ಆದಾನಿ ಕಂಪನಿಯಿಂದ ವಿದ್ಯುತ್ ಖರೀದಿ ನಿಲ್ಲಿಸಿ : ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಡಿಸಿಎಂ ಕಾರಜೋಳ ಎದುರೇ ಒತ್ತಾಯಿಸಿದ ಸಿದ್ದು! ಕಾರಜೋಳ ನಾನು ಜತೆಗೇ ಇದ್ದವರು | ಉತ್ತಮ ಬಾಂಧವ್ಯ ಇಂದಿಗೂ ಇದೆ

Team Udayavani, Feb 12, 2021, 6:52 PM IST

siddaramaiah

ಬಾಗಲಕೋಟೆ : ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದನೆಯಾಗುತ್ತಿದೆ. ಆದರೂ ಆದಾನಿ ಕಂಪನಿಯಿಂದ 1 ಸಾವಿರ ಮೇಗಾವ್ಯಾಟ್ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಇದನ್ನ ನಿಲ್ಲಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದರು.

ಬಾದಾಮಿಯಲ್ಲಿ ಸುಮಾರು 75 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿಪೂಜೆ ಕಾರ್ಯಕ್ರಮದಲ್ಲಿ ಡಿಸಿಎಂ ಕಾರಜೋಳ ಎದುರೇ ಸಿದ್ದರಾಮಯ್ಯನವರು ಸರ್ಕಾರಕ್ಕೆ ಈ ಒತ್ತಾಯ ಮಾಡಿದರು.

ರಾಜ್ಯಕ್ಕೆ 11 ಸಾವಿರ ಮೇಗಾವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಆದರೆ, ಈಗ ನಮ್ಮಲ್ಲಿ 30,098 ಮೇ.ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯವಿದೆ. ಆದರೂ ಆದಾನಿ ಕಂಪನಿಯಿಂದ 1030 ಮೆ.ವ್ಯಾಟ್ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸಿ ಎಂದು ನಾನು ಅಧಿಕಾರಿಗಳಿಗೆ ಹೇಳಿದ್ದೆ. ಆದರೆ, ಆದಾನಿ ಕಂಪನಿ ಜತೆಗೆ ವಿದ್ಯುತ್ ಖರೀದಿಗೆ 2024ರ ವರೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಆ ಬಳಿಕವಾದರೂ ವಿದ್ಯುತ್ ಖರೀದಿ ನಿಲ್ಲಿಸಬೇಕು ಎಂದರು.

14 ಸಾವಿರ ಮೆ.ವ್ಯಾಟ್ ಇತ್ತು :

ನಾನು 2013ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವಾಗ 118 ಮೆ.ವ್ಯಾಟ್ ಪವನ ಶಕ್ತಿ ವಿದ್ಯುತ್ ಉತ್ಪಾದನೆ ಇತ್ತು. ಅದರನ್ನು 5 ಸಾವಿರ ಮೆ.ವ್ಯಾಟ್‌ಗೆ ಏರಿಸಿದ್ದೆ. ಆಗ ಕೇವಲ 14 ಸಾವಿರ ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ನಮ್ಮ ರಾಜ್ಯದಲ್ಲಿ ಆಗುತ್ತಿತ್ತು. ಈಗ 30,098 ಮೆ.ವ್ಯಾಟ್‌ಗೆ ಏರಿಕೆಯಾಗಿದೆ. ನಮ್ಮ ರಾಜ್ಯಕ್ಕೆ 11 ಸಾವಿರ ಮೆ.ವ್ಯಾಟ್ ಮಾತ್ರ ವಿದ್ಯುತ್ ಬೇಡಿಕೆ ಇದೆ. ಉಳಿದ ವಿದ್ಯುತ್ ಬೇರೆ ಬೇರೆ ರಾಜ್ಯಕ್ಕೆ ಮಾರಾಟ ಮಾಡುವ ಶಕ್ತಿ-ಸಾಮರ್ಥ್ಯ ನಮ್ಮ ರಾಜ್ಯಕ್ಕಿದೆ. ಆದರೂ, ವಿವಿಧ ಮೂಲಗಳಿಂದ ವಿದ್ಯುತ್ ಖರೀದಿ ಮುಂದುವರೆದಿದೆ ಎಂದು ಹೇಳಿದರು.

ಉತ್ಪಾದನೆ ನಿಲ್ಲಿಸಿದ್ದೇಕೆ :

ನಮ್ಮ ರಾಜ್ಯದಲ್ಲಿ 30,098 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯವಿದ್ದು, ರಾಯಚೂರಿನ ಥರ್ಮಲ್ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿ, ಬೇರೆಡೆಯಿಂದ ಖರೀದಿ ಮಾಡಲಾಗುತ್ತಿದೆ. ರಾಯಚೂರಿನಲ್ಲಿ ಉತ್ಪಾದನೆ ನಿಲ್ಲಿಸಿದಂತೆ, ಬೇರೆ ಬೇರೆ ವಲಯದಲ್ಲೂ ಉತ್ಪಾದನೆ ನಿಲ್ಲಿಸಲಾಗಿದೆ. ಅದನ್ನು ಪುನಾರಂಭಿಸಿ, ವಿದ್ಯುತ್ ಖರೀದಿ ಸಂಪೂರ್ಣ ನಿಲ್ಲಿಸಬೇಕು ಎಂದರು.

ವಿದ್ಯುತ್ ದರ ಕಡಿಮೆ ಮಾಡಿ :

ಸದ್ಯ ರಾಜ್ಯದಲ್ಲಿ ಒಂದು ಯೂನಿಟ್ ವಿದ್ಯುತ್‌ಗೆ 8 ರೂ. ಆಗಿದೆ. ಇದರಿಂದ ಜನರಿಗೆ ಹೊರೆಯಾಗುತ್ತದೆ. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಯಾದರೂ ದರ ಏಕೆ ಹೆಚ್ಚಿಸಿದ್ದೀರಿ. ದರ ಕಡಿಮೆ ಮಾಡಿ. ರೈತರಿಗೆ ಈಗ ಕೊಡುವ ವಿದ್ಯುತ್‌ನಲ್ಲಿ 2 ಗಂಟೆ ಹೆಚ್ಚಿಸಿ. ಅವರು ಈ ದೇಶಕ್ಕೆ ಆಹಾರ ಉತ್ಪಾದನೆ ಮಾಡಿಕೊಡುತ್ತಾರೆ. ಆಹಾರ ಉತ್ಪಾದನೆ ಹೆಚ್ಚಳವಾದಾಗ ಮಾತ್ರ ದೇಶದ ಆರ್ಥಿಕ ವ್ಯವಸ್ಥೆ ಹೆಚ್ಚುತ್ತದೆ ಎಂದು ಹೇಳಿದರು.

ಕಾರಜೋಳ-ನಾನು ಜತೆಗೇ ಇದ್ದವರು : ಉತ್ತಮ ಬಾಂಧವ್ಯ ಇದೆ

ಡಿಸಿಎಂ ಗೋವಿಂದ ಕಾರಜೋಳ ಎಲ್ಲ ಸಚಿವರಂತೆ ಅಲ್ಲ. ಅವರು, ನಾನು ಜನತಾದಳದಲ್ಲಿ ಒಟ್ಟಿಗೇ ಇದ್ದವರು. ಹೀಗಾಗಿ ಅವರೊಂದಿಗೆ ನನಗೆ ಉತ್ತಮ ಬಾಂಧವ್ಯ ಇಂದಿಗೂ ಇದೆ. ನನ್ನ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಕೊಟ್ಟಿದ್ದಾರೆ. ಅವರಿಗೆ ವಿಶೇಷ ಧನ್ಯವಾದಗಳು. ಮಾರ್ಚ್ ಒಳಗೆ ಇನ್ನಷ್ಟು ಅನುದಾನ ಕೊಡಬೇಕು. ಬಾಗಲಕೋಟೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಿಸಬೇಕು ಎಂದು ಸಿದ್ದರಾಮಯ್ಯ, ವೇದಿಕೆಯಲ್ಲಿದ್ದ ಕಾರಜೋಳಗೆ ಮನವಿ ಮಾಡಿದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.