ರಸ್ತೆ ಅಪಘಾತ ಪ್ರಕರಣ: 10 ತಿಂಗಳುಗಳಲ್ಲಿ 43 ಸಾವು

ಸುಳ್ಯ-ಪುತ್ತೂರು: ಕೋವಿಡ್‌ಗಿಂತ ಅಪಘಾತದ ಸಾವಿನ ಸಂಖ್ಯೆ ಹೆಚ್ಚಳ

Team Udayavani, Feb 10, 2021, 12:33 PM IST

ರಸ್ತೆ ಅಪಘಾತ ಪ್ರಕರಣ: 10 ತಿಂಗಳುಗಳಲ್ಲಿ 43 ಸಾವು

ಪುತ್ತೂರು: ಸುಳ್ಯ-ಪುತ್ತೂರು ತಾಲೂಕಿನಲ್ಲಿ 10 ತಿಂಗಳಲ್ಲಿ ರಸ್ತೆ ಅಪಘಾತದಲ್ಲಿ 43 ಮಂದಿ ಜೀವ ತೆತ್ತಿದ್ದಾರೆ. ಸಂಚಾರ ನಿಯಮ ಉಲ್ಲಂಘನೆಯಿಂದಲೇ ಈ ಸಾವು ಸಂಭವಿಸಿದೆ. ಆತಂಕದ ಸಂಗತಿ ಅಂದರೆ, ಮಹಾಮಾರಿ ಕೋವಿಡ್‌ ಸಾವಿನ ಪ್ರಮಾಣಕ್ಕಿಂತಲೂ ಅಪಘಾತದಿಂದ ಉಂಟಾದ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಯುವಕರೇ ಅಧಿಕ :

ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆ ನೀಡಿದ ಅಂಕಿ-ಅಂಶದ ಪ್ರಕಾರ ಹತ್ತು ತಿಂಗಳುಗಳಲ್ಲಿ ಪುತ್ತೂರು ಮತ್ತು ಸುಳ್ಯ ತಾಲೂಕಿನಲ್ಲಿ 238 ಅಪಘಾತ ಪ್ರಕರಣ ಸಂಭವಿಸಿದೆ. ಇದರಲ್ಲಿ 43 ಮಂದಿ ಜೀವ ಕಳೆದುಕೊಂಡಿದ್ದಾರೆ. ಮೃತರ ಪೈಕಿ 32 ಮಂದಿ 30 ವರ್ಷ ಒಳಗಿನ ಯುವಕರು. 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಶೇ. 60ರಷ್ಟು ಅಧಿಕ ಮಂದಿ ಗಂಭೀರ ಗಾಯಗೊಂಡಿದ್ದು, ಚೇತರಿಸಿಕೊಳ್ಳಲು ಹಲವು ತಿಂಗಳುಗಳೇ ಬೇಕು ಅನ್ನುತ್ತಿದೆ ಚಿತ್ರಣ.

ಅತೀ ವೇಗ ಕಾರಣ ;

ಅಪಘಾತಕ್ಕೆ ಮುಖ್ಯವಾಗಿ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆ ಕಾರಣ. ತಿರುವು ರಸ್ತೆಯಲ್ಲಿ ಓವರ್‌ಟೇಕ್‌, ರಸ್ತೆ ನಡು ಭಾಗದಲ್ಲಿ ಸಂಚಾರ, ಹೆಲ್ಮೆಟ್‌-ಸೀಟ್‌ ಬೆಲ್ಟ್ ರಹಿತ ಸಂಚಾರ, ಮೊಬೈಲ್‌ ಬಳಕೆ ಮಾಡುತ್ತಲೇ ಚಾಲನೆ, ಮದ್ಯಪಾನ ಸೇವಿಸಿ ಚಾಲನೆ, ಸಿಂಗಲ್‌ ಹೆಡ್‌ಲೈಟ್‌ ಬಳಕೆ, ಓವರ್‌ ಲೋಡ್‌ ಹೀಗೆ ಹಲವು ಕಾರಣಗಳಿಂದ ಅಪಘಾತ ಸಂಭವಿಸಿ ಜೀವ ಹಾನಿಯಾಗುತ್ತಿದೆ ಎನ್ನುತ್ತಿದೆ ವರದಿ. ಶೇ. 2ರಿಂದ 5ರಷ್ಟು ರಸ್ತೆ ವಿನ್ಯಾಸದಿಂದ ಅಪಘಾತ ಉಂಟಾದ ಬಗ್ಗೆ ಉಲ್ಲೇಖೀಸಲಾಗಿದೆ.

ನಿಯಂತ್ರಣ ಸಾಧನಗಳಿಗೆ ಢಿಕ್ಕಿ :

ಅಪಘಾತ ಸಂಭವಿಸಿದ ಸ್ಥಳದಲ್ಲಿ ಬ್ಯಾರಿಕೇಡ್‌ ಅಳವಡಿಸಿ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಂಡರೂ ಬ್ಯಾರಿಕೇಡ್‌ಗಳಿಗೆ ಢಿಕ್ಕಿ ಹೊಡೆದ ಘಟನೆಗಳಿವೆ. ಅತಿ ವೇಗವಾಗಿ ವಾಹನ ಚಲಾಯಿಸುವವರಿಗೆ ನಿಯಂತ್ರಣ ಸಾಧನದ ಬಗ್ಗೆ ಅರಿವಿರುವುದಿಲ್ಲ. ವಾಹನ ಅಪಘಾತಕ್ಕೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ರಾತ್ರಿ ವೇಳೆ ಬ್ಯಾರಿಕೇಡ್‌ ತೆರವು ಮಾಡುತ್ತಿದೆ. ಹಲವೆಡೆ ಹಂಪ್‌ ಹಾಕಿದ್ದರೂ, ವೇಗಕ್ಕೆ ಮಿತಿವೊಡ್ಡಲು ಶಕ್ತವಾಗಿಲ್ಲ.

18 ಲಕ್ಷ ರೂ.ದಂಡ ಸಂಗ್ರಹ :

ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯಲ್ಲಿ ಹೆಲ್ಮೆಟ್‌-ಸೀಟ್‌ ಬೆಲ್ಟ್ ರಹಿತ ಸಂಚಾರ, ಮೊಬೈಲ್‌ ಬಳಕೆ ಸೇರಿದಂತೆ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರ್‌ಟಿಒ ಒಂದು ವರ್ಷದಲ್ಲಿ 1, 700 ಪ್ರಕರಣ ದಾಖಲಿಸಿಕೊಂಡಿದೆ. 18 ಲಕ್ಷ ರೂ. ದಂಡ ಮೊತ್ತ ಸಂಗ್ರಹಿಸಿದೆ. ಕೋವಿಡ್‌ ಲಾಕ್‌ಡೌನ್‌ ಮುಕ್ತಾಯಗೊಂಡ ಅನಂತರ ವಾಹನ ಓಡಾಟ ಹೆಚ್ಚಾಗಿ ಅಪಘಾತ ಪ್ರಮಾಣ ಏರಿಕೆಯತ್ತಲೇ ಸಾಗಿದೆ.

ಸಂಚಾರ ಠಾಣೆ ಇಲ್ಲ : ಸಂಪಾಜೆ-ಮಾಣಿ ತನಕದ ವ್ಯಾಪ್ತಿಯಲ್ಲಿ ಪುತ್ತೂರು ನಗರದಲ್ಲಿ ಮಾತ್ರ ಸಂಚಾರ ಠಾಣೆ ಇದೆ. ಸುಳ್ಯ ತಾಲೂಕಿನಲ್ಲಿ ಸಂಚಾರ ಠಾಣೆ ಇಲ್ಲ. ಹೀಗಾಗಿ ಅಪಘಾತ ಸಂದರ್ಭ ತತ್‌ಕ್ಷಣ ಕಾರ್ಯನಿರ್ವಹಣೆಗೆ ತೊಂದರೆ ಉಂಟಾಗುತ್ತಿದೆ. ಹಲವು ವರ್ಷಗಳ ಹಿಂದೆಯೇ ಸುಳ್ಯಕ್ಕೆ ಸಂಚಾರ ಠಾಣೆಗೆ ಬೇಡಿಕೆ ಸಲ್ಲಿಸಿದ್ದರೂ ಅದು ಈ ತನಕ ಈಡೇರಿಲ್ಲ. ಕಳೆದ ವರ್ಷ ಕೇವಲ ಮೂರು ತಿಂಗಳಲ್ಲಿ ಸುಳ್ಯ ವ್ಯಾಪ್ತಿಯಲ್ಲಿ 12ಕ್ಕೂ ಅಧಿಕ ಮಂದಿ ರಸ್ತೆ ಅಪಘಾತದಲ್ಲಿ ಜೀವ ತೆತ್ತಿದ್ದಾರೆ. ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಒಂದು ತಿಂಗಳಲ್ಲಿ ನಾಲ್ಕು ಅಪಘಾತ ಸಂಭವಿಸಿ ಒಟ್ಟು 7 ಮಂದಿ ಮೃತಪಟ್ಟ ಘಟನೆ ನಡೆದಿತ್ತು.

ಸಂಚಾರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುವ ಕಾರಣ ರಸ್ತೆ ಅಪಘಾತ ಸಂಭವಿಸುತ್ತಿದೆ. ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ. ಇದು ಆತಂಕಕಾರಿ ಸಂಗತಿ. ಹೀಗಾಗಿ ಪ್ರತಿ ಶಾಲಾ, ಕಾಲೇಜುಗಳಿಗೆ ತೆರಳಿ ಸಂಚಾರದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಲು ನಿರ್ಧರಿಸಲಾಗಿದೆ.  -ಸಂಜೀವ ಮಠಂದೂರು, ಶಾಸಕರು

ಶೇ. 95ಕ್ಕೂ ಅಧಿಕ ಅಪಘಾತ ಪ್ರಕರಣಕ್ಕೆ ಅಜಾಗರೂಕತೆಯ ಚಾಲನೆ ಕಾರಣ. ಹತ್ತು ತಿಂಗಳಲ್ಲಿ ಉಭಯ ತಾಲೂಕಿನಲ್ಲಿ 43 ಮಂದಿ ಸಾವನ್ನಪ್ಪಿದ್ದು, ಅತಿ ವೇಗ, ಹೆಲ್ಮೆಟ್‌-ಸೀಟ್‌ ಬೆಲ್ಟ್ ರಹಿತ ಚಾಲನೆ ಇದಕ್ಕೆ ಕಾರಣವಾಗಿದೆ. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಆಚರಿಸುವ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. -ಆನಂದ ಗೌಡ,  ಪ್ರಾದೇಶಿಕ ಸಾರಿಗೆ ಅಧಿಕಾರಿ, ಪುತ್ತೂರು

 

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.