ಮತ್ತೆ ಆರಂಭಗೊಂಡ ಬಾದಾಮಿ ಶುಗರ್ಸ್


Team Udayavani, Feb 10, 2021, 4:43 PM IST

ಮತ್ತೆ ಆರಂಭಗೊಂಡ ಬಾದಾಮಿ ಶುಗರ್ಸ್

ಬಾಗಲಕೋಟೆ: ಕಳೆದ ಸುಮಾರು ಹತ್ತಕ್ಕೂ ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಜಿಲ್ಲೆಯ ಬಾದಾಮಿತಾಲೂಕಿನ ಬಾದಾಮಿ ಶುಗರ್ ಮಂಗಳವಾರದಿಂದ  ಪುನಾರಂಭಗೊಂಡಿದ್ದು, ಬಾದಾಮಿ ತಾಲೂಕಿನ ರೈತರಲ್ಲಿ ಹರ್ಷ ತಂದಿದೆ.

ಕಾರ್ಖಾನೆಯ ಆವರಣದಲ್ಲಿ ಮಂಗಳವಾರ ಎಂಆರ್‌ಎನ್‌ (ನಿರಾಣಿ) ಉದ್ಯಮ ಸಮೂಹದ ಕಾರ್ಯ ನಿರ್ವಾಹಕ ನಿರ್ದೇಶಕ ಸಂಗಮೇಶ ನಿರಾಣಿಕಬ್ಬು ನುರಿಸುವ ಪ್ರಕ್ರಿಯೆಗೆ ಚಾಲನೆ ನೀಡಿದರು.

ರೈತರಲ್ಲಿ ಹರ್ಷ: ಕಳೆದ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಬಾದಾಮಿ ಶುಗರÕ ಕಾರ್ಖಾನೆ ಪುನಾರಂಭಗೊಂಡಿದೆ. ಇದರಿಂದ ಭಾಗದ ರೈತರಲ್ಲಿಹರ್ಷ ತಂದಿದೆ. ನಿರಾಣಿ ಉದ್ಯಮ ಸಮೂಹ ರೈತರ ಹಿತದೃಷ್ಟಿಯಿಂದ ಈ ಕಾರ್ಖಾನೆ ಆರಂಭಿಸಿದ್ದು, ಈ ಭಾಗದ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

10ವರ್ಷಕ್ಕೂ ಹೆಚ್ಚು ಕಾಲ ಬಂದ್‌ ಆಗಿದ್ದ ಈ ಕಾರ್ಖಾನೆಯನ್ನು ನಿರಾಣಿ ಉದ್ಯಮ ಸಮೂಹವು ತನ್ನ ಸುಪರ್ದಿಗೆ ತೆಗೆದುಕೊಂಡು ಅತ್ಯಂತ ಕಡಿಮೆ ಅವಧಿಯಲ್ಲಿ ಕಾರ್ಖಾನೆಯನ್ನು ಸಿದ್ದಪಡಿಸಿ ಕಬ್ಬು ನುರಿಸಲು ಆರಂಭಿಸಿರುವುದು ಒಂದುದಾಖಲೆಯಾಗಿದೆ. ಬರಡು ಭೂಮಿಗೆ ನೀರಾವರಿಹಾಗೂ ರೈತರು ಬೆಳೆದ ಕಬ್ಬಿಗೆ ಮಾರುಕಟ್ಟೆ ಕಲ್ಪಿಸಲು ನಿರಾಣಿ ಉದ್ಯಮ ಸಮೂಹ ಸದಾ ರೈತರೊಂದಿಗಿದೆಎಂದು ಹೇಳಿದರು.

ಬೀಳಗಿ ಮತಕ್ಷೇತ್ರ ವ್ಯಾಪ್ತಿಯಲ್ಲಿ 1 ಲಕ್ಷ ಎಕರೆ ನೀರಾವರಿ ಕಲ್ಪಿಸುವುದು ಸಚಿವ ಮುರುಗೇಶ ನಿರಾಣಿಅವರ ಸಂಕಲ್ಪವಾಗಿದೆ. ಈಗಾಗಲೇ ಬಾದಾಮಿ ತಾಲೂಕಿನಲ್ಲಿ ಹೆರಕಲ್‌ ಏತ ನೀರಾವರಿ ಮೂಲಕ 40ಸಾವಿರ ಎಕರೆಗೆ ನೀರಾವರಿ ಸೌಕರ್ಯ ನೀಡಲಾಗಿದೆ. ಬಾದಾಮಿ ಶಾಸಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಭಾಗದ ನೀರಾವರಿಗಾಗಿವಿಶೇಷ ಪ್ರಯತ್ನ ಮಾಡಿದ್ದು, ಹಲವಾರು ಯೋಜನೆಗಳನ್ನು ಕಾರ್ಯಗತಗೊಳಿಸಿದ್ದಾರೆ. ಈ ಭಾಗವು ಹಸಿರಿನಿಂದ ಕಂಗೊಳಿಸಬೇಕು. ರೈತರು ಕಬ್ಬು ಬೆಳೆಯಬೇಕು. ಆರ್ಥಿಕವಾಗಿ ಸದೃಢರಾಗಬೇಕು ಎಂಬುದು ಸಿದ್ದರಾಮಯ್ಯ ಹಾಗೂ ಮುರುಗೇಶ ನಿರಾಣಿ ಅವರ ಆಶಯವಾಗಿದೆ ಎಂದು ಹೇಳಿದರು.

ಕಬ್ಬು ಬೆಳೆಯುವ ರೈತರಿಗೆ ನಿಶ್ಚಿತ ಮಾರುಕಟ್ಟೆ ಒದಗಿಸುವ ಮಹಾದಾಸೆಯಿಂದ ನಿರಾಣಿ ಸಮೂಹ ಈಭಾಗದಲ್ಲಿ ಎಂ.ಆರ್‌.ಎನ್‌, ಕೇದಾರನಾಥ ಹಾಗೂ ಬಾದಾಮಿ ಸಕ್ಕರೆ ಕಾರ್ಖಾನೆ ಆರಂಭಿಸಿದೆ. ಆ ಮೂಲಕ3ನೇ ಕಾರ್ಖಾನೆ ಈಗ ಕಾರ್ಯಾರಂಭ ಮಾಡಿದೆ. ಎಂದು ಹೇಳಿದರು.

48ಗಂಟೆಯಲ್ಲಿ ಬಿಲ್‌ ಪಾವತಿಗೆ ವ್ಯವಸ್ಥೆ: ರೈತರಿಗೆ ಸಮಯಕ್ಕೆ ಸರಿಯಾಗಿ ಬಿಲ್‌ ಪಾವತಿ ಮಾಡುವ ಮೂಲಕ ರೈತನ ಶ್ರಮಕ್ಕೆ ತಕ್ಕ ಆದಾಯ ದೊರೆಯುವಂತೆಮಾಡುವುದು ನಿರಾಣಿ ಸಮೂಹದ ಮೊದಲ ಆದ್ಯತೆಯಾಗಿದೆ. ಈ ಹಂಗಾಮಿನಲ್ಲಿ ಎಂಆರ್‌ಎನ್‌ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆಜ.31 ರವರೆಗೆ ಹಾಗೂ ಕೇದಾರನಾಥ ಶುಗರ್ ಕಬ್ಬು ಪೂರೈಸುತ್ತಿರುವ ರೈತರಿಗೆ ಫೆ.7 ರವರೆಗಿನ ಬಿಲ್ಲುಗಳನ್ನು ರೈತರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗಿದೆ. ಅದರಂತೆ ಬಾದಾಮಿ ಶುಗರ್ಗೆ ಕಬ್ಬು ಕಳಿಸುವ ರೈತರಿಗೆ ಕಬ್ಬು ಪೂರೈಸಿದ 48 ಗಂಟೆಗಳಲ್ಲಿ ಬಿಲ್‌ ಪಾವತಿ ಮಾಡಲಾಗುವುದು ಎಂದು ತಿಳಿಸಿದರು.

ಹಿರಿಯ ಮುಖಂಡ ಪಿ.ಆರ್‌. ಗೌಡರ ಮಾತನಾಡಿ, ಹಲವಾರು ಸ್ಥಗಿತಗೊಂಡ ಕಾರ್ಖಾನೆಗಳಿಗೆ ಮರುಜೀವ ನೀಡಿ ಯಶಸ್ವಿಯಾಗಿರುವ ಸಚಿವ ಮುರುಗೇಶ ನಿರಾಣಿಯ ಅವರ ಮಾರ್ಗದರ್ಶನದಲ್ಲಿ ಬಾದಾಮಿ ಶುಗರ್ ಇನ್ನು ಮುಂದೆ ನಿರಾಂತಕವಾಗಿ ಕಾರ್ಯ ನಿರ್ವಹಿಸಲಿದೆ. ಈ ಭಾಗದ ರೈತರ ಸೇವೆಯಕಾರ್ಯದಲ್ಲಿ ನಿರತವಾಗಲಿದೆ ಎಂದು ಹೇಳಿದರು. ಮುಖಂಡ ಮಧು ಯಡ್ರಾಮಿ ಮಾತನಾಡಿ,ಬಾದಾಮಿ ತಾಲೂಕಿನಲ್ಲಿ ನಿರಾಣಿ ಸಮೂಹ 3ಕಾರ್ಖಾನೆ ಪ್ರಾರಂಭಿಸಿರುವುದರಿಂದ ರೈತರಿಗೆ ಅನುಕೂಲವಾಗುವ ಜತೆಗೆ ಈ ಭಾಗದ ಯುವಕರಿಗೆ ಸ್ಥಳಿಯವಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ಇದು ಬಾದಾಮಿ ತಾಲೂಕಿನ ಆರ್ಥಿಕ ವಿಕಾಸಕ್ಕೆ ನಾಂದಿಯಾಗಲಿದೆ ಎಂದು ತಿಳಿಸಿದರು.

ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ರವಿಕಾಂತ ಪಾಟೀಲ ಮಾತನಾಡಿ ಕಾರ್ಮಿಕರು ಹಾಗೂ ಅಧಿಕಾರಿಗಳ ಅವಿರತ ಶ್ರಮದಿಂದ ಮುಚ್ಚಿದ ಕಾರ್ಖಾನೆಯನ್ನು ಕಡಿಮೆ ಅವಧಿಯಲ್ಲಿ ಪುನರಾರಂಭ ಮಾಡಲು ಸಹಕಾರಿಯಾಗಿದೆ. ಬಾದಾಮಿ ಭಾಗದ ರೈತರ ಪಾಲಿಗೆ ವರದಾನವಾಗಲಿರುವ ಕಾರ್ಖಾನೆಯಅಭಿವೃದ್ದಿಗೆ ಕೈಜೋಡಿಸಬೇಕು ಎಂದರು. ಬೀಳಗಿ ಬಿಜೆಪಿ ಘಟಕದ ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಮುಖಂಡರಾದ ಮಹೆಂದ್ರ ಪಾಟೀಲ, ಮುಚಖಂಡಯ್ಯ ಹಂಗರಗಿ, ಆರ್‌.ವಿ. ವಟ್ನಾಳ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.