ಜಾತ್ರೆ, ಉತ್ಸವಗಳಿಗೆ ಸರಕಾರ ಅನುಮತಿ : ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ
Team Udayavani, Feb 10, 2021, 7:20 AM IST
ಬೆಂಗಳೂರು: ದೇವಸ್ಥಾನಗಳಲ್ಲಿ ಈ ಹಿಂದಿನಂತೆಯೇ ಎಲ್ಲ ಧಾರ್ಮಿಕ ವಿಧಿ ವಿಧಾನ ಪಾಲನೆ, ಜಾತ್ರೆ ಮತ್ತು ರಥೋತ್ಸವಗಳನ್ನು ಆಚರಿಸಲು ಸಂಪೂರ್ಣ ಅನುಮತಿ ನೀಡಿ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕೊರೊನಾ ಮುಂಜಾಗ್ರತೆಯ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ದೈನಂದಿನ ಮತ್ತು ಸೀಮಿತ ಪೂಜಾ ಕೈಂಕರ್ಯಗಳಿಗೆ ಮಾತ್ರ ಅವಕಾಶವಿತ್ತು. ಇದರಿಂದ ದೇವ ಸ್ಥಾನಗಳಲ್ಲಿ ಬಹುತೇಕ ವಿಶೇಷ ಪೂಜೆ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದವು. ಪ್ರತೀ ವರ್ಷ ಫೆಬ್ರವರಿಯಲ್ಲಿ ರಾಜ್ಯದ ಹಲವು ದೇವಸ್ಥಾನಗಳಲ್ಲಿ ಜಾತ್ರೆ ಮತ್ತು ರಥೋತ್ಸವಗಳು ನಡೆಯಲಿದ್ದು, ಈ ವರ್ಷವೂ ಅವಕಾಶ ನೀಡುವಂತೆ ಭಕ್ತರಿಂದ ಬೇಡಿಕೆ ಬಂದಿದೆ. ಕೊರೊನಾ ಮುಂಜಾಗ್ರತೆ ಕ್ರಮಗಳೊಂದಿಗೆ ದೇವಸ್ಥಾನಗಳಲ್ಲಿ ಎಲ್ಲ ಧಾರ್ಮಿಕ ವಿಧಿ ವಿಧಾನಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಎಲ್ಲ ಸೇವೆಗಳು, ಜಾತ್ರೆಗಳು, ರಥೋತ್ಸವ, ಪವಿತ್ರೋತ್ಸವ, ವಿಶೇಷ ಉತ್ಸವ, ಅನ್ನದಾಸೋಹ, ಪ್ರಸಾದ ವಿತರಣೆ ಸಹಿತ ಇತರ ಪೂಜಾ ಕೈಂಕರ್ಯಗಳನ್ನು ನಡೆಸಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ವಸತಿ ನಿಲಯಗಳಿಗೂ ಅವಕಾಶ
ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ದೇವಸ್ಥಾನಗಳ ವಸತಿ ನಿಲಯಗಳನ್ನು ಮುಚ್ಚಲಾಗಿತ್ತು. ಸದ್ಯ ಅವುಗಳನ್ನು ಮುಂಜಾಗ್ರತೆ ಪಾಲಿಸಿ ಭಕ್ತರಿಗೆ ಒದಗಿಸಬಹುದಾಗಿದೆ.
ಬೇಡಿಕೆಗೆ ಮಣಿದ ಸರಕಾರ
ಕೊರೊನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಬಹುತೇಕ ಚಟುವಟಿಕೆಗಳು ಈಗಾಗಲೇ ಆರಂಭವಾಗಿವೆ. ಇತ್ತೀಚೆಗೆ ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಸೀಟ್ ಭರ್ತಿಗೆ ಅನುಮತಿ ನೀಡಿತ್ತು. ಆದರೆ ದೇವಸ್ಥಾನಗಳಲ್ಲಿ ಸೇವೆ, ಜಾತ್ರೆಗಳಿಗೆ ಅವಕಾಶ ನೀಡದಿರುವ ಕುರಿತು ಭಕ್ತರು ಬೇಸರ ವ್ಯಕ್ತಪಡಿಸಿದ್ದರು. ಕೊನೆಗೂ ಸರಕಾರವು ಭಕ್ತರ ಭಾವನೆಗಳಿಗೆ ಮಣಿದಿದೆ.
ಆದಾಯ ಏರಿಕೆಗೆ ಅವಕಾಶ
ಸೀಮಿತ ಭಕ್ತರಿಗೆ ಅವಕಾಶ, ಕಠಿನ ಮಾರ್ಗಸೂಚಿ, ಸೇವೆಗಳಿಗೆ ಅವಕಾಶ ಇಲ್ಲ ಎಂಬ ಕಾರಣದಿಂದಾಗಿ ದೇವಸ್ಥಾನಗಳಲ್ಲಿ ಭಕ್ತರ ಪ್ರಮಾಣ ಕಡಿಮೆಯಾಗಿತ್ತು. ಇದರಿಂದ ಧಾರ್ಮಿಕ ಇಲಾಖೆ ದೇವಸ್ಥಾನಗಳ ಆದಾಯವು ಕುಸಿದಿತ್ತು. ಸದ್ಯ ಪೂರ್ಣ ಅನುಮತಿಯಿಂದ ಆದಾಯ ಏರಿಕೆಯಾಗಲಿದೆ. ಭಕ್ತರ ಧಾರ್ಮಿಕ ಪ್ರವಾಸಗಳು ಹೆಚ್ಚಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ