ಕಡಬದ ತಾಯಿ-ಮಗಳ ಮೇಲೆ ಆ್ಯಸಿಡ್ ಎರಚಿದ ಪ್ರಕರಣ : ಆರೋಪಿಯ ಜಾಮೀನು ರದ್ದುಪಡಿಸಿದ ಹೈಕೋರ್ಟ್
Team Udayavani, Feb 9, 2021, 11:45 PM IST
ಬೆಂಗಳೂರು: ತಾಯಿ ಹಾಗೂ ಆಕೆಯ ಎರಡು ವರ್ಷದ ಮಗಳ ಮೇಲೆ ಆ್ಯಸಿಡ್ ಹಾಕಿದ್ದ ಪ್ರಕರಣದ ಆರೋಪಿಗೆ ವಿಚಾರಣ ನ್ಯಾಯಾಲಯ ನೀಡಿದ್ದ ಜಾಮೀನನ್ನು ರದ್ದುಪಡಿಸಿದ ಹೈಕೋರ್ಟ್, ಆರೋಪಿಯನ್ನು ಮರಳಿ ಜೈಲಿಗೆ ಹಾಕುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.
ವಿಚಾರಣ ನ್ಯಾಯಾಲಯ ಆರೋಪಿಗೆ ಜಾಮೀನು ನೀಡಿದ್ದ ಆದೇಶ ರದ್ದುಪಡಿಸಲು ಕೋರಿ ಸಂತ್ರಸ್ತ ಮಹಿಳೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆರೋಪಿಯ ಜಾಮೀನು ರದ್ದುಪಡಿಸಿ ಆದೇಶಿಸಿದೆ.
ಅಲ್ಲದೇ, ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸಿ ಇತ್ಯರ್ಥಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯಕ್ಕೆ ನಿರ್ದೇಶಿಸಿದೆ. ಆರೋಪಿಯನ್ನು ಕೂಡಲೇ ವಶಕ್ಕೆ ಪಡೆದು ಜೈಲಿಗೆ ಕಳಹಿಸುವಂತೆ ಕಡಬ ಠಾಣೆ ಪೊಲೀಸರಿಗೆ ನಿರ್ದೇಶಿಸಿದೆ.
ಇದನ್ನೂ ಓದಿ:ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು
ಸಂತ್ರಸ್ತ ಮಹಿಳೆಯು ಆರೋಪಿಯ ಸ್ವಂತ ನಾದಿನಿ. ಹಣದ ವಿಚಾರಕ್ಕೆ ಆಕೆಯನ್ನು ಗುರಿಯಾಗಿಸಿಕೊಂಡು ಕಿರುಕುಳ ಕೊಡುತ್ತಿದ್ದ. ಲೈಂಗಿಕ ದೌರ್ಜನ್ಯಕ್ಕೂ ಯತ್ನಿಸಿದ್ದ. ಪತಿಯನ್ನು ಕಳೆದುಕೊಂಡು ಅಸಹಾಯಕ ಸ್ಥಿತಿಯಲ್ಲಿರುವ ಮಹಿಳೆ ಮತ್ತು ಆಕೆಯ ಮಗುವಿನ ಮೇಲೆ ಆ್ಯಸಿಡ್ ದಾಳಿ ನಡೆಸಿರುವುದು ಗಂಭೀರ ಸ್ವರೂಪದ ಕೃತ್ಯ. ಇಂತಹ ಗಂಭೀರ ಪ್ರಕರಣದ ಬಗ್ಗೆ ವಿಚಾರಣ ನ್ಯಾಯಾಲಯ ದೃಷ್ಟಿ ಕಳೆದುಕೊಂಡಂತೆ ವರ್ತಿಸಿದೆ. ಆರೋಪಿ ವಿಚಾರಣೆಯಿಂದ ತಲೆ ಮರೆಸಿಕೊಂಡು ಹೋಗುವ ಸಾಧ್ಯತೆಯಿಲ್ಲ ಎಂಬ ಕಾರಣದಿಂದಲೇ ಜಾಮೀನು ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಆರೋಪಿಯ ಜಾಮೀನು ಆದೇಶ ರದ್ದುಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ