ತೆರೆಮೇಲೆ ಐವರು ನಿರ್ದೇಶಕರ ಕನಸು: ಇಂದು ಐದು ಚಿತ್ರಗಳು ರಿಲೀಸ್‌


Team Udayavani, Feb 12, 2021, 9:53 AM IST

ತೆರೆಮೇಲೆ ಐವರು ನಿರ್ದೇಶಕರ ಕನಸು: ಇಂದು ಐದು ಚಿತ್ರಗಳು ರಿಲೀಸ್‌

ಈಗಾಗಲೇ ಬಿಡುಗಡೆಗೆ ತಯಾರಾಗಿ ನಿಂತಿರುವ ಕನ್ನಡದ ಬಹುತೇಕ ಸ್ಟಾರ್‌ ನಟರ ಸಿನಿಮಾಗಳು ತಮ್ಮ ಬಿಡುಗಡೆಯ ದಿನಾಂಕವನ್ನು ಘೋಷಿಸಿಕೊಂಡಿವೆ. ಫೆಬ್ರವರಿ ಮೊದಲ ವಾರದಿಂದ ಮೇ ಎರಡನೇ ವಾರದವರೆಗೆ ಒಂದರ ಹಿಂದೊಂದು ಬಿಗ್‌ ಬಜೆಟ್‌, ಬಿಗ್‌ ಸ್ಟಾರ್ಸಿ ನಿಮಾಗಳು ತೆರೆಗೆ ಬರುತ್ತಿವೆ. ಎರಡು ವಾರಗಳ ಅಂತರದಲ್ಲಿ ಸ್ಟಾರ್ ಸಿನಿಮಾಗಳು ತೆರೆಗೆ ಬರುತ್ತಿರುವುದರಿಂದ, ಇನ್ನೂ ಮೂರ್‍ನಾಲ್ಕು ತಿಂಗಳು ಬಹುತೇಕ ಥಿಯೇಟರ್‌ಗಳು ಸ್ಟಾರ್ ಸಿನಿಮಾಗಳಿಂದಲೇ ರಾರಾಜಿಸಲಿವೆ. ಹೀಗಿರುವಾಗ ಸ್ಟಾರ್ ಸಿನಿಮಾಗಳ ಬಿಡುಗಡೆಯ ಎರಡು ವಾರಗಳ ನಡುವಿನ ಅವಧಿಯಲ್ಲಿ ಸದ್ಯ ಬಿಡುಗಡೆಗೆ ರೆಡಿಯಾಗಿರುವ ಹೊಸಬರ ಸಿನಿಮಾಗಳು ತೆರೆಗೆ ಬರಲು ತಯಾರಿ ಮಾಡಿಕೊಳ್ಳುತ್ತಿವೆ.

ಕಳೆದ ವಾರ (ಫೆ. 5) ರಂದು ಪ್ರಜ್ವಲ್‌ ದೇವರಾಜ್‌ ಅಭಿನಯದ “ಇನ್ಸ್‌ಪೆಕ್ಟರ್‌ ವಿಕ್ರಂ’ ಮತ್ತು ವಿನೋದ್‌ ಪ್ರಭಾಕರ್‌ ಅಭಿನಯದ “ಶ್ಯಾಡೊ’ ಸಿನಿಮಾಗಳು ಬಿಡುಗಡೆಯಾಗಿದ್ದವು. ನಡುವೆಯೇ ಇನ್ನೂ ಎರಡು ಹೊಸಬರ ಸಿನಿಮಾಗಳು ಬಿಡುಗಡೆಯಾಗಿದ್ದವು. ಇನ್ನು ಮುಂದಿನ ಶುಕ್ರವಾರ (ಫೆ. 19) “ಪೊಗರು’ ಚಿತ್ರ ತೆರೆ ಕಾಣುತ್ತಿರುವುದರಿಂದ, ಈ ಶುಕ್ರವಾರ (ಫೆ. 12) ಯಾವುದೇ ಸ್ಟಾರ್ ಸಿನಿಮಾಗಳು ರಿಲೀಸ್‌ ಆಗುತ್ತಿಲ್ಲ. ಹೀಗಾಗಿ ಈ ವಾರ ಸ್ಟಾರ್ ಸಿನಿಮಾಗಳ ಅಬ್ಬರ ಇಲ್ಲದಿರುವುದರಿಂದ, ಬರೋಬ್ಬರಿ ಐದು ಹೊಸಬರ ಸಿನಿಮಾಗಳು ತಮ್ಮ ಬಿಡುಗಡೆಗೆ ಪ್ಲಾನ್‌ ಮಾಡಿಕೊಂಡಿವೆ.

ಕಲಾವಿದ

“ಪದ್ಮರಾಜ್‌ ಫಿಲಂಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ಕಲಾವಿದ’ ಚಿತ್ರವನ್ನು ಶಿವಾನಂದ್‌ ಹೆಚ್.ಡಿ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಪ್ರದೀಪ್‌ ಕುಮಾರ್‌, ಸಂಭ್ರಮ, ಮಂಜುನಾಥ್‌ ಹೆಗ್ಡೆ, ಅರುಣಾ ಬಾಲರಾಜ್‌, ಮೂ ಗು ಸುರೇಶ್‌, ವರ್ಷ ಮಲ್ಲೇಶ್‌, ಗೀತಾ, ಶ್ರೀಧರ್‌, ಜಗದೀಶ್‌, ಲೋಕೇಶ್‌ ಮುಂತಾದವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಚಿದಾನಂದ್‌ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನವಿದೆ. ಚಿತ್ರದ ಹಾಡುಗಳಿಗೆ ವಿವೇಕ್‌ ಚಕ್ರವರ್ತಿ – ಪೂರ್ಣಚಂದ್ರ ತೇಜಸ್ವಿ ಸಂಗೀತವಿದೆ.

ಇದನ್ನೂ ಓದಿ:ಉದಯವಾಣಿಯಲ್ಲಿ ಕಿಚ್ಚನ ಬೆಳ್ಳಿ ಹಬ್ಬದ ಸಂಭ್ರಮ: 25 ವರ್ಷದ ಸಿನಿಪಯಣಕ್ಕೆ ಆತ್ಮೀಯ ಅಭಿನಂದನೆ

ಕನಸು ಮಾರಾಟಕ್ಕಿದೆ.

ಶಿವಕುಮಾರ್‌ ನಿರ್ಮಾಣದಲ್ಲಿ ಮೂಡಿಬಂದಿರುವ “ಕನಸು ಮಾರಾಟಕ್ಕಿದೆ’ ಚಿತ್ರವನ್ನು ಸ್ಮಿತೇಶ್‌ ನಿರ್ದೇಶಿಸಿದ್ದಾರೆ. ಶ್ರೀಧರ್‌, ಗೋವಿಂದೇ ಗೌಡ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ರಾ

ರಾಜೇಶ್‌ ಗೌಡ ನಟಿಸಿ, ನಿರ್ದೇಶನ ಮಾಡಿರುವ ಕ್ರೈಂ ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ರಾ’ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. “ರಾ’ ಚಿತ್ರದಲ್ಲಿ ನಾಯಕ ರಾಜೇಶ್‌ ಗೌಡ ಅವರೊಂದಿಗೆ, ಸನಾ ನಾಯಕ್‌, ಸುಜಿತ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಕುಮಾರ್‌ ಛಾಯಾಗ್ರಹಣ, ಜೇಮ್ಸ್ ಆರ್ಕಿಟೆಕ್ಟ್ ಸಂಗೀತ, ತ್ರಿಭುವನ್‌ ನೃತ್ಯ ನಿರ್ದೇಶನವಿದೆ.

ನಿಮ್ಮೂರು

“ಹಠವಾದಿ ಸಿನಿ ಕ್ರಿಯೇಶನ್ಸ್‌’ ಲಾಂಛನದಲ್ಲಿ ನಿರ್ಮಾಣವಾಗಿರುವ “ನಿಮ್ಮೂರು’ ಚಿತ್ರಕ್ಕೆ ವಿಜಯ್‌ ಎಸ್‌. ನಿರ್ದೇಶನವಿದೆ. ಗ್ರಾಮೀಣ ಸೊಗಡಿನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಲಕ್ಕಿರಾಮ್, ವೀಣಾ ಗಂಗಾರಾಮ್, ತ್ರಿವಿಕ್ರಂ, ಸಿದ್ದು ಮಂಡ್ಯ, ಮಂಜುನಾಥ್‌, ಅಂಜಿನಪ್ಪ, ಸುಧಾ, ಶ್ರೀಕಾಂತ್‌ ಹೊನ್ನವಳ್ಳಿ ಇತರರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಪಳನಿವೇಲು ಛಾಯಾಗ್ರಹಣ, ಸಿ.ಕೆ. ಕುಮಾರ್‌ ಸಂಕಲನ, ಅಭಿನಂದನ್‌ ಕಶ್ಯಪ್‌ ಸಂಗೀತವಿದೆ.

ಅಣ್‌ತಮ್ಮ

ರವಿಚಂದ್ರ ಕೆ. ನಿರ್ಮಾಣ ಮಾಡಿರುವ “ಅಣ್‌ತಮ್ಮ’ ಚಿತ್ರಕ್ಕೆ ಕೆ. ಅನುº ಅರಸ್‌ ನಿರ್ದೇಶನ ಮಾಡಿದ್ದಾರೆ. ಗ್ರಾಮೀಣ ಸೊಗಡಿನ ಕತಾಹಂದರ ಹೊಂದಿರುವ ಈ ಚಿತ್ರದಲ್ಲಿ ನವನಟ ರಾಕೇಶ್‌ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಚಿರಂಜೀವಿ ಛಾಯಾಗ್ರಹಣ, ಮರಿಸ್ವಾಮಿ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಪ್ರಸನ್ನ ಸಂಗೀತವಿದೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.