ಇನ್ನೆರಡು ದಿನದಲ್ಲಿ ಸಾರಿಗೆ ನೌಕರರ ಸಂಬಳ ನೀಡುತ್ತೇವೆ: ಲಕ್ಷಣ ಸವದಿ
Team Udayavani, Feb 9, 2021, 4:04 PM IST
ಬೆಂಗಳೂರು: ಸಾರಿಗೆ ನೌಕರರ ಡಿಸೆಂಬರ್ ತಿಂಗಳ ಸಂಬಳ ಇನ್ನೆರಡು ದಿನದಲ್ಲಿ ಹಾಕುತ್ತವೆ. ಜನವರಿ ತಿಂಗಳ 15 ದಿನದ ಸಂಬಳ ಶೀಘ್ರವಾಗಿ ಹಾಕುತ್ತೇವೆ ಎಂದು ಡಿಸಿಎಂ ಲಕ್ಷಣ ಸವದಿ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಲಾಖೆಯ ಆದಾಯವು ಇಂಧನ ಮತ್ತು ಸಂಬಳಕ್ಕೆ ಸರಿಯಾಗುತ್ತಿದೆ. ಸಂಬಳಕ್ಕೆ ಹಣಕಾಸು ಇಲಾಖೆ ಒಪ್ಪಿಕೊಂಡಿದೆ. ಎರಡು ದಿನದಲ್ಲಿ ಸರಿಯಾಗುತ್ತದೆ. ಯಾವುದೇ ಅಡ್ಡಿ ಆತಂಕವಿಲ್ಲದೆ ನಿಮ್ಮ ಸಂಬಳ ಕೊಡುವ ಕೆಲಸ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಮೀಸಲಾತಿ ಹೋರಾಟಕ್ಕೆ ಬರೋದು ಸಿದ್ದುಗೆ ಬಿಟ್ಟ ವಿಚಾರ: ಈಶ್ವರಪ್ಪ
ಸಾರಿಗೆ ನೌಕರರ ಬುಧವಾರದ ಪ್ರತಿಭಟನೆ ಮಾಡುವ ಖಚಿತ ಮಾಹಿತಿಯಿಲ್ಲ. ನನ್ನನ್ನು ಯಾರು ಭೇಟಿ ಮಾಡಿಲ್ಲ ಮನವಿ ಕೊಟ್ಟಿಲ್ಲ. ಮಾಧ್ಯಮಗಳಲ್ಲಿ ನೋಡಿಯಷ್ಟೆ ನನಗೆ ಮಾಹಿತಿ ತಿಳಿದಿದೆ. ನಾನು ಅಧಿಕಾರಿಗಳನ್ನು ಕರೆಸಿ ಮಾತನಾಡಿದ್ದೇನೆ ಎಂದರು
ಹಿಂದೆ ಪ್ರತಿಭಟನೆ ಮಾಡಿದಾಗ 9 ಬೇಡಿಕೆ ಇಟ್ಟಿದ್ದರು. ಅದರಲ್ಲಿ ನಾಲ್ಕು ಬೇಡಿಕೆ ಇಡೇರಿಸಿದ್ದೇವೆ. ಐದು ಸಭೆ ನಡೆಸಿದ್ದೇವೆ ಅದು ಅವರಿಗೂ ಗೊತ್ತು. ಇನ್ನು 15 ದಿನದಲ್ಲಿ ನೌಕರರ ಜೊತೆ ಆರನೇ ಸಭೆ ನಡೆಸಿ ವೇತನ ಪರಿಷ್ಕರಣೆ ಬಗ್ಗೆಯು ಮಾತನಾಡುತ್ತೇನೆ ಎಂದು ಸಚಿವರು ಹೇಳಿದರು.
ಯಾವುದೆ ಸಾಲ ಪಡೆಯಲು ಆಸ್ತಿ ಅಡಮಾನ ಇಡಬೇಕಾಗುತ್ತದೆ. ಅದಕ್ಕಾಗಿ ಬಿಎಂಟಿಸಿ ಶಾಂತಿನಗರ ಕಟ್ಟಡವನ್ನು ಅಡಮಾನ ಮಾಡಲಾಗಿದೆ ಎಂದರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್