ಪುತ್ತೂರು, ಕಡಬ: ಜಿ.ಪಂ.ಸ್ಥಾನ ಹೆಚ್ಚಳ; ತಾ.ಪಂ.ಇಳಿಕೆ


Team Udayavani, Feb 12, 2021, 12:50 AM IST

ಪುತ್ತೂರು, ಕಡಬ: ಜಿ.ಪಂ.ಸ್ಥಾನ ಹೆಚ್ಚಳ; ತಾ.ಪಂ.ಇಳಿಕೆ

ಪುತ್ತೂರು: ಮುಂಬರುವ ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿ ಕ್ಷೇತ್ರ ಪುನರ್‌ ವಿಂಗಡಣೆ ಮಾಡುವಂತೆ ಚುನಾವಣ ಆಯೋಗ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದು, ಪುತ್ತೂರು, ಕಡಬ ತಾಲೂಕಿನಲ್ಲಿ ಜಿಲ್ಲಾ ಪಂಚಾಯತ್‌ ಸ್ಥಾನ ಹೆಚ್ಚಳಗೊಂಡರೆ, ತಾಲೂಕು ಪಂಚಾಯತ್‌ಸ್ಥಾನ ಸಂಖ್ಯೆ ಇಳಿಕೆಯಾಗಲಿದೆ.

ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರ ಪುನರ್‌ವಿಂಗಡಣೆ ಆಗಲಿದ್ದು, ಪ್ರತೀ ತಾಲೂಕಿಗೆ ಸ್ಥಾನಗಳ ಸಂಖ್ಯೆಯನ್ನು ಆಯೋಗ ನಿಗದಿ ಪಡಿಸಿದ್ದು, ಇದರ ಅನ್ವಯ ಯಾವ್ಯಾವ ಕ್ಷೇತ್ರಗಳನ್ನು ಹೊಸದಾಗಿ ರಚಿಸಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಪುನರ್‌ ವಿಂಗಡಿತ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಯಲಿದೆ.

2021 ರ ಚುನಾವಣೆಯಲ್ಲಿ ಸ್ಥಾನ ನಿಗದಿಪಡಿಸಿ ಆಯೋಗ ಸುತ್ತೋಲೆ ಹೊರಡಿಸಿದ್ದು, ಅದಕ್ಕೆ ಪೂರಕವಾಗಿ ಕ್ಷೇತ್ರ ವಿಂಗಡಣೆ ಮಾಡಬೇಕಿದೆ. ಪ್ರಸ್ತುತ ಪುತ್ತೂರು ತಾಲೂಕಿನಲ್ಲಿ 3, ಕಡಬ ತಾಲೂಕಿನಲ್ಲಿ 3 ಜಿಲ್ಲಾ ಪಂಚಾಯತ್‌ ಕ್ಷೇತ್ರಗಳಿದ್ದು ಎರಡು ತಾಲೂಕಿನಲ್ಲಿ ಆ ಸಂಖ್ಯೆ 4 ಕ್ಕೆ ಏರಲಿದೆ. ಅಂದರೆ ಪುತ್ತೂರಿನಲ್ಲಿ 1, ಕಡಬದಲ್ಲಿ 1 ಜಿಲ್ಲಾ ಪಂಚಾಯತ್‌ ಸ್ಥಾನಗಳು ಹೆಚ್ಚಳಗೊಳ್ಳಲಿದೆ. ಪುತ್ತೂರುತಾಲೂಕು ಪಂಚಾಯತ್‌ನಲ್ಲಿ ಪ್ರಸ್ತುತ 14 ಸ್ಥಾನಗಳಿದ್ದು, ಅದಿನ್ನು 11 ಕ್ಕೆ ಇಳಿಯಲಿದೆ. ಕಡಬದಲ್ಲಿ 12 ಸ್ಥಾನಗಳಿದ್ದು ಆ ಸ್ಥಾನ 9 ಕ್ಕೆ ಇಳಿಯಲಿದೆ.

ವಿಭಜಿತ ಪುತ್ತೂರು ತಾಲೂಕು ಪಂಚಾಯತ್‌
2016ರ ಚುನಾವಣೆ ಸಂದರ್ಭದಲ್ಲಿ ಪುತ್ತೂರು ತಾ.ಪಂ.ವ್ಯಾಪ್ತಿಗೆ ಕಡಬವು ಒಳಪಟ್ಟಿತ್ತು. ಆಗ ಒಟ್ಟು 24 ಸದಸ್ಯ ಸ್ಥಾನ ಬಲವನ್ನು ಹೊಂದಿತ್ತು. ಕಳೆದ ವರ್ಷ ಕಡಬ ಪ್ರತ್ಯೇಕ ತಾಲೂಕು ಆಗಿ ಅನಂತರ ಹೊಸ ತಾ.ಪಂ.ಆಗಿ ರೂಪುಗೊಂಡಿತು.
ಹೀಗಾಗಿ ಪುತ್ತೂರು ತಾ.ಪಂ.ನ 24 ಸ್ಥಾನಗಳ ಪೈಕಿ 10 ಸ್ಥಾನ ಕಡಬಕ್ಕೆ ಸೇರಿತು. ಇದರಿಂದ ಪುತ್ತೂರಿನ ಸ್ಥಾನ ಬಲ 14ಕ್ಕೆ ಇಳಿಯಿತು. ಹೊಸದಾಗಿ ಕ್ಷೇತ್ರ ಪುನರ್‌ರಚನೆ ಸಂದರ್ಭದಲ್ಲಿ ಮತ್ತೆ 3 ಸ್ಥಾನ ಇಳಿಕೆ ಕಂಡು 11 ಕ್ಕೆ ತಲುಪಲಿದೆ. ಜಿ.ಪಂ.ಕ್ಷೇತ್ರಕ್ಕೆ ಸಂಬಂಧಿಸಿ ಈ ಹಿಂದಿನ ಅವಧಿಯಲ್ಲಿ ಪುತ್ತೂರು ಕಡಬ ತಾಲೂಕು ಒಟ್ಟು 6 ಸ್ಥಾನ ಹೊಂದಿತ್ತು. ಈಗ ಅದರ ಸಂಖ್ಯೆ 8 ಕ್ಕೆ ಏರಿಕೆ ಕಂಡಿದೆ.

ಕ್ಷೇತ್ರಕ್ಕೆ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದ ಹೆಸರು
ಪುನರ್‌ ವಿಂಗಡಿತ ತಾ.ಪಂ., ಜಿ.ಪಂ.ಕ್ಷೇತ್ರಕ್ಕೆ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದ ಹೆಸರನ್ನು ಇಡಲಾಗುತ್ತದೆ. ಪುನರ್‌ ವಿಂಗಡಣೆಗೆ ಸಂಬಂಧಿಸಿ ಆಯೋಗವು ಉಲ್ಲೇಖ-1 ಅನ್ವಯ ಮಾರ್ಗಸೂಚಿ ಹೊರಡಿಸಿದ್ದು, ಇದರ ಅನ್ವಯ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡಿ ವರದಿ ಸಲ್ಲಿಸುವಂತೆ ಚುನಾವಣ ಆಯೋಗ ಜಿಲ್ಲಾಧಿಕಾರಿಗಳಿಗೆ ಸೂಚಿಸಿ ದಿನ ನಿಗದಿ ಮಾಡಿದೆ. ತಾಲೂಕುವಾರು ನಕ್ಷೆಯನ್ನು ಜಿ.ಪಂ. ಎನ್‌ಆರ್‌ಡಿಎಂಎಸ್‌ ಸಹಕಾರದೊಂದಿಗೆ ಸಿದ್ಧಪಡಿಸುವುದು, ಕ್ಷೇತ್ರವಾರು ಜನಸಂಖ್ಯೆ, ಗಡಿ ಗುರುತು ಇತ್ಯಾದಿಗಳ ಮಾಹಿತಿ ನೀಡುವಂತೆ ತಿಳಿಸಿದೆ.

ಜಿ.ಪಂ.ಕ್ಷೇತ್ರ ಪುನರ್‌ ವಿಂಗಡಣೆ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳನ್ನು ಗಣನೆಗೆ ತೆಗೆದು ಕೊಳ್ಳುವುದು, ತಾಲೂಕಿನೊಳಗಿರುವ ಗ್ರಾ.ಪಂ.ಗಳನ್ನು ವಿಭಜಿಸದೆ ಪೂರ್ಣ ಗ್ರಾ.ಪಂ.ಗಳನ್ನು ಒಟ್ಟುಗೂಡಿಸಿ ಒಂದು ಜಿ.ಪಂ.ಕ್ಷೇತ್ರವಾಗಿ ರಚಿಸುವುದು, ಗ್ರಾ.ಪಂ.ಗಳನ್ನು ಒಟ್ಟುಗೂಡಿಸುವ ಸಂದರ್ಭದಲ್ಲಿ ಅಕ್ಕಪಕ್ಕದ ಗ್ರಾ.ಪಂ.ಗಳನ್ನು ಒಂದು ಗೂಡಿಸುವುದು, ಒಂದೊಕ್ಕೊಂದು ಭೌಗೋ ಳಿಕವಾಗಿ ಹೊಂದಿಕೊಂಡಂತೆ ಇರುವ ಹಾಗೆ ನೋಡಿಕೊಳ್ಳುವುದು, ಸಂಪರ್ಕ ವ್ಯವಸ್ಥೆಗೆ ಅಡೆತಡೆ ಇಲ್ಲ ಎಂಬುದನ್ನು ದೃಢಪಡಿಸುವಿಕೆ ಸೇರಿದಂತೆ ನಿಯಮಗಳನ್ನು ವಿಧಿಸಲಾಗಿದೆ.

ತಾ.ಪಂ.ಕ್ಷೇತ್ರ ಪುನರ್‌ ರಚನೆ ಸಂದರ್ಭದಲ್ಲಿ ಜಿ.ಪಂ.ಕ್ಷೇತ್ರದೊಳಗೆ ಎಷ್ಟು ತಾ.ಪಂ.ಕ್ಷೇತ್ರಗಳನ್ನು ರಚಿಸಬಹುದೋ ಅಷ್ಟು ಕ್ಷೇತ್ರಗಳನ್ನು ಆ ಜಿ.ಪಂ.ಕ್ಷೇತ್ರದ ವ್ಯಾಪ್ತಿಯೊಳಗೆ ರಚಿಸುವುದು, ಪೂರ್ಣ ಗ್ರಾಮ ಪಂಚಾಯತ್‌ಗಳನ್ನು ಒಟ್ಟುಗೂಡಿಸಿ ಕ್ಷೇತ್ರ ರಚಿಸುವುದು ಅಥವಾ ಅದು ಸಾಧ್ಯವಾಗದಿದ್ದರೆ ಕಂದಾಯ ಗ್ರಾಮವನ್ನು ಬೇರ್ಪಡಿಸದೆ ಗ್ರಾಮ ಗಳನ್ನು ಗುಂಪು ಮಾಡುವುದು, ಒಂದು ತಾ.ಪಂ.ಕ್ಷೇತ್ರ ಎರಡು ಜಿ.ಪಂ. ವ್ಯಾಪ್ತಿಯೊಳಗೆ ಸೇರದಂತೆ ಗಮನಹರಿಸುವ ಬಗ್ಗೆ ಸೂಚನೆ ನೀಡಲಾಗಿದೆ. ತಾ.ಪಂ.ಕ್ಷೇತ್ರ ರಚಿಸಲು 12.5 ಸಾವಿರದಿಂದ 15 ಸಾವಿರ ಜನಸಂಖ್ಯೆ ಅಗತ್ಯವಿದ್ದರೆ, ಜಿ.ಪಂ.ಕ್ಷೇತ್ರ ರಚಿಸಲು 35 ರಿಂದ 40 ಸಾವಿರ ಜನಸಂಖ್ಯೆಯ ಆವಶ್ಯಕತೆ ಇದೆ ಎಂದು ತಾಲೂಕು ಚುನಾವಣ ಶಾಖಾ ಅಧಿಕಾರಿಗಳು ತಿಳಿಸಿದ್ದಾರೆ.

ಸುಳ್ಯ: ತಾ.ಪಂ. 11ಕ್ಕೆ ಇಳಿಕೆ
ಸುಳ್ಯ,ಫೆ.11: ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗೆ ಕ್ಷೇತ್ರ ಪುನರ್‌ ವಿಂಗಡನೆಯಾಗಿದ್ದು ಸುಳ್ಯ ತಾಲೂಕಿನಲ್ಲಿ ಈ ಬಾರಿ ಒಟ್ಟು 11 ತಾ.ಪಂ. ಸ್ಥಾನ ಹಾಗೂ 4 ಜಿ.ಪಂ. ಸ್ಥಾನಗಳು ನಿಗದಿಯಾಗಿವೆ. ಕಳೆದ ಚುನಾವಣೆಯಲ್ಲಿ ಒಟ್ಟು 13 ತಾ.ಪಂ. ಹಾಗೂ 4 ಜಿ.ಪಂ. ಸದಸ್ಯ ಸ್ಥಾನಗಳಿದ್ದವು. ಸುಬ್ರಹ್ಮಣ್ಯ ಹಾಗೂ ಎಡಮಂಗಲ ಸ್ಥಾನಗಳು ಕಡಬ ತಾಲೂಕು ವ್ಯಾಪ್ತಿಗೆ ಸೇರ್ಪಡೆಗೊಂಡಿವೆ.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.