ತಾ.ಪಂ. ರದ್ದತಿ ಪ್ರಸ್ತಾವ: ಕೆಲವರಿಗೆ ಆತಂಕ, ಹಲವರಿಗೆ ನಿರಾತಂಕ!


Team Udayavani, Feb 10, 2021, 2:57 PM IST

Thaluk panchayath Cancellation proposal

ಉಡುಪಿ: ತ್ರಿಸ್ತರ ಪಂಚಾಯತ್‌ ವ್ಯವಸ್ಥೆಯಲ್ಲಿ ಒಂದಾದ ತಾಲೂಕು ಪಂಚಾಯತನ್ನು ಕೈಬಿಡುವ ಪ್ರಸ್ತಾವವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ನವರು ಇತ್ತೀಚೆಗೆ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿರುವುದು ಹಲವರ ಚಿಂತೆಗೆ ಕಾರಣವಾಗಿದೆ. ಅನುದಾನ, ಅಧಿಕಾರವಿಲ್ಲದೆ ಬಳಲಿ ಬೆಂಡಾದ ಬಹುತೇಕ ತಾಲೂಕು ಪಂಚಾಯತ್‌ ಸದಸ್ಯರಿಗೆ ನಿರಾಳವೂ ಆಗಿದೆ.
ಮುಂದಿನ ಕೆಲವೇ ದಿನಗಳಲ್ಲಿ ಜಿ.ಪಂ. ಮತ್ತು ತಾ.ಪಂ. ಆಡಳಿತಾವಧಿ ಮುಗಿದು ಚುನಾವಣೆ ನಡೆಸಲು ಚುನಾವಣ ಆಯೋಗ ಸಿದ್ಧತೆ ನಡೆಸುತ್ತಿರುವಂತೆಯೇ ಈ ಹೇಳಿಕೆ ಹೊರಬಿದ್ದಿರುವುದು ರಾಜಕೀಯವಾಗಿ ಅಷ್ಟಾಗಿ ಚರ್ಚೆಯ ಮುನ್ನೆಲೆಗೆ ಬಾರದಿದ್ದರೂ ಕಾರ್ಯಕರ್ತರಲ್ಲಿ ಚರ್ಚೆಗೆ ಕಾರಣವಾಗಿದೆ.

ರಾಜಕೀಯ ನೆಲೆ ಪೂರೈಕೆ ತಾಣ
ಜಿ.ಪಂ. ಮತ್ತು ಗ್ರಾ.ಪಂ. ವ್ಯವಸ್ಥೆ ನಡುವೆ ತಾ.ಪಂ. ಕಾರ್ಯನಿರ್ವಹಿಸುತ್ತಿತ್ತು. ಇದು ಒಂದು ರೀತಿಯಲ್ಲಿ ರಾಜಕೀಯ ಆಕಾಂಕ್ಷೆಗಳನ್ನು ಪೂರೈಸಿ ಕೊಳ್ಳಲು ಕಾರ್ಯಕರ್ತರಿಗೆ ಇರುವ ವ್ಯವಸ್ಥೆಯೂ ಆಗಿದೆ. ಜಿ.ಪಂ. ಕ್ಷೇತ್ರಗಳು ನಾಲ್ಕೈದು ಗ್ರಾ.ಪಂ.ಗಳಿಗೆ ಒಂದಾಗಿದೆ. ಜಿ.ಪಂ. ಕ್ಷೇತ್ರಗಳು ಉಡುಪಿ ಜಿಲ್ಲೆಯಲ್ಲಿರುವುದು ಕೇವಲ 26. ಇದು ಶಾಸಕ ಹುದ್ದೆಗೆ ಆಕಾಂಕ್ಷಿಯಾಗಿ ಅಲ್ಲಿ ನೆಲೆ ಸಿಗದ ಕಾರ್ಯಕರ್ತ/ನಾಯಕರಿಗೆ ಜಾಗ ತೋರುವ ಹುದ್ದೆಯಾಗಿದೆ. ಗ್ರಾ.ಪಂ. ವ್ಯವಸ್ಥೆ ಸ್ಥಳೀಯ ಕಾರ್ಯಕರ್ತರಿಗೆ ಜಾಗ ತೋರುವ ಹುದ್ದೆ. ಈ ನಡುವೆ ಜಿ.ಪಂ.ನಲ್ಲಿ ಅವಕಾಶ ಸಿಗದ, ಸ್ಥಳೀಯ ಮಟ್ಟಕ್ಕಿಂತ ಸ್ವಲ್ಪ ಹೆಚ್ಚು ಸಾಮಾಜಿಕ ಸ್ಥಾನಮಾನವಿರುವ ಕಾರ್ಯಕರ್ತರಿಗೆ ತಾ.ಪಂ. ನೆಲೆ ಕೊಡುತ್ತಿತ್ತು.
ಒಂದು ವೇಳೆ ತಾ.ಪಂ. ವ್ಯವಸ್ಥೆ ರದ್ದುಗೊಂಡಲ್ಲಿ ಪ್ರತಿ ಜಿಲ್ಲೆಗಳಲ್ಲಿ ಸಣ್ಣ ಮಟ್ಟದ ರಾಜಕೀಯ ನೆಲೆ ಕಂಡುಕೊಂಡಿದ್ದ ನೂರಾರು ಕಾರ್ಯಕರ್ತರಿಗೆ ರಾಜಕೀಯ ನೆಲೆ ಇಲ್ಲದೆ ಪರಿತಪಿಸುವಂತಾಗುವುದು ಮಾತ್ರ ಖಾತ್ರಿ. ಹೆಸರಿಗಷ್ಟೇ ಅಲಂಕರಿಸುವ ಈ ಹುದ್ದೆಗಿಂತ ರದ್ದತಿ ಲೇಸು ಎಂಬವರೂ ಸಾಕಷ್ಟು ಜನರಿದ್ದಾರೆ.

ಇದನ್ನೂ ಓದಿ:ಗ್ರಾಮೀಣ ಶಾಲೆಗಳಲ್ಲಿ ಉತ್ತಮ ಶಿಕ್ಷಣಕ್ಕೆ ಅವಕಾಶ: ರಾಜೇಶ್‌ ನಾೖಕ್‌

ಅನುದಾನವೂ, ಅಧಿಕಾರವೂ ಇಲ್ಲ

ತಾ.ಪಂ.ನಲ್ಲಿರುವ ಒಂದೇ ಒಂದು ಸಮಸ್ಯೆ ಅಂದರೆ ಅಲ್ಲಿಗೆ ಬರುವ ಅನುದಾನ ಅತಿ ಕಡಿಮೆ ಪ್ರಮಾಣದ್ದು. ಆದ್ದರಿಂದ ತಾ.ಪಂ. ಸದಸ್ಯರಿಗೆ ಯಾವ ಅಧಿಕಾರವೂ ಇಲ್ಲ ಎಂಬಂತಾಗಿದೆ. ಆದರೆ ಸಾರ್ವಜನಿಕರ ಮಧ್ಯೆ, ಸರಕಾರಿ ಕಾರ್ಯಕ್ರಮಗಳಲ್ಲಿ ಹೇಳಿಕೊಳ್ಳಲು ಒಂದು ರಾಜಕೀಯ ನೆಲೆಯ ಹುದ್ದೆ ಇದಾಗಿದೆ. ಇದೇ ವೇಳೆ ಸಾರ್ವಜನಿಕರಿಗೆ ತಾ.ಪಂ. ಸದಸ್ಯರಿಗಿರುವ ಇತಿಮಿತಿ ಅರಿವಿಲ್ಲದ ಕಾರಣ ಇತರ ಜನಪ್ರತಿನಿಧಿಗಳಂತೆ ಇವರ ಬಳಿಯೂ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಒಂದೆಡೆ ಅಧಿಕಾರವಿಲ್ಲ, ಇನ್ನೊಂದೆಡೆ ಅನುದಾನವೂ ಇಲ್ಲ, ಮತ್ತೂಂದೆಡೆ ಸಾರ್ವಜನಿಕರ ಬೈಗಳು ಮಾತ್ರ ಇದೆ ಎಂಬ ನೋವು ತಾ.ಪಂ. ಸದಸ್ಯರಿಗೆ ಲಾಗಾಯ್ತಿನಿಂದಲೂ ಇತ್ತು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.