ದರ ಕುಸಿತ; ಎಲೆ ಕೋಸು ಕುರಿ, ದನಗಳ ಪಾಲು

ಮಾರುಕಟ್ಟೆಗೆ ಸಾಗಿಸುವ ಖರ್ಚೂ ಸಿಗದೇ ಜಮೀನಿನಲ್ಲೇ ಜಾನುವಾರು, ಕುರಿ ಬಿಟ್ಟು ಮೇಯಿಸುತ್ತಿರುವ ರೈತರು

Team Udayavani, Feb 12, 2021, 5:03 PM IST

farmers

ಚನ್ನರಾಯಪಟ್ಟಣ/ಹಾಸನ: ಚನ್ನರಾಯಪಟ್ಟಣ ತಾಲೂಕು ಸೇರಿದಂತೆ ಜಿಲ್ಲೆಯಲ್ಲಿ ಎಲೆಕೋಸು ಬೆಳೆದಿರುವ ರೈತರು ದರ ಕುಸಿತದಿಂದ ಕಂಗಾಲಾಗಿದ್ದಾರೆ. ಕೂಲಿಯ ಖರ್ಚೂ ಸಿಗದ ಕಾರಣಕ್ಕೆ ಹುಲುಸಾಗಿ ಬೆಳೆದ ಬೆಳೆಯನ್ನು ಹೊಲದಲ್ಲೇ ಕುರಿ, ದನಗಳನ್ನು ಬಿಟ್ಟು ಮೇಯಿಸುತ್ತಿದ್ದಾರೆ.

ಹಾಸನ ತಾಲೂಕಿನ ತೇಜೂರು, ಬಸವಘಟ್ಟ, ಹೊನ್ನವರ ಸೇರಿದಂತೆ ಅರಸೀಕೆರೆ ತಾಲೂಕಿನ ಹಲವು ಗ್ರಾಮಗಳು, ಚನ್ನರಾಯಣಪಟ್ಟಣ ತಾಲೂಕಿನ ದಂಡಿಗನಹಳ್ಳಿ, ಹೆಜ್ಜಗಾರನಹಳ್ಳಿ ಇತರೆ ಗ್ರಾಮಗಳಲ್ಲಿ ಎಲೆಕೋಸು ಬೆಳೆದಿರುವ ರೈತರು ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೆಜ್ಜಗಾರನಹಳ್ಳಿ ರೈತ ನಾಗರಾಜು, ತಮ್ಮ ಒಂದೂವರೆ ಎಕರೆ ಕೃಷಿ ಭೂಮಿಯಲ್ಲಿ 50 ಸಾವಿರ ರೂ. ವೆಚ್ಚ ಮಾಡಿ ಎಲೆ ಕೋಸು ಬೆಳೆದಿದ್ದರು. ಒಂದೂವರೆ ಎಕರೆಯಿಂದ 30 ಟನ್‌ ಎಲೆಕೋಸು ಕಟಾವಿಗೆ ಬಂದಿತ್ತು. ಆದರೆ, ಮಾರುಕಟ್ಟೆಯಲ್ಲಿ ಪ್ರತಿ ಕಿಲೋ ಎಲೆಕೋಸು ಮೂರ ರಿಂದ ನಾಲ್ಕು ರೂ. ಇದೆ. ಇನ್ನು ಕೃಷಿ ಭೂಮಿ ಬಳಿಗೆ ಬಂದು ಎಲೆಕೋಸು ಪಡೆಯುವ ವರ್ತಕರು ಎರಡು ರೂ.ಗೆ ಕೇಳುತ್ತಿದ್ದಾರೆ. ತಾವೇ ಮಾರುಕಟ್ಟೆಗೆ ಎಲೆಕೋಸು ತೆಗೆದುಕೊಂಡು ಹೋಗಿ ಮಾರಾಟ ಮಾಡಿದರೆ ವಾಹನ ಬಾಡಿಗೆ, ಕೋಯ್ಲು ಮಾಡಿದ ಕಾರ್ಮಿಕರ ಕೂಲಿಯೂ ಹುಟ್ಟುವುದಿಲ್ಲ, ಇನ್ನು ಜಮೀನಿನ ಬಳಿಯೇ ಬರುವ ವರ್ತಕರು ಕಡಿಮೆ ಬೆಲೆಗೆ ಕೇಳುತ್ತಾರೆ. ಅದರಿಂದಕೋಸು ಬೆಳೆಯಲು ತಗುಲಿದ್ದ ವೆಚ್ಚದ ಅರ್ಧದಷ್ಟೂ ಕೈ ಸೇರುತ್ತಿಲ್ಲ. ಹೀಗಾಗಿ ಅನ್ಯ ಮಾರ್ಗ ಕಾಣದೇ, ಬೆಳೆ ಸಮೇತ ಉಳುಮೆ ಮಾಡುವ ಬದಲು ಕುರಿ, ದನಗಳನ್ನು ಬಿಟ್ಟು ಮೇಯಿಸುತ್ತಿದ್ದಾರೆ.

ಇದು ಕೇವಲ ದಂಡಿಗನಹಳ್ಳಿ ಹೋಬಳಿಯ ಗೆಜ್ಜಗಾರನಹಳ್ಳಿ ರೈತ ನಾಗರಾಜು ಅವರ ಸಮಸ್ಯೆಯಲ್ಲ, ಜಿಲ್ಲೆಯಲ್ಲಿ ಕೋಸು ಬೆಳೆದಿರುವ ಅನೇಕ ಮಂದಿಯ ಸಮಸ್ಯೆಯೂ ಆಗಿದೆ. ಇದರಲ್ಲಿ ಕೆಲವರು ಕೋಸು ಸಮೇತ ಟ್ರ್ಯಾಕರ್‌ ‌r ನಿಂದ ಉಳುವೆಮಾಡಿಸುತ್ತಿದ್ದಾರೆ. ಇನ್ನು ಹಲವು ಮಂದಿ ಅರ್ಧದಷ್ಟು ಹಣವಾದರೂ ಕೈ ಸೇರುತ್ತಿದೆ ಎಂದು ಮಾರಾಟಕ್ಕೆ ಮುಂದಾಗುತ್ತಿದ್ದಾರೆ.

ವಲಸೆ ಕುರಿಗಳಿಗೆ ಭರ್ಜರಿ ಮೇವು: ಮೇಲುಕುಂಟೆ ಗ್ರಾಪಂ ವ್ಯಾಪ್ತಿಯ ತೊಗರಗುಂಟೆ ಗೊಲ್ಲರಹಟ್ಟಿ, ಗೊಲ್ಲಹಳ್ಳಿ, ಉಗನೇಕಟ ಸೇರಿದಂತೆ ವಿವಿಧೆಡೆಗಳಿಂದ ಹಾಸನ, ಚನ್ನರಾಯಪಟ್ಟಣ, ಹೊಳೆನರಸೀಪುರ, ಅರಸೀಕೆರೆ ತಾಲೂಕಿಗೆ ವಲಸೆ ಬಂದಿರುವ ಕುರಿಗಳಿಗೆ ಈಗ ಎಲೆಕೋಸೇ ಆಹಾರ. ಎಕರೆಗೆ 4 ಸಾವಿರ ರೂ.: ಬೆಲೆ ಇಲ್ಲದೆ ಜಮೀನಿನಲ್ಲೇ ಪಾಳು ಬಿಟ್ಟಿರುವ ಎಲೆಕೋಸನ್ನು ಎಕರೆಗೆ 4 ರಿಂದ 10 ಸಾವಿರ ರೂ.ನಂತೆ ಖರೀದಿಸುವ ಕುರಿಗಾಹಿಗಳು ಜಮೀನಿಗೇ ಕುರಿಗಳನ್ನು ಬಿಟ್ಟು ಮೇಯಿಸುತ್ತಿದ್ದಾರೆ.

ಹಣ ಕಡಿಮೆ ಆದ್ರೂ ಕುರಿಗಳು ಜಮೀನಿನಲ್ಲಿ ಮೇಯ್ಯುವುದರಿಂದ ಅಲ್ಪಸ್ವಲ್ಪ ‌ಗೊಬ್ಬರವಾದ್ರೂ ಸಿಗುತ್ತದೆ ಎಂಬ ಕಾರಣಕ್ಕೆ ಬಂದಷ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಈ ಕುರಿತು ಮಾತನಾಡಿದ ತೊಗರಗುಂಟೆಯ ಕುರಿಗಾಹಿ ರಂಗಪ್ಪ, ರೈತರಿಂದ ಎಲೆಕೋಸು ಪಡೆಯುವುದರಿಂದ ನಮಗೆ ಕೋಸಿನ ಜೊತೆಗೆ ಜಮೀನಿನಲ್ಲೇ ಬೆಳೆದ ಹುಲ್ಲು ಕೂಡ ಸಿಗುತ್ತದೆ. ಇದರಿಂದ 15 ದಿನ ಕುರಿಗಳು ನೆಮ್ಮದಿಯಾಗಿ ಮೇಯ್ಯುತ್ತವೆ  ಎಂದು ಹೇಳಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.