ಎರಡನೇ ಟೆಸ್ಟ್: ಮಹತ್ವದ ಟಾಸ್ ಗೆದ್ದ ವಿರಾಟ್, ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ


Team Udayavani, Feb 13, 2021, 8:58 AM IST

IndvsEng second test at chennai

ಚೆನ್ನೈ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಚೆನ್ನೈ ಸಜ್ಜಾಗಿದೆ. ಎಂ. ಚಿದಂಬರಂ ಸ್ಟೇಡಿಯಂ ನಲ್ಲಿ ಉಭಯ ತಂಡಗಳು ಸರಣಿಯ ಎರಡನೇ ಪಂದ್ಯವಾಡುತ್ತಿದೆ. ಇಂಗ್ಲೆಂಡ್ ತಂಡ ಮೊದಲ ಪಂದ್ಯ ಗೆದ್ದ ಹುಮ್ಮಸ್ಸಿನಲ್ಲಿದ್ದರೆ, ಟೀಂ ಇಂಡಿಯಾ ತಿರುಗೇಟು ನೀಡಲು ಕಾಯುತ್ತಿದೆ.

ಚಿಪಾಕ್ ಅಂಗಳದಲ್ಲಿ ಟಾಸ್ ಗೆದ್ದ ವಿರಾಟ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ ನಾಲ್ಕು ಬದಲಾವಣೆಯಾಗಿದ್ದು, ಟೀಂ ಇಂಡಿಯಾದಲ್ಲೂ ಬದಲವಾಣೆ ಮಾಡಲಾಗಿದೆ. ಭಾರತದ ಪರ ಅಕ್ಷರ್ ಪಟೇಲ್ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರೆ, ಬಹಳ ಸಮಯದ ಬಳಿಕ ಕುಲದೀಪ್ ಯಾದವ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ವೇಗಿ ಮೊಹಮದ್ ಸಿರಾಜ್ ಇಂದು ಇಶಾಂತ್ ಗೆ ಸಾಥ್ ನೀಡಲಿದ್ದಾರೆ. ವೇಗಿ ಬುಮ್ರಾಗೆ ವಿಶ್ರಾಂತಿ ನೀಡಲಾಗದೆ. ನದೀಂ ಮತ್ತು ವಾಷಿಂಗ್ಟನ್ ಸುಂದರ್ ಕೈಬಿಡಲಾಗಿದೆ.

ಇದನ್ನೂ ಓದಿ:ಐಪಿಎಲ್‌ ಹರಾಜು; 292 ಕ್ರಿಕೆಟಿಗರಿಗೆ ಸೀಮಿತ

ಪ್ರೇಕ್ಷಕರಿಗೆ ಅವಕಾಶ: ಇಂದಿನ ಪಂದ್ಯದಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಚೆನ್ನೈನಲ್ಲೇ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಯಾವುದೇ ಪ್ರೇಕ್ಷಕರಿಗೆ ಅವಕಾಶ ನೀಡಿರಲಿಲ್ಲ.

ಇಂಗ್ಲೆಂಡ್‌ ತಂಡದಲ್ಲಿ 4 ಬದಲಾವಣೆ: ಸಾಮಾನ್ಯವಾಗಿ ಗೆಲುವಿನ ತಂಡವನ್ನು ಬದಲಿಸದೇ ಇರುವುದು ಕ್ರಿಕೆಟ್‌ ಸಂಪ್ರದಾಯ. ಆದರೆ 227 ರನ್‌ ಜಯಭೇರಿ ಮೊಳಗಿಸಿದ ಇಂಗ್ಲೆಂಡ್‌ ದ್ವಿತೀಯ ಟೆಸ್ಟ್‌ ಪಂದ್ಯಕ್ಕೆ ಒಂದಲ್ಲ, ಎರಡಲ್ಲ, ಬರೋಬ್ಬರಿ 4 ಬದಲಾವಣೆಗಳನ್ನು ಮಾಡಿದೆ! ಕಳೆದ ಪಂದ್ಯದ ಬೌಲಿಂಗ್‌ ಹೀರೋಗಳಾದ ಜೇಮ್ಸ್‌ ಆ್ಯಂಡರ್ಸನ್‌, ಜೋಫ್ರಾ ಆರ್ಚರ್‌, ಡಾಮಿನಿಕ್‌ ಬೆಸ್‌ ಅವರನ್ನು ಇಂಗ್ಲೆಂಡ್‌ ಕೈಬಿಟ್ಟಿದೆ. ವಿಕೆಟ್‌ ಕೀಪರ್‌ ಜಾಸ್‌ ಬಟ್ಲರ್‌ ತವರಿಗೆ ಮರಳಿದ್ದಾರೆ.

ಇವರಲ್ಲಿ ಆ್ಯಂಡರ್ಸನ್‌ ಮತ್ತು ಬೆಸ್‌ ಅವರನ್ನು ರೊಟೇಶನ್‌ ಪದ್ಧತಿ ಹಾಗೂ ಹೆಚ್ಚಿನ ಒತ್ತಡದಿಂದ ಮುಕ್ತಗೊಳಿಸುವ ಸಲುವಾಗಿ ಹೊರಗಿಡಲಾಗಿದೆ. ಇವರ ಬದಲು ಸ್ಟುವರ್ಟ್‌ ಬ್ರಾಡ್‌ ಮತ್ತು ಮೊಯಿನ್‌ ಅಲಿ ಅವರನ್ನು ಸೇರಿಸಿ ಕೊಳ್ಳಲಾಗಿದೆ. ವೇಗಿ ಆರ್ಚರ್‌ ಗಾಯಾಳಾದ ಕಾರಣ ತಂಡದಿಂದ ಬೇರ್ಪಟ್ಟಿದ್ದಾರೆ. ಇವರ ಸ್ಥಾನಕ್ಕೆ ಆಲ್‌ರೌಂಡರ್‌ ಕ್ರಿಸ್‌ ವೋಕ್ಸ್‌ ವೇಗಿ ಓಲೀ ಸ್ಟೋನ್‌ ಆಯ್ಕೆಯಾಗಿದ್ದಾರೆ. ಬಟ್ಲರ್‌ ಬದಲು ಬೆನ್‌ ಫೋಕ್ಸ್‌ ವಿಕೆಟ್‌ ಕೀಪಿಂಗ್‌ ನಡೆಸಲಿದ್ದಾರೆ.

ತಂಡಗಳು

ಭಾರತ: ರೋಹಿತ್‌ ಶರ್ಮ, ಶುಭಮನ್‌ ಗಿಲ್‌, ಚೇತೇಶ್ವರ್‌ ಪೂಜಾರ, ವಿರಾಟ್‌ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್‌ ಪಂತ್‌, ಆರ್‌. ಅಶ್ವಿ‌ನ್‌, ಅಕ್ಷರ್‌ ಪಟೇಲ್‌, ಕುಲದೀಪ್‌ ಯಾದವ್‌, ಇಶಾಂತ್‌ ಶರ್ಮ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್‌: ಡೊಮಿನಿಕ್‌ ಸಿಬ್ಲಿ, ರೋರಿ ಬರ್ನ್ಸ್, ಡೇನಿಯಲ್‌ ಲಾರೆನ್ಸ್‌, ಜೋ ರೂಟ್‌ (ನಾಯಕ), ಓಲೀ ಪೋಪ್‌, ಸ್ಟೋಕ್ಸ್‌, ಬೆನ್‌ ಫೋಕ್ಸ್‌, ಮೊಯಿನ್‌ ಅಲಿ, ಸ್ಟುವರ್ಟ್‌ ಬ್ರಾಡ್‌, ಓಲೀ ಸ್ಟೋನ್‌, ಜಾಕ್‌ ಲೀಚ್

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.