ಗ್ರಾಮೀಣ ಕಲೆ ಉಳಿವಿಗೆ ಸರ್ಕಾರ ಆದ್ಯತೆ ನೀಡಲಿ: ಹಿರೇಮಠ
Team Udayavani, Feb 8, 2021, 7:07 PM IST
ಮುಂಡರಗಿ: ಗ್ರಾಮೀಣ ಪ್ರದೇಶದಲ್ಲಿ ನಾಟಕ, ಬಯಲಾಟ ನಡೆಯುತ್ತಿರುವುದರಿಂದ ಗ್ರಾಮೀಣ ಕಲೆಗಳು ಉಳಿಯುತ್ತಿವೆ. ಆದರೆ ಯಾಂತ್ರಿಕ ಯುಗದಲ್ಲಿ ನಾಟಕಗಳು ಕಣ್ಮರೆಯಾಗುತ್ತಿದ್ದು, ಗ್ರಾಮೀಣ ಕಲೆಗಳ ಉಳಿವಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಡಂಬಳ ತೋಂಟದಾರ್ಯ ಮಠದ ವ್ಯವಸ್ಥಾಪಕ ಜಿ.ವಿ. ಹಿರೇಮಠ ಹೇಳಿದರು.
ಡಂಬಳ ಗ್ರಾಮದ ಶ್ರೀ ಮರುಳಸಿದ್ದೇಶ್ವರ ನ್ಯಾಟ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಹಾಗೂ ಮಾಳಿಂಗರಾಯ ದೇವಸ್ಥಾನ ಸೇವಾ ಅಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ “ಸಂಪೂರ್ಣ ರಾಮಾಯಣ’ ಬಯಲಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಕರ ಮೇಲೆ ಸಾಮಾಜಿಕ ಜಾಲತಾಣಗಳು ಹೆಚ್ಚು ಪ್ರಭಾವ ಬೀರಿ ಕಲೆ, ಸಾಹಿತ್ಯದ ಅಭಿರುಚಿ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು.
ಇದನ್ನೂ ಓದಿ :ಕವನಗಳು ಓದುವ ಆಸಕ್ತಿ ಹೆಚ್ಚಿಸಲಿ : ಶ್ರೀ
ಈ ಸಂದರ್ಭದಲ್ಲಿ ಗುರುಶಾಂತಯ್ಯ ಗುರುವಿನ, ಗೋಣಿಬಸಪ್ಪ ಕೊರ್ಲಹಳ್ಳಿ, ಗವಿಸಿದ್ದಪ್ಪ ಮಠದ, ಗ್ರಾಪಂ ಅಧ್ಯಕ್ಷೆ ಬಸಮ್ಮ ಹಾದಿಮನಿ, ಉಪಾಧ್ಯಕ್ಷೆ ಯಲ್ಲಮ್ಮ ಬಂಡಿ, ಮರಿತೆಮ್ಮಪ್ಪ ಆದಮ್ಮನವರ, ಬಸವರಡ್ಡಿ ಬಂಡಿಹಾಳ, ಗ್ರಾಪಂ ಸದಸ್ಯ ಕುಮಾರ ಮಾನೆ, ಹುಸೇನ್ ಮೂಲಿಮನಿ, ಬಸಪ್ಪ ಮೂಕಬಸಪ್ಪನವರ, ಹುಲಗಪ್ಪ ಜೊಂಡಿ, ವಾಸಪ್ಪ ಕಾಶಭೋವಿ, ಲೆಂಕಪ್ಪ ಬಂಡಿ, ರಂಗಪ್ಪ ಜೊಂಡಿ, ಹನುಮಪ್ಪ ಬಿಡನಾಳ, ಸಿದ್ದಪ್ಪ ಮಠದ, ಮಂಜುನಾಥ ಬಿಸನಳ್ಳಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್ ಗರಿ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ