ಯುಜಿಡಿ; ದಾಖಲೆಯಲ್ಲೂ ಗೋಲ್ಮಾಲ್
ಪುರಸಭೆಗೆ ಯಾವುದೇ ದಾಖಲೆಗಳು ಸಲ್ಲಿಸಿಲ್ಲ ಎಂದು ಪುರಸಭೆ ಅಧಿ ಕಾರಿ ಮಾಹಿತಿ ನೀಡಿದ್ದಾರೆ.
Team Udayavani, Feb 12, 2021, 5:50 PM IST
ಹುಮನಾಬಾದ: ಕರ್ನಾಟಕ ಪೌರ ಸುಧಾರಣಾ ಯೋಜನೆಯಡಿ ಹುಮನಾಬಾದ ಪಟ್ಟಣದಲ್ಲಿ ಬಹು ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಂಡಿರುವ ಒಳಚರಂಡಿ ವ್ಯವಸ್ಥೆ ಕಾಮಗಾರಿ (ಯುಜಿಡಿ)ಗೆ ಸಂಬಂಧಿ ಸಿದ ಉಳಿದ ಹಣ ಪಾವತಿ ಮಾಡುವಂತೆ ಗುತ್ತೆದಾರ ಪುರಸಭೆಗೆ ಪತ್ರ ಬರೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ಪುರಸಭೆ ಮುಖ್ಯಾಧಿ ಕಾರಿಗೆ ಪತ್ರ ಬರೆದಿರುವ ಗುತ್ತಿಗೆ ಪಡೆದ ಗುತ್ತೆದಾರ, ಯುಜಿಡಿ ಕಾಮಗಾರಿಗಾಗಿ ಇರಿಸಿದ ಬ್ಯಾಂಕ್ ಖಾತರಿ ಹಣ ಹಾಗೂ ಕಾಮಗಾರಿಯ ಉಳಿದ ಹಣ ನಿಯಮ ಅನುಸಾರ ಪಾವತಿ ಮಾಡುವಂತೆ ಪತ್ರ ಬರೆದಿದ್ದಾರೆ. ಹಣ ಪಾವತಿ ತಡವಾದರೆ ವರ್ಷಕ್ಕೆ ಶೇ.18 ಬಡ್ಡಿ ಪಾವತಿ ಮಾಡಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ. ಕಾಮಗಾರಿಯ ಬಾಕಿ ಹಣ 83.71 ಲಕ್ಷ ರೂ. ಹಾಗೂ ಬ್ಯಾಂಕ್ ಖಾತರಿ ಹಣ ಪಾವತಿ
ಮಾಡಬೇಕು ಎಂದು ವಿವರಿಸಿದ್ದಾರೆ.
ಲಭ್ಯವಿಲ್ಲ ದಾಖಲೆ: ಬಹು ಕೋಟಿ ವೆಚ್ಚದಲ್ಲಿ ಪಟ್ಟಣದಲ್ಲಿ ನಡೆದ ಯುಜಿಡಿ ಕಾಮಗಾರಿಗೆ ಸಂಬಂಧಿಸಿದಂತೆ ಯಾವ ದಾಖಲೆಗಳು ಕೂಡ ಸ್ಥಳೀಯ ಪುರಸಭೆಯಲ್ಲಿ ಲಭ್ಯ ಇಲ್ಲ ಎಂಬ ಮಾಹಿತಿ ಬಹಿರಂಗಗೊಂಡಿದೆ. ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್ಸಿ) ಹಾಗೂ ಪುರಸಭೆ ಅ ಧಿಕಾರಿಗಳ ಮಧ್ಯೆ ನಡೆಯುತ್ತಿರುವ ಪತ್ರ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಬಿಟ್ಟರೆ ಯುಜಿಡಿ ಕಾಮಗಾರಿಯ ಸ್ಕೋಪ್ ಆಫ್ ವರ್ಕ್, ಕಾಮಗಾರಿಯ ಕ್ರಿಯಾ ಯೋಜನೆ, ಕಾರ್ಯ ನಿರ್ವಹಣೆ ವಿವರ, ಕಾಮಗಾರಿಯ ವಸ್ತುಗಳ ವಿವರ, ಕಾಮಗಾರಿಯ ಪೂರ್ಣ ವಿವರದ ಯಾವ ದಾಖಲೆಗಳು ಕೂಡ ಪುರಸಭೆಯಲ್ಲಿ ಲಭ್ಯವಿಲ್ಲ. ಕಾಮಗಾರಿ ಮಾಡಿದ ಗುತ್ತೆದಾರರು ಸಂಬಂಧಿಸಿದ ಇಂಜಿನಿಯರ್ ಅಥವಾ ಪುರಸಭೆಗೆ ಯಾವುದೇ ದಾಖಲೆಗಳು ಸಲ್ಲಿಸಿಲ್ಲ
ಎಂದು ಪುರಸಭೆ ಅಧಿ ಕಾರಿ ಮಾಹಿತಿ ನೀಡಿದ್ದಾರೆ.
ಉನ್ನತ ತನಿಖೆ ನಡೆಸಿ: ಕಳೆದ ಅನೇಕ ವರ್ಷಗಳಿಂದ ಪಟ್ಟಣದಲ್ಲಿ ಯುಜಿಡಿ ಕಾಮಗಾರಿ ನಡೆಯುತ್ತಲೇ ಇದೆ. ಇಂದಿಗೂ ಕೂಡ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಮುಗಿದಿಲ್ಲ. ಪಟ್ಟಣದ ವಿವಿಧ ಬಡಾವಣೆಗಳಲ್ಲಿನ ಕೊಳಚೆ ನೀರು ಹರಿದು ಎಸ್ಟಿಪಿಗೆ ಸೇರುವ ಪ್ರಾಯೋಗಿಕ ಪರೀಕ್ಷೆ ನಡೆದಿಲ್ಲ.
ಪುರಸಭೆಯಲ್ಲಿ ಇದಕ್ಕೆ ಸಂಬಂಧಿಸಿದ ದಾಖಲೆಗಳು ದೊರೆಯುತ್ತಿಲ್ಲ. ಕಾಮಗಾರಿ ಮಾಡಿದ ಗುತ್ತೆದಾರ ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ಪುರಸಭೆಗೆ
ದಾಖಲೆಗಳು ಸಲ್ಲಿಸುವ ಬದಲಿಗೆ ನೇರವಾಗಿ ಕೆಯುಐಡಿಎಫ್ಸಿ ಇಲಾಖೆಗೆ ದಾಖಲೆಗಳು ಸಲ್ಲಿಸಿರುವುದು ಅನೇಕ ಅನುಮಾನಕ್ಕೆ ಕಾರಣವಾಗಿದೆ. ಈ ಕುರಿತು
ಉನ್ನತ ತನಿಖೆ ನಡೆಸುವ ಅವಶ್ಯಕತೆ ಹೆಚ್ಚಿದೆ.
15-10-2019ರಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಎಂದು ಗುತ್ತೆದಾರ ಕೆಯುಐಡಿಎಫ್ಸಿ ಇಲಾಖೆಗೆ ಪೂರ್ಣ ದಾಖಲೆ ಸಲ್ಲಿಸಿದ್ದು, ಆ ದಾಖಲೆಗಳಲ್ಲಿ ಕಾಮಗಾರಿ ಪೂರ್ಣಗೊಂಡಿರುವ ಕುರಿತು ವಿವಿಧ ಚಿತ್ರಗಳು ಕೂಡ ಲಗತ್ತಿಸಲಾಗಿದೆ. ಗುತ್ತೆದಾರ ಹಾಗೂ ಪುರಸಭೆ ಮುಖ್ಯಾಧಿ ಕಾರಿಗಳು ಚಿತ್ರಗಳಲ್ಲಿ ಕಂಡು ಬರುತ್ತಿದ್ದು, ಆ ಚಿತ್ರಗಳು ಕಾಮಗಾರಿ ಪೂರ್ಣಗೊಂಡ ಸಂದರ್ಭದಲ್ಲಿ ತೆಗೆದ ಚಿತ್ರಗಳು ಅಲ್ಲ.
ಶಂಭುಲಿಂಗ ದೇಸಾಯಿ, ಪುರಸಭೆ ಮುಖ್ಯಾಧಿಕಾರಿ
ಯುಜಿಡಿ ಕಾಮಗಾರಿ ಕುರಿತು ಗುತ್ತೆದಾರರು ಪುರಸಭೆಗೆ ಯಾವುದೇ ದಾಖಲೆ ಸಲ್ಲಿಸಿಲ್ಲ. ಕೂಡಲೇ ಕಾಮಗಾರಿಗೆ ಸಂಬಂಧಿಸಿದ ಎಲ್ಲ ದಾಖಲೆ ಪತ್ರಗಳು ಸಲ್ಲಿಸುವಂತೆ ಸೂಚಿಸಲಾಗಿದೆ. ಮುಂದಿನ ಕೆಲ ದಿನಗಳಲ್ಲಿ ಖುದ್ದು ಬಂದು ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ. ಈವರೆಗೆ ಕಾಮಗಾರಿ ಹಸ್ತಾಂತರಿಸಿಕೊಂಡಿಲ್ಲ. ಕಾಮಗಾರಿ ಸಂದರ್ಭದಲ್ಲಿ ಭೇಟಿ ನೀಡಿದ ಸಮಯದಲ್ಲಿ ಗುತ್ತೆದಾರರು ವಿವಿಧ ಚಿತ್ರಗಳು ತೆಗೆದುಕೊಂಡಿದ್ದು, ಆ ಚಿತ್ರಗಳು ಬಳಸಿಕೊಂಡು ಕಾಮಗಾರಿ ಪೂರ್ಣಗೊಂಡಿದೆ ಎಂದು ದಾಖಲೆ ಸೃಷ್ಟಿಸಿಕೊಂಡಿದ್ದಾರೆ. ಕಾಮಗಾರಿ ಕುರಿತು ಪೂರ್ಣ ವಿವರ ನೀಡಿ ಹಾಗೂ ಶಾಸಕರ ಸಮುಖ್ಯದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಿದ ನಂತರ ಹಸ್ತಾಂತರ ಮಾಡಿಕೊಳ್ಳುವುದಾಗಿ ತಿಳಿಸಲಾಗಿದೆ.
ಮಲ್ಲಿಕಾರ್ಜುನ ಸೀಗಿ, ಪುರಸಭೆ ಮಾಜಿ ಉಪಾಧ್ಯಕ್ಷ
*ದುರ್ಯೋಧನ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ