ಅಂತರ್ಜಲ ಅತಿ ಬಳಕೆ: ಗುಂಡ್ಲುಪೇಟೆ ತಾಲೂಕು ಸೇರ್ಪಡೆ


Team Udayavani, Feb 13, 2021, 3:03 PM IST

ಅಂತರ್ಜಲ ಅತಿ ಬಳಕೆ: ಗುಂಡ್ಲುಪೇಟೆ ತಾಲೂಕು ಸೇರ್ಪಡೆ

ಚಾಮರಾಜನಗರ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಅಟಲ್‌ ಭೂ ಜಲ ಯೋಜನೆ ಹಾಗೂ ಜಿಪಂ ವತಿಯಿಂದ ಜಿಲ್ಲೆಯಲ್ಲಿ ಅಟಲ್‌ ಭೂ ಜಲ ಯೋಜನೆಯ ಕಾಮಗಾರಿ ಅನುಷ್ಠಾನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಜಿಲ್ಲೆ ಸೇರಿ ರಾಜ್ಯದ ಒಟ್ಟು 8 ಜಿಲ್ಲೆಗಳಲ್ಲಿ ಅನುಷ್ಠಾನ ಮಾಡಲಾಗುತ್ತಿರುವ ಅಟಲ್‌ ಭೂ ಜಲ ಯೋಜನೆಗೆ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತುಮ ಕೂರಿ ನಿಂದ ವಿಡಿಯೋ ಕಾನ್ಫರೆನ್ಸ್‌ (ವರ್ಚುವಲ್‌) ಮೂಲಕ ಚಾಲನೆ ನೀಡಿದರು.

ಗುಂಡ್ಲುಪೇಟೆಯ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಸ್ಥಳೀಯವಾಗಿ ಅಟಲ್‌ ಭೂ ಜಲ ಯೋಜನೆ ಕಾಮಗಾರಿ ಅನುಷ್ಠಾನ ಸಮಾರಂಭ ನಡೆಯಿತು. ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್‌. ನಿರಂಜನ್‌ ಕುಮಾರ್‌ ಉದ್ಘಾಟಿಸಿದರು. ಸಣ್ಣ ನೀರಾವರಿಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹೊರತಂದಿರುವ ಅಂತರ್ಜಲ ಕುರಿತ ಕೈಪಿಡಿಯನ್ನು ಶಾಸಕರು ಬಿಡುಗಡೆಮಾಡಿದರು. ಇದೇ ವೇಳೆ ಯೋಜನೆ ಅನುಷ್ಠಾನದ ಉದ್ಘಾಟನಾ ಭಾಗ ವಾಗಿ ನಡೆದ ಹಂಗಳ ಹೋಬಳಿಯ ಹುಂಡಿಪುರದಲ್ಲಿ ಅಧ್ಯಯನ ಕೊಳವೆಬಾವಿ ಕೊರೆಯುವ ಪ್ರಕ್ರಿಯೆಯನ್ನು ವರ್ಚುವಲ್‌ ಮೂಲಕ ವೀಕ್ಷಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸಿ.ಎಸ್‌. ನಿರಂಜನ್‌ ಕುಮಾರ್‌, ಅಂತರ್ಜಲ ಅತೀಬಳಕೆಯಲ್ಲಿ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಸೇರ್ಪಡೆಯಾಗಿದೆ. ಹೀಗಾಗಿ ಎಚ್ಚೆತ್ತುಕೊಂಡು ಅಂತರ್ಜಲ ನಿರ್ವಹಣೆ, ಸಮರ್ಪಕ ನೀರಿನ ಬಳಕೆಗಾಗಿ ಉತ್ತಮ ಕ್ರಮಗಳನ್ನು ಅಳವಡಿಸಿಕೊಳ್ಳಲು ಅಟಲ್‌ ಭೂ ಜಲ ಯೋಜನೆ ಜಾರಿಯಾಗುತ್ತಿದೆ. ಈ ಯೋಜನೆಯಡಿ ವಿವಿಧ ಗ್ರಾಪಂಗಳಲ್ಲಿ ಅಧ್ಯಯನ ಕೊಳವೆ ಬಾವಿ ಕೊರೆಯಲಾಗುತ್ತದೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯೊಂದಿಗೆ ಇತರೆ ಇಲಾಖೆಗಳೂ ಯೋಜನೆ ಯಶಸ್ವಿಗೊಳಿಸಬೇಕು ಎಂದರು. ಜಿಪಂ ಅಧ್ಯಕ್ಷೆ ಎಂ.ಅಶ್ವಿ‌ನಿ ಮಾತನಾಡಿ, ಅಂತರ್ಜಲ ಹೆಚ್ಚಳಕ್ಕೆ ಮುಂದಾಗಬೇಕಿದ್ದು ತಾಲೂಕಿನಯೋಜನೆ ಸದ್ಬಳಕೆ ಆಗಬೇಕೆಂದರು.

ಪರಿಸರ ರಕ್ಷಿಸಿ: ಜಿಪಂ ಉಪಾಧ್ಯಕ್ಷೆ ಶಶಿಕಲಾ ಮಾತನಾಡಿ, ಈ ಹಿಂದೆ ಪ್ರತಿ ಊರಿನಲ್ಲಿ ಕೆರೆ ಇನ್ನಿತರ ನೀರಿನ ಸಂಪನ್ಮೂಲ ಲಭ್ಯ ವಿತ್ತು. ಆದರೆ, ಇಂದು ಪ್ಲಾಸ್ಟಿಕ್‌ ಬಳಕೆ ಹೆಚ್ಚಿದ್ದು ಅನೇಕ ತೊಂದರೆ ಅನುಭವಿಸುವಂತಾಗಿದೆ. ಅಭಿವೃದ್ಧಿ ಕಾಮಗಾರಿ ನೆಪದಲ್ಲಿ ಮರ ಗಿಡಗಳನ್ನು ಕಡಿಯುವುದು ನಿಲ್ಲಬೇಕಿದೆ ಎಂದು ಅಭಿಪ್ರಾಯಪಟ್ಟರು. ಜಿಪಂ ಸದಸ್ಯ ಬಿ.ಕೆ.ಬೊಮ್ಮಯ್ಯ, ಗುಂಡ್ಲುಪೇಟೆ ತಾಪಂ ಅಧ್ಯಕ್ಷ ಎಸ್‌.ಎಸ್‌.ಮಧುಶಂಕರ್‌, ಪುರಸಭಾ ಅಧ್ಯಕ್ಷ ಗಿರೀಶ್‌, ಹುಂಡಿಪುರ ಗ್ರಾಪಂ ಅಧ್ಯಕ್ಷೆ ಬಿ.ಕೆ.ಲಕ್ಷಿ ¾, ಮೈಸೂರಿನ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವೃತ್ತದ ಅಧೀಕ್ಷಕ ಎಂಜಿನಿಯರ್‌ ರಾಜಶೇಖರ್‌ ಕೆ. ಯಡಹಳ್ಳಿ, ಕಾರ್ಯ ಪಾಲಕ ಎಂಜಿನಿಯರ್‌ ಕೆ.ಆರ್‌.ಮೋಹನ್‌, ಜಿಲ್ಲಾ ಅಟಲ್‌ ಭೂ ಜಲ ಯೋಜನೆ ನೋಡಲ್‌ ಅಧಿಕಾರಿ ಎ. ಎಸ್‌.ಭಾಸ್ಕರ್‌, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಡಾ.ಲಕ್ಷ್ಮಮ್ಮ, ಜಿಲ್ಲಾ ಅಂತರ್ಜಲ ಇಲಾಖೆಯ ಹಿರಿಯ ಭೂ ವಿಜ್ಞಾನಿ ಡಾ.ಪ್ರಸನ್ನ ಕುಮಾರ್‌ ಮತ್ತಿತರರಿದ್ದರು.

ಪ್ರಧಾನ ಮಂತ್ರಿಯವರು ಅಟಲ್‌ ಭೂ ಜಲ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ. ಅಂತರ್ಜಲ ಸುಸ್ಥಿರ ನಿರ್ವಹಣೆಯ ಪ್ರಮುಖ ಅಂಶಗಳಾದ ಸಮುದಾಯ ಪಾಲ್ಗೊಳ್ಳುವಿಕೆ, ನೆರವು ಸರಬರಾಜು ನಿರ್ವಹಣೆ ಅತಿಮುಖ್ಯ. ಮಳೆ ನೀರು ಇಂಗಿಸುವ ಕಾರ್ಯ ಆಗಬೇಕಿದೆ. ಅಂತರ್ಜಲ ಸಂಪನ್ಮೂಲ ಅಭಿವೃದ್ಧಿಗೊಳಿಸುವ ಗುರಿ ಹೊಂದಲಾಗಿದ್ದು ಉತ್ತಮ ಫ‌ಲಿತಾಂಶದೊಂದಿಗೆ ಯೋಜನೆ ಸಾಕಾರವಾಗಲಿದೆ.-ನಿರಂಜನ್‌ಕುಮಾರ್‌, ಶಾಸಕ

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.