ದೆಹಲಿಯ ರೈತ ಹೋರಾಟಕ್ಕೆ ಬೆಂಬಲ  

ಅನಿರ್ದಿಷ್ಟ  ಸರಣಿ ಸತ್ಯಾಗ್ರಹ 11ನೇ ದಿನಕ್ಕೆ ! ­ಭಜನೆ ಪದ ಹಾಡಿ ಕೇಂದ್ರದ ವಿರುದ್ಧ ಆಕ್ರೋಶ

Team Udayavani, Feb 11, 2021, 12:56 PM IST

DWD protest

ಧಾರವಾಡ: ದೆಹಲಿಯಲ್ಲಿನ ರೈತ ಹೋರಾಟ ಬೆಂಬಲಿಸಿ ರೈತ ಹಿತರಕ್ಷಣಾ ಪರಿವಾರದ ವತಿಯಿಂದ ನಡೆದಿರುವ ಅನಿರ್ದಿಷ್ಟ ಸರಣಿ ಸತ್ಯಾಗ್ರಹ 11ನೇ ದಿನ ಪೂರೈಸಿದ್ದು, ಬುಧವಾರ ರೈತರು ಮೋದಿ ಸರಕಾರದ ವಿರುದ್ಧ ಭಜನೆ ಪದಗಳನ್ನು ಹಾಡಿ ಆಕ್ರೋಶ ಹೊರ ಹಾಕಿದರು.

ಮಾಳಪ್ಪ ಸುಣಗಾರ, ರಂಗಪ್ಪ ಭೋವಿ, ಬಸಪ್ಪ ದನದಮನಿ, ಫುಂಡಲಿಕಪ್ಪ ಕುರಿ, ಹನುಮಂತಪ್ಪ ಕಂಬಾರ, ಬಸವರಾಜ ಉಂಡೋಡಿ ಅವರ ಸಾರಥ್ಯದ ಅಮ್ಮಿನಬಾವಿಯ ಅನ್ನದಾತರ ಭಜನಾ ಮಂಡಳಿ ವತಿಯಿಂದ ಹಲವು ಗಂಟೆಗಳ ಕಾಲ ನಡೆದ ಭಜನಾ ಪದಗಳು ನೆರೆದವರ ಗಮನ ಸೆಳೆದವು. ಅದರಲ್ಲೂ ಸೀಮಿ ಇಲ್ಲದ ಭೂಮಿಯ ಮಾಡಿ, ನೇಗಿಲ ಇಲ್ಲದ ಜಮೀನ ಮಾಡಿ, ಮನಬಂದ ಕಾನೂನು ಮಾಡಿ ಎಂಬ  ಮೋದಿ ಸರಕಾರದ ನಡೆ, ನುಡಿಗಳ ಪದಗಳು ಎಲ್ಲರ ಗಮನ ಸೆಳೆದವು.

ಈ ವೇಳೆ ಮಾತನಾಡಿದ ರೈತ ಹಿತರಕ್ಷಣಾ ಪರಿವಾರದ ಸಂಚಾಲಕ ಪಿ.ಎಚ್‌. ನೀರಲಕೇರಿ, ಸರಕಾರ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಬೇಕು. ಯಾವುದೇ ವ್ಯಾಪಾರಿ ಖರೀದಿ ನಿಯಮ ಉಲ್ಲಂಘಿಸಿದರೆ ಕನಿಷ್ಟ 7 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ದಂಡ ವಿ ಧಿಸುವಂತಾಗಬೇಕೆಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಗೋವಿನ ಜೋಳಕ್ಕೆ ಕಳೆದ ವರ್ಷದ ಸೆಪ್ಟಂಬರ್‌ ತಿಂಗಳಲ್ಲಿಯೇ 1850 ರೂ ಕನಿಷ್ಟ ಬೆಂಬಲ ಬೆಲೆ ನಿಗದಿ ಪಡಿಸಲಾಗಿದೆ. ಆದರೆ ಈವರೆಗೆ ನಾಲ್ಕು ತಿಂಗಳು ಕಳೆದರೂ ಒಂದು ಕೆ.ಜಿ ಕೂಡ ಖರೀದಿ ಆಗಿಲ್ಲ. ಜಿಲ್ಲೆಯಲ್ಲಿ ಒಂದೇ ಒಂದು ಖರೀದಿ ಕೇಂದ್ರಗಳು ಕಾರ್ಯಾರಂಭವಾಗಿಲ್ಲ. ಬದಲಿಗೆ 2 ಲಕ್ಷ ಟನ್‌ ಗೋವಿನ ಜೋಳ ಕೇವಲ 500- 600 ಮಧ್ಯವರ್ತಿಗಳ ಪಾಲಾಗಿದೆ ಎಂದು ದೂರಿದರು.

ಇದನ್ನೂ ಓದಿ :ಕುರುಬ ಸಮಾವೇಶಕ್ಕೆ ಬಂದ ಜನ ನೋಡಿದ ಸಿದ್ದರಾಮಯ್ಯಗೆ ಕಿರಿಕಿರಿಯಾಗಿದೆ: ಈಶ್ವರಪ್ಪ ವಾಗ್ದಾಳಿ

ದೆಹಲಿಯಲ್ಲಿ ರೈತ ಹೋರಾಟಗಾರ ರಾಕೇಶ್‌ ಸಿಂಗ್‌ ಟಿಕಾಯತ್‌ ಅವರು ಅಕ್ಟೋಬರ್‌ 2ರವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಘೋಷಿಸಿದ್ದು, ಅಲ್ಲಿಯವರೆಗೆ ಸರಣಿ ಸತ್ಯಾಗ್ರಹ ಮುಂದುವರಿಸಲಾಗುವುದು ಎಂದರು.

ಅಬ್ದುಲ್‌ ಖಾನ್‌, ನರಹರಿ ಕಾಗಿನೆಲೆ, ಶ್ರೀಶೈಲಗೌಡ ಕಮತರ, ನಾಗರಾಜ ಕಿರಣಗಿ, ಸಲೀಂ ಸಂಗನಮುಲ್ಲಾ, ಲಕ್ಷ್ಮಣ ಬಕ್ಕಾಯಿ, ಸಿದ್ದಪ್ಪ ಕಳಸಣ್ಣವರ, ಸಚಿನ ಮುದರಡ್ಡಿ, ನವೀನ ಹೊಸಮನಿ, ಶಿವಾನಂದ ಬೂಬಣ್ಣವರ, ನಾರಾಯಣ ನಲವಡಿ ಸೇರಿದಂತೆ ಬಲ್ಲರವಾಡ, ಹೆಬಸೂರ ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.