ಮೀಸಲಾತಿ ಹೋರಾಟಕ್ಕೆ ಬರೋದು ಸಿದ್ದುಗೆ ಬಿಟ್ಟ ವಿಚಾರ: ಈಶ್ವರಪ್ಪ
Team Udayavani, Feb 9, 2021, 3:47 PM IST
ಶಿವಮೊಗ್ಗ: ಎಸ್ಟಿ ಮೀಸಲಾತಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆದ ಕುರುಬರ ಸಮಾವೇಶ ಯಶಸ್ವಿಯಾಗಿದ್ದು, ಮುಂದಿನ ಹಂತದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಕುರುಬರ ಮೀಸಲಾತಿ ಹೋರಾಟಕ್ಕೆ ಬಂದರೆ ಸಂತೋಷ. ಬಾರದಿದ್ದರೆ ಅವರಿಗೆ ಬಿಟ್ಟ ವಿಚಾರ. ಸಮುದಾಯ ಅವರನ್ನು ಸಿಎಂ ಮಾಡಿದೆ. ಅವರೊಬ್ಬರನ್ನು ಬಿಟ್ಟು ಎಲ್ಲರೂ ಪಕ್ಷಾತೀತವಾಗಿ ಭಾಗಿಯಾಗಿದ್ದಾರೆ ಎಲ್ಲರೂ ಒಟ್ಟಿಗೆ ಇರಬೇಕೆಂದು ಸಮುದಾಯದ ಜನರು ಅಪೇಕ್ಷೆ ಪಟ್ಟಿದ್ದರು. ಸ್ವಾಮೀಜಿಗಳು ಅವರ ನಿವಾಸಕ್ಕೆ ತೆರಳಿ ಕರೆದಿದ್ದರು. ನಾನು ಕೂಡ ಕರೆ ಮಾಡಿದ್ದೆ. ಮೊದಲಿಗೆ ಯಾರೂ ನನ್ನನ್ನು ಕರೆದಿಲ್ಲ ಎಂದು ಹೇಳಿದ್ದ ಸಿದ್ದರಾಮಯ್ಯ ಬಳಿಕ ಪಾದಯಾತ್ರೆಗೆ ಆರ್ಎಸ್ಎಸ್ ಹಣಕೊಟ್ಟಿದೆ ಎಂದು ಆರೋಪ ಮಾಡಿದ್ದರು.
ಹೋರಾಟಕ್ಕೆ ಆರ್ಎಸ್ಎಸ್ ಹಣ ಕೊಟ್ಟಿಲ್ಲ. ಸಮುದಾಯದ ಜನರೇ ಹಣ ನೀಡಿ ಸಮಾವೇಶ ಮಾಡಿದ್ದಾರೆ ಎಂದರು. ಕುರುಬ ಸಮುದಾಯದ ಇತಿಹಾಸದಲ್ಲಿಯೇ ದೊಡ್ಡ ಕಾರ್ಯಕ್ರಮ ನಡೆದಿದೆ. ನಿರಂಜನಾನಂದಪುರಿ ಶ್ರೀಗಳು, ಈಶ್ವರಾನಂದಪುರಿ ಶ್ರೀಗಳು ಸೇರಿದಂತೆ ಸಮುದಾಯದ ಗುರುಗಳು, ಹಿರಿಯರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ ವ್ಯವಸ್ಥಿತವಾಗಿ ಶಿಸ್ತಿನಿಂದ ಸಮಾವೇಶ ನಡೆಸಲಾಗಿದೆ. ಸ್ವಾತಂತ್ರಕ್ಕಿಂತ ಮೊದಲು ಇದ್ದಂತೆ ಮತ್ತು ಈಗ 4 ರಾಜ್ಯಗಳಲ್ಲಿ ಇರುವಂತೆ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡಬೇಕೆನ್ನುವುದು ಒತ್ತಾಯವಾಗಿದೆ ಎಂದರು.
ಇದನ್ನೂ ಓದಿ:ಧರ್ಮಪ್ರಜ್ಞೆ-ಸಂಸ್ಕಾರಜೀವನದ ಆಸ್ತಿಯಾಗಲಿ
ಮುಖ್ಯಮಂತ್ರಿಗಳು ಕುರುಬ ಸಮುದಾಯಕ್ಕೆ ಅನುದಾನ ನೀಡಿದ್ದಾರೆ. ಕನಕ ಜಯಂತಿಗೆ ರಜೆ ನೀಡಿದ್ದಾರೆ. ಇದರೊಂದಿಗೆ ಎಸ್ಟಿ ಮೀಸಲಾತಿ ನೀಡಬೇಕೆಂದು ಸ್ವಾಮೀಜಿಗಳು ಸಮಾವೇಶದಲ್ಲಿ ಒತ್ತಾಯಿಸಿದ್ದು, ಮುಂದಿನ ಹಂತದಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಲು ಸಿಎಂ ಜತೆಗೆ ಮೀಸಲಾತಿ ಹೋರಾಟ ಸಮಿತಿ ಚರ್ಚಿಸಲಿದೆ. ಸಚಿವಸಂಪುಟ ಸಭೆಯಲ್ಲಿ ತೀರ್ಮಾನಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಿದ್ದು, ಪ್ರಧಾನಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಕುರುಬರ ಸಮಾವೇಶಕ್ಕೆ ಹಣ ಕೊಟ್ಟು ಜನರನ್ನು ಕರೆತಂದಿಲ್ಲ. ವಾಹನಗಳಿಗೂ ಹಣ ಕೊಟ್ಟಿಲ್ಲ. ಸಮುದಾಯದವರೆಲ್ಲ ತಮ್ಮ ಹಣದಲ್ಲೇ ಸಮಾವೇಶಕ್ಕೆ ಬಂದಿದ್ದಾರೆ. ಅನೇಕರು ಊಟ ಕೊಟ್ಟಿದ್ದಾರೆ. ಜನರೇ ಸೇರಿ ಕುರುಬರಸಮಾವೇಶ ಮಾಡಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಿಎಂ ಬಗ್ಗೆ ಮಾತನಾಡದಂತೆ ತಿಳಿಸಿದ್ದರೂ ಪದೇ ಪದೇ ಹೇಳಿಕೆ ನೀಡುತ್ತಿರುವುದರಿಂದ ಕೇಂದ್ರ ಶಿಸ್ತು ಸಮಿತಿಗೆ ವರದಿ ನೀಡಿರುವುದಾಗಿ ಪಕ್ಷದ ರಾಜ್ಯಾಧ್ಯಕ್ಷರು ತಿಳಿಸಿದ್ದು, ಕೇಂದ್ರ ಸಮಿತಿ ಕ್ರಮ ಕೈಗೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ