಳೇ ಕಾರಣ: ಉಸ್ತಾದ್‌

ದೇಶದ ಎಷ್ಟೋ ಜೈಲುಗಳಲ್ಲಿ ವಿಚಾರಣೆ ನಡೆಸದೆ ಮುಸ್ಲಿಮರನ್ನು ಬಂಧಿ  ಮಾಡಲಾಗಿದೆ.

Team Udayavani, Feb 8, 2021, 6:11 PM IST

ಮುಸ್ಲಿಮರ ಹಿನ್ನಡೆಗೆ ಜನಪ್ರತಿನಿಧಿಗಳೇ ಕಾರಣ: ಉಸ್ತಾದ್‌

ರಾಯಚೂರು: ಇಂದಿಗೂ ವ್ಯವಸ್ಥೆಯೊಂದಿಗೆ ಹೋರಾಡುತ್ತಿರುವ ಮುಸ್ಲಿಮರ ಸಮಸ್ಯೆಗಳ ಬಗ್ಗೆ ಮುಸ್ಲಿಂ ಜನಪ್ರತಿನಿಧಿಗಳೇ ಧ್ವನಿ ಎತ್ತದಿರುವುದು ನಿಜಕ್ಕೂ ವಿಪರ್ಯಾಸ ಎಂದು ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ರಜಾಕ್‌ ಉಸ್ತಾದ್‌ ಬೇಸರ ವ್ಯಕ್ತಪಡಿಸಿದರು.

ನಗರದ ಅತ್ತನೂರು ಪಂಕ್ಷನ್‌ ಹಾಲ್‌ ನಲ್ಲಿ ಅಂಜುಮನ್‌ ಎ ರಾಯಚೂರಿನಿಂದ ರವಿವಾರ ಆಯೋಜಿಸಿದ್ದ ಕರ್ನಾಟಕದಲ್ಲಿ ಮುಸ್ಲಿಮರಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸ್ಥಿತಿಗತಿ ಕುರಿತ ಸಮಾವೇಶದಲ್ಲಿ ಮಾತನಾಡಿದ ಅವರು, ಎಲ್ಲ ರಂಗದಲ್ಲೂ ಹಿಂದುಳಿದ ಮುಸ್ಲಿಮರು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ, ಈ ಬಗ್ಗೆ ಸ್ಥಳೀಯ ಸಂಸ್ಥೆಗಳಿಂದ ಸಂಸತ್‌ವರೆಗೂ ಎಲ್ಲಿಯೂ ಚರ್ಚೆ ಆಗುತ್ತಿಲ್ಲ. ಸಮುದಾಯ ಸೌಲಭ್ಯಗಳಿಲ್ಲದೇ ಹೀನ ಸ್ಥಿತಿ ಎದುರಿಸುತ್ತಿದ್ದರೂ ಇದೇ ಸಮುದಾಯದಿಂದ ಗೆದ್ದು ಬಂದವರು ಕ್ಯಾರೇ ಎನ್ನುತ್ತಿಲ್ಲ ಎಂದು ದೂರಿದರು.

ಸರ್ಕಾರಿ ಹುದ್ದೆ ಪಡೆಯುವಲ್ಲಿ ಮುಸ್ಲಿಮರ ಹಿಂದುಳಿದಿದ್ದಾರೆ. ವಿಧಾನಸಭೆಯಲ್ಲಿ ಮುಸ್ಲಿಂ ಶಾಸಕರ ಸಂಖ್ಯೆ ಕಡಿಮೆ ಇದೆ. ಇದರಿಂದ ಸಮಾಜಕ್ಕೆ ನ್ಯಾಯೋಚಿತವಾಗಿ ದಕ್ಕಬೇಕಾದ ಸೌಲಭ್ಯ, ಅನುದಾನಗಳಲ್ಲೂ ವಂಚನೆಯಾಗುತ್ತಿದೆ. ಮುಸ್ಲಿಮರ ಕಲ್ಯಾಣಕ್ಕಾಗಿ ಹಿಂದೆ ಜಾರಿ ಮಾಡಿದ್ದ ಸಮುದಾಯದ ಯೋಜನೆಗಳು ಕೂಡ ಸ್ಥಗಿತಗೊಂಡಿವೆ. ಜಾತ್ಯತೀತ ತತ್ವ ಪಾಲಿಸುವುದಾಗಿ ಹೇಳುವ ಜನನಾಯಕರು ಕೂಡ ಮುಸ್ಲಿಮರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುತ್ತಿಲ್ಲ ಎಂದರು.

ಮತದಾರ ಪಟ್ಟಿಯಲ್ಲೂ ವಂಚನೆ ಮಾಡಿ ಮತಗಟ್ಟೆಗಳನ್ನು ಬದಲಿಸಲಾಗುತ್ತಿದೆ. ಇದರಿಂದ ಮುಸ್ಲಿಮರು ಹಕ್ಕು ಚಲಾಯಿಸುವಲ್ಲೂ ವಿಫಲರಾಗುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲೂ ಅವಕಾಶ ವಂಚನೆ ಮಾಡುತ್ತಿದ್ದು, ಮುಸ್ಲಿಮರನ್ನು ರಾಜಕೀಯವಾಗಿ ತುಳಿಯುವ ಪಿತೂರಿ ನಡೆಯುತ್ತಿದೆ ಎಂದು ದೂರಿದರು.

ನವದೆಹಲಿಯ ಐಎಎಸ್‌- ಐಪಿಎಸ್‌ ತರಬೇತುದಾರ ಸಮೀರ ಅಹ್ಮದ್‌ ಮಾತನಾಡಿ, ಮುಸ್ಲಿಮರು ಹಿಂದುಳಿಯಲು ಮುಖ್ಯ ಕಾರಣವೇ ಅನಕ್ಷರತೆ. ದೇಶದ ಎಷ್ಟೋ ಜೈಲುಗಳಲ್ಲಿ ವಿಚಾರಣೆ ನಡೆಸದೆ ಮುಸ್ಲಿಮರನ್ನು ಬಂಧಿ  ಮಾಡಲಾಗಿದೆ. ಇದನ್ನು ಕೇಳುವಷ್ಟು ಕೂಡ ಜ್ಞಾನ ಇಲ್ಲದಾಗಿದೆ. ಕಾನೂನಿನ ಬಗ್ಗೆ ಗೊತ್ತಿದ್ದರೆ ಈ ಸಮಸ್ಯೆ ಎದುರಾಗುತ್ತಿರಲಿಲ್ಲ. ಹೀಗಾಗಿ ಶಿಕ್ಷಣದಿಂದ ಮಾತ್ರ ನಮ್ಮ ಹಕ್ಕುಗಳನ್ನು ಕೇಳಿ ಪಡೆಯುವ ಶಕ್ತಿ ಬರುತ್ತದೆ ಎಂದರು.

ಮಾಜಿ ಶಾಸಕ ಸಯ್ಯದ್‌ ಯಾಸಿನ್‌, ಮುಖಂಡರಾದ ಸಮ್ಮದ್‌ ಸಿದ್ಧಿಖಿ, ಸೈಯದ್‌ ಮಹ್ಮದ್‌ ಯದುಲ್ಲಾ ಹುಸೇನಿ, ಬಷಿರುದ್ದೀನ್‌, ಮುಜಿಬುದ್ದೀನ್‌, ಅಬ್ದುಲ್
ಕರೀಂ, ಸಾಜಿದ್‌ ಸಮೀರ್‌, ಎಂ.ಕೆ.ಬಾಬರ್‌, ಅಬ್ದುಲ್‌ ಫಿರೋಜ್‌ ಸೇರಿದಂತೆ ಅನೇಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.