ಜಿಲ್ಲಾಡಳಿತಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ|ಸಂಜೀವ ಕುಮಾರ ಸೂಚನೆ


Team Udayavani, Feb 12, 2021, 2:56 PM IST

DC meeting

ಗದಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂ ಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಶೀಘ್ರವೇ ಇತ್ಯರ್ಥಗೊಳಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ|ಸಂಜೀವ ಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿದ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅರ್ಹತಾ ದಿನಾಂಕಕ್ಕೆ 18 ವರ್ಷ ಪೂರೈಸಿದ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಜರುಗಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿ ಸಿದಂತೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ವಿಶೇಷ ಅಭಿಯಾನದಡಿ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ, ಅರ್ಹರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಎಪಿಕ್‌ ಕಾರ್ಡ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ನಿಧನ ಹೊಂದಿದ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಬೇಕು. ಚುನಾವಣೆಗಳ ಸಂದರ್ಭದಲ್ಲಿ ವಿಕಲಚೇತನರು, ಎಂಬತ್ತು ವರ್ಷ ಮೇಲ್ಪಟ್ಟವರು ಹಾಗೂ ಕೋವಿಡ್‌ ಸೋಂಕಿತರಿಗೆ ಪೋಸ್ಟಲ್‌ ಬ್ಯಾಲೆಟ್‌ ನೀಡಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕನುಗುಣವಾಗಿ ಪೂರ್ವ ಸಿದ್ಧತೆ ಮಾಡಿಟ್ಟುಕೊಳ್ಳಬೇಕು ಎಂದರು. ಮತದಾರರ ಗುರುತಿನ ಚೀಟಿ ಹೊಂದಿದವರೆಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದರ ಕುರಿತು ಪರಿಶೀಲಿಸಲು ಈ-ಎಪಿಕ್‌ ತಂತ್ರಾಂಶ ಜಾರಿಗೆ ತರಲಾಗಿದ್ದು, ಈ ಕುರಿತು ಜಾಗೃತಿ ಮೂಡಿಸಲು ತಿಳಿಸಿದರು.

ಹದಿನೆಂಟು ವರ್ಷ ಪೂರೈಸಿದ ಯುವ ಮತದಾರರು ಹಾಗೂ ವಿಕಲಚೇತನ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲು ಆದ್ಯತೆ ನೀಡುವ ಮೂಲಕ ಎಲ್ಲರಿಗೂ ಮತದಾನದ ಹಕ್ಕು ಒದಗಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ :ಕೇತ್ರಗಳ ಪುನರ್ವಿಂಗಡಣೆಗೆ ಡಿಸಿಗಳಿಗೆ ನಿರ್ದೇಶನ  

ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಮಾತನಾಡಿ, ಜಿಲ್ಲೆಯಲ್ಲಿ ನಾಲ್ಕು ಬಾರಿ ವಿಶೇಷ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಳ್ಳುವ ಮೂಲಕ 9,711 ಅರ್ಹ ಯುವ ಸಮೂಹವನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ವಹಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿರುವ ತಾಂತ್ರಿಕ ನ್ಯೂನತೆ ಸರಿಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಪಂ ಸಿಇಒ ಡಾ|ಆನಂದ ಕೆ., ಜಂಟಿ ಮುಖ್ಯ ಚುನಾವಣಾಧಿಕಾರಿ ವಿ.ರಾಘವೇಂದ್ರ, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಚುನಾವಣಾ ತಹಶೀಲ್ದಾರರು ಹಾಗೂ ವಿವಿಧ ತಾಲೂಕಿನ ತಹಶೀಲ್ದಾರರು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.