ವಿಕಲ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ
Team Udayavani, Feb 9, 2021, 3:25 PM IST
ಚಿಕ್ಕಮಗಳೂರು: ಅಂಗವೈಕಲ್ಯ ಹೊಂದಿದವರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಸರ್ಕಾರ ಮೂರು ಚಕ್ರದ ವಾಹನವನ್ನು ನೀಡುತ್ತಿದ್ದು ಇದರ ಸದುಪಯೋಗ ಪಡೆದು ಕೊಳ್ಳಬೇಕೆಂದು ಜಿಪಂ ಉಪಾಧ್ಯಕ್ಷ ಸೋಮಶೇಖರ್ ಹೇಳಿದರು.
ಸೋಮವಾರ ನಗರದ ಜಿಪಂ ಆವರಣದಲ್ಲಿ 2019-20ನೇ ಸಾಲಿನ ಜಿಪಂ ವತಿಯಿಂದ ವಿಕಲ ಚೇತನರಿಗೆ ಸಾಂಕೇತಿಕವಾಗಿ ಮೂರು ಚಕ್ರದ ವಾಹನ ವಿತರಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅಂಗವಿಕಲರ ಅನುದಾನದಡಿ ಕಳೆದ ಬಾರಿ 29 ವಾಹನಗಳನ್ನು ನೀಡಿದ್ದು, ಈ ಬಾರಿ 28 ವಾಹನಗಳನ್ನು ವಿತರಣೆ ಮಾಡಲಾಗಿದೆ. ಇದರ ಸದುಪಯೋಗವನ್ನು ಫಲಾನುಭವಿಗಳೇ ಪಡೆದುಕೊಳ್ಳಬೇಕು. ಅವರಿಗೂ ಸಹ ಸಾಮಾನ್ಯ ಜನರಂತೆ ಓಡಾಡಲು ಅನುಕೂಲವಾಗಬೇಕು ಎಂದರು.
ಇದನ್ನೂ ಓದಿ:ರೈತರ ಒಕ್ಕಲೆಬ್ಬಿಸುವ ಕಾಯ್ದೆ ತಂದಿದ್ದು ಬಿಜೆಪಿ: ಹೆಗ್ಡೆ
ಜಿಪಂ ಸದಸ್ಯೆ ಕವಿತ ಲಿಂಗರಾಜು ಮಾತನಾಡಿ, ಅಂಗವಿಕಲರ ಮೇಲೆ ನಮಗೆ ಕರುಣೆ ಇರಬಾರದು. ಬದಲಾಗಿ ನಾವು ಅವರಿಗೆ ಧೈರ್ಯ ತುಂಬುವ ಮೂಲಕ ಸ್ವಂತವಾಗಿ ದುಡಿಮೆ ಮಾಡುವ ಶಕ್ತಿ ನೀಡಬೇಕೆಂಬ ದೃಷ್ಟಿಯಲ್ಲಿ ವಾಹನಗಳನ್ನು ನೀಡಿದ್ದೇವೆ ಎಂದು ಹೇಳಿದರು. ಜಿಪಂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಎಸ್. ಪೂವಿತಾ ಹಾಗೂ ಜಿಪಂ ಸದಸ್ಯರಾದ ಜಸಂತಾ ಅನಿಲ್ ಕುಮಾರ್, ರವೀಂದ್ರ ಬೆಳವಾಡಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!