ಒಗ್ಗಟ್ಟಿನಿಂದ ಹೋರಾಡಿದರೆ ಮೀಸಲಾತಿ ಸಾಧ್ಯ  

ಸಾಮಾಜಿಕ-ಶೈಕ್ಷಣಿಕ ಪ್ರಗತಿಗಾಗಿ ಮೀಸಲಾತಿ­! ಸ್ವಾಮಿಗಳಿಗೆ ಕೈಜೋಡಿಸಿ ಶಕ್ತಿ ಪ್ರದರ್ಶಿಸಿ

Team Udayavani, Feb 8, 2021, 7:58 PM IST

Panchamasali

ಕಾರಟಗಿ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಈಗಾಗಲೇ ನಿರ್ಣಾಯಕ ಘಟ್ಟ ತಲುಪಿದ್ದು, ಸರ್ಕಾರ 2ಎ ಮೀಸಲಾತಿ ನೀಡಬೇಕಾದರೆ ಸಮುದಾಯದವರೆಲ್ಲರೂ ಒಗ್ಗೂಡಿ ಹೋರಾಟ ಮಾಡಬೇಕಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಚನ್ನಬಸಪ್ಪ ಸುಂಕದ ಹೇಳಿದರು.

ಪಟ್ಟಣದ ಎಲ್‌ವಿಟಿ ಕಲ್ಯಾಣ ಮಂಟಪದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಒತ್ತಾಯಿಸಿ ತಾಲೂಕು ಪಂಚಮಸಾಲಿ ಸಮುದಾಯದಿಂದ ರವಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸಮುದಾಯಕ್ಕೆ ಮೀಸಲಾತಿ ಪಡೆಯಲು ಹರಿಹರ ಪೀಠದ ವಚನಾನಂದ ಸ್ವಾಮೀಜಿ ಹಾಗೂ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮಿಗಳು ಒಂದಾಗಿದ್ದಾರೆ. ಈ ಮೂಲಕ ನಮ್ಮಲ್ಲಿ ಭಿನ್ನಭಿಪ್ರಾಯಗಳಿಲ್ಲ ಎಂಬ ಸಂದೇಶ ಸಾರಿದ್ದಾರೆ. ನಾವೆಲ್ಲರೂ ಅವರಿಗೆ ಕೈ ಜೋಡಿಸುವ ಮೂಲಕ ಹೋರಾಟಕ್ಕೆ ಬಲ ತುಂಬಬೇಕಿದೆ. ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಮೀಸಲಾತಿ ಕೇಳುತ್ತಿದ್ದೇವೆ. ಈವರೆಗೆ ಶಾಂತಿಯುತ ಹೋರಾಟ ಹಮ್ಮಿಕೊಂಡಿದ್ದೇವೆ. ಸರ್ಕಾರ ಸಮುದಾಯದ ತಾಳ್ಮೆ ಪರೀಕ್ಷಿಸಬಾರದು.

ಸಮುದಾಯದ ಶಾಸಕರು ಹಾಗೂ ಸಂಸದರು ಮೀಸಲಾತಿ ವಿಚಾರದಲ್ಲಿ ಯಾವ ಮುಲಾಜಿಗೂ ಬಗ್ಗದೆ ಸರ್ಕಾರದ ಮೇಲೆ ಒತ್ತಡ ತರುವ ಕಾರ್ಯ ಮಾಡಬೇಕು. ಜನಪ್ರತಿನಿ ಧಿಗಳು, ಸಮುದಾಯದ ಮುಖಂಡರು ಒಗ್ಗಟ್ಟಿನ ಹೋರಾಟ ಮಾಡಿದರೆ ಜಯ ಖಂಡಿತ ದೊರೆಯುತ್ತದೆ ಎಂದರು.

ನಂತರ ಉಪನ್ಯಾಸ ಶಿವಾನಂದ ಮೇಟಿ ಮಾತನಾಡಿ, ಮೀಸಲಾತಿ ಪಡೆಯುವುದರಿಂದ ಮುಂದಿನ ಪೀಳಿಗೆಗೆ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಅನುಕೂಲವಾಗುತ್ತದೆ ಹಾಗಾಗಿ ಸಮಾಜ ಬಾಂಧವರು ಸಮಾಜದ ಸ್ವಾಮಿಗಳ ಜೊತೆಯಲ್ಲಿ ಕೈಜೋಡಿಸಿ ನಮ್ಮ ಶಕ್ತಿಯನ್ನು ಪ್ರದರ್ಶನ ಮಾಡಬೇಕಾಗಿದೆ. ಹೀಗಾಗಿ ಸಮಾಜ  ಬಾಂಧವರು ಸಮಾವೇಶದಲ್ಲಿ ಹೆಚ್ಚಿನ  ಸಂಖ್ಯೆಯಲ್ಲಿ ಪಾಲ್ಗೊಂಡು ಶಾಂತಿಯುತವಾಗಿ ಹೋರಾಟ ಮಾಡುವ ಮೂಲಕ ಮೀಸಲಾತಿ ಪಡೆದುಕೊಳ್ಳೊಣ ಎಂದರು.

ಸಮುದಾಯದ ಮುಖಂಡರಾದ ವಿರೂಪಾಕ್ಷಪ್ಪ ಕಟಾಂಬ್ಲಿ, ಕರಿಬಸಪ್ಪ ಶೀಲವಂತರ, ಗುರುಸಿದ್ದಪ್ಪ ಯರಕಲ್‌, ಅಮರೇಶ ಕುಳಗಿ, ಶರಣೇಗೌಡ ಬೂದಗುಂಪಾ, ಪರನಗೌಡ ಸೇರಿದಂತೆ ಇತರರು ಮಾತನಾಡಿ, ಸರಕಾರ ಸಮದಾಯದ ತಾಳ್ಮೆ, ಸಹನೆ ಪರೀಕ್ಷಿಸುವ ಕೆಲಸ ಮಾಡಬಾರದು. ಸರಕಾರದ ಮೇಲೆ ಭರವಸೆ ಇಟ್ಟು ಶಾಂತಿಯುತವಾಗಿ ಹೋರಾಟ ಮಾಡುತ್ತೇವೆ. ಇದು ಇಂದು ನಿನ್ನೆಯ ಬೇಡಿಕೆಯಲ್ಲ, ಬಹುದಿಗಳ ಬೇಡಿಕೆಯಾಗಿದ್ದು ಸರಕಾರಗಳು ಕೇವಲ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತ ಬಂದಿವೆ. ಈಗ ಅವೆಲ್ಲವನ್ನು ಬಿಟ್ಟು ಈ ಕೂಡಲೇ ಸರಕಾರ ಪಂಚಮಸಾಲ ಸಮಾಜಕ್ಕೆ 2ಎ ಮೀಸಲಾಯಿತಿ ನೀಡಬೇಕು. ಒಂದು ವೇಳೆ ಮೀಸಲಾತಿ ನೀಡದಿದ್ದರೆ ಮುಂದಿನ ದಿನ ಹೋರಾಟ ಉಗ್ರ ಸ್ವರೂಪ ತಾಳಲಿದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ :ಕಸಾಪ ಜನಪರ ಮಾಡುವೆ: ಜೋಶಿ

ಸಮಾಜದ ಮುಖಂಡರಾದ ಗುಂಡಪ್ಪ ಕುಳಗಿ, ಬಸವರಾಜಪ್ಪ ಚಳ್ಳೂರು, ಚಂದ್ರಶೇಖರ  ಪೊಲೀಸಪಾಟೀಲ್‌, ಎಪಿಎಂಸಿ ಅಧ್ಯಕ್ಷ ಸೋಮಶೇಖರಗೌಡ, ನಾಗಪ್ಪ ಎಲ್‌ವಿಟಿ, ಎಚ್‌. ಈಶಪ್ಪ, ಆನಂದಪ್ಪ ಅಬ್ಬಿಗೇರಿ, ರವಿಕುಮಾರ ಗುಂಡೂರು, ನಾಗರಾಜ ಬರಗೂರು, ಸಿದ್ಧನಗೌಡ ಕತ್ತಿ, ವೀರಣ್ಣ ಗೋನಾಳ, ಬಜಾರ ಲಿಂಗಪ್ಪ ಸೇರಿದಂತೆ ತಾಲೂಕಿನ ಸಮಾಜದ ಹಿರಿಯರು, ಯುವಕರು, ಮಹಿಳೆಯರು ಇತರರಿದ್ದರು.

 

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.