ವಾಲ್ಮೀಕಿ ಸಮುದಾಯದ ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಶೀಘ್ರ ಕ್ರಮ: ಸಿಎಂ ಯಡಿಯೂರಪ್ಪ
Team Udayavani, Feb 9, 2021, 3:31 PM IST
ದಾವಣಗೆರೆ: ವಾಲ್ಮೀಕಿ ಸಮುದಾಯದ ಎಸ್ ಟಿ ಮೀಸಲಾತಿ ಹೆಚ್ಚಳ ಬೇಡಿಕೆ ಶೀಘ್ರ ಈಡೇರಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಯವರು ಸಿಎಂ ಬಿಎಸ್ ವೈ ಎದುರೇ ವೇದಿಕೆಯಲ್ಲಿ ಘೋಷಿಸಿ, ಸಿಎಂ ಅವರಿಂದ ಬೇಡಿಕೆ ಈಡೇರಿಸುವ ಭರವಸೆ ಸಿಕ್ಕ ಮೇಲೆ ತಮ್ಮ ಹೇಳಿಕೆ ವಾಪಸ್ ಪಡೆದ ಘಟನೆಗೆ ಹರಿಹರ ತಾಲೂಕು ರಾಜನ ಹಳ್ಳಿಯಲ್ಲಿ ಮಂಗಳವಾರ ನಡೆದ ವಾಲ್ಮೀಕಿ ಜಾತ್ರೆ ಸಾಕ್ಷಿಯಾಯಿತು.
“ವಾಲ್ಮೀಕಿ ಸಮುದಾಯಕ್ಕೆ ಎಸ್ ಟಿ ಮೀಸಲಾತಿಯನ್ನು 7.5ಗೆ ಹೆಚ್ಚಿಸಲು ಮಾರ್ಚ್ 9ರೊಳಗೆ ಕ್ರಮ ಕೈಗೊಳ್ಳದಿದ್ದರೆ ಮಠದ ಆವರಣದಲ್ಲಿಯೇ ಆಮರಣಾಂತ ಉಪವಾಸ ಆರಂಭಿಸುತ್ತೇನೆ. ಈ ವೇಳೆ ನಾನು ಸತ್ತರೆ…”ಎಂದು ವಾಲ್ಮೀಕಿ ಮಠದ ಪ್ರಸನ್ನಾನಂದ ಸ್ವಾಮೀಜಿ ಬಹಿರಂಗ ಹೇಳಿಕೆ ನೀಡುತ್ತಿದ್ದಂತೆ ಸಿಎಂ ಬಿಎಸ್ ವೈ “ಹಾಗೆಲ್ಲ ಮಾತಾಡಬೇಡಿ. ಶೀಘ್ರ ಮೀಸಲಾತಿ ಹೆಚ್ಚಳ ಮಾಡಿ ಕೊಡುತ್ತೇನೆ “ಎಂದು ಹೇಳುವ ಮೂಲಕ ಶ್ರೀಗಳು ಮಾತು ಮುಂದುವರಿಸಲು ಆಸ್ಪದ ನೀಡಲಿಲ್ಲ.
ಇದನ್ನೂ ಓದಿ:ಭಾರತದಲ್ಲಿ ಎಷ್ಟು ಚೀನಾ ಕಂಪನಿ ವ್ಯವಹಾರ ನಡೆಸುತ್ತಿದೆ? ಕೇಂದ್ರದ ಮಾಹಿತಿಯಲ್ಲೇನಿದೆ
ಆಗ ಸ್ವಾಮೀಜಿ, ಉಪವಾಸ ಸತ್ಯಾಗ್ರಹ ಕುರಿತ ತಮ್ಮ ಮಾತನ್ನು ಈಗಲೇ ವಾಪಸ್ ಪಡೆಯುವುದಾಗಿ ಸಭಿಕರಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಶ್ರೀಗಳು ತಮ್ಮ ಮಾತಿನಿಂದ ಮುಖ್ಯಮಂತ್ರಿಗಳ ಮನಸ್ಸಿಗೆ ನೋವಾದರೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.
ಬಳಿಕ ಸಿಎಂ ಯಡಿಯೂರಪ್ಪ ಮಾತನಾಡಿ, ಶ್ರೀಗಳು ಇನ್ನುಮುಂದೆ ಮತ್ತೆ ಹೋರಾಟಕ್ಕೆ ಇಳಿಯಲು ಆಸ್ಪದ ನೀಡುವುದಿಲ್ಲ. ಆದಷ್ಟು ಬೇಗ ಮೀಸಲಾತಿ ಹೆಚ್ಚಿಸಲಾಗುವುದು. ಶ್ರೀಗಳ ಮಾತಿನಿಂದ ನನಗೆ ನೋವಾಗಿಲ್ಲ. ಶ್ರೀಗಳು ಸಮಾಜದ ಮೇಲಿರುವ ತಮ್ಮ ಕಾಳಜಿ ವ್ಯಕ್ತಪಡಿಸಿದ್ದಾರೆ. ಸಮುದಾಯದ ಸಚಿವರೊಂದಿಗೆ ಚರ್ಚಿಸಿ ಶೀಘ್ರ ಮೀಸಲಾತಿ ಹೆಚ್ಚಳಕ್ಕೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
MUST WATCH
ಹೊಸ ಸೇರ್ಪಡೆ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ