ಇಂಗ್ಲೆಂಡ್ ವಿರುದ್ಧ ಭರ್ಜರಿ ಶತಕ ಬಾರಿಸಿ ಹಲವು ದಾಖಲೆ ಬರೆದ ರೋಹಿತ್ ಶರ್ಮ


Team Udayavani, Feb 13, 2021, 3:34 PM IST

ಇಂಗ್ಲೆಂಡ್ ವಿರುದ್ಧ ಭರ್ಜರಿ ಶತಕ ಬಾರಿಸಿ ಹಲವು ದಾಖಲೆ ಮುರಿದ ರೋಹಿತ್ ಶರ್ಮ

ಚೆನ್ನೈ: ಕಳೆದ ಕೆಲ ಟೆಸ್ಟ್ ಪಂದ್ಯಗಳಲ್ಲಿ ಲಯ ಕಂಡುಕೊಳ್ಳಲು ವಿಫಲವಾಗಿದ್ದ ಆರಂಭಿಕ ಆಟಗಾರ ರೋಹಿತ್ ಶರ್ಮ ಚೆನ್ನೈನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದ್ದಾರೆ. ಇದೇ ವೇಳೆ ಹಿಟ್ ಮ್ಯಾನ್ ರೋಹಿತ್ ಹಲವು ದಾಖಲೆಗಳನ್ನು ಪುಡಿಗಟ್ಟಿದ್ದಾರೆ.

ರೋಹಿತ್ ಶರ್ಮ ಇಂಗ್ಲೆಂಡ್ ವಿರುದ್ಧ ಮೂರು ಮಾದರಿ ಕ್ರಿಕೆಟ್ (ಟೆಸ್ಟ್, ಟಿ20, ಏಕದಿನ) ನಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದರು. ಒಟ್ಟು ನಾಲ್ಕು ಎದುರಾಳಿ ದೇಶಗಳ ವಿರುದ್ಧ ರೋಹಿತ್ ಈ ಸಾಧನೆ ಮಾಡಿದ್ದಾರೆ. ( ಶ್ರೀಲಂಕಾ, ವೆಸ್ಟ್ ಇಂಡೀಸ್, ದ.ಆಫ್ರಿಕಾ ಮತ್ತು ಇಂಗ್ಲೆಂಡ್) ಈ ದಾಖಲೆ ಮಾಡಿದ ಏಕೈಕ ಆಟಗಾರ ರೋಹಿತ್.

ಇದನ್ನೂ ಓದಿ:ಕುಸಿದ ಟೀಂ ಇಂಡಿಯಾಗೆ ನೆರವಾದ ರೋಹಿತ್: ಚೆಪಾಕ್ ನಲ್ಲಿ ಹಿಟ್ ಮ್ಯಾನ್ ಭರ್ಜರಿ ಶತಕ

ರೋಹಿತ್ ಇಂದು ಟೆಸ್ಟ್ ಕ್ರಿಕೆಟ್ ನ ಏಳನೇ ಶತಕ ಬಾರಿಸಿದರು. ಎಲ್ಲಾ ಏಳು ಶತಕಗಳು ಭಾರತದಲ್ಲೇ ಬಂದಿವೆ. ಈ ದಾಖಲೆ ಬರೆದ ಮೊದಲ ಭಾರತೀಯ ರೋಹಿತ್.

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ರೋಹಿತ್ ಎರಡನೇ ಸ್ಥಾನಕ್ಕೇರಿದರು. 13 ಇನ್ನಿಂಗ್ಸ್ ನಲ್ಲಿ ರೋಹಿತ್ ನಾಲ್ಕು ಶತಕ ಬಾರಿಸಿದರೆ, ಮೊದಲ ಸ್ಥಾನದಲ್ಲಿರುವ ಆಸೀಸ್ ನ ಮಾರ್ನಸ್ ಲಬುಶೇನ್ 23 ಇನ್ನಿಂಗ್ಸ್ ನಲ್ಲಿ ಐದು ಶತಕ ಬಾರಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಶತಕ ಗಳಿಸಿದ ಭಾರತೀಯ ಆರಂಭಿಕ ಆಟಗಾರರ ಪಟ್ಟಿಯಲ್ಲಿ ರೋಹಿತ್ ಮೂರನೇ ಸ್ಥಾನಕ್ಕೇರಿದರು. ರೋಹಿತ್ ಇಂದು ಆರಂಭಿಕ ಆಟಗಾರನಾಗಿ 35 ನೇ ಅಂತಾರಾಷ್ಟ್ರೀಯ ಶತಕ ಗಳಿಸಿದರು. 45 ಶತಕ ಸಿಡಿಸಿರುವ ಸಚಿನ್ ಮೊದಲ ಸ್ಥಾನದಲ್ಲಿದ್ದರೆ, 36 ಶತಕಗಳೊಂದಿಗೆ ಸೆಹವಾಗ್ ಎರಡನೇ ಸ್ಥಾನದಲ್ಲಿದ್ದಾರೆ.

ದ್ವಿತೀಯ ಟೆಸ್ಟ್ ನ ಮೊದಲ ದಿನದಾಟದಲ್ಲಿ 70 ಓವರ್ ಅಂತ್ಯಕ್ಕೆ ಭಾರತ ತಂಡ ಮೂರು ವಿಕೆಟ್ ನಷ್ಟಕ್ಕೆ 233 ರನ್ ಗಳಿಸಿದೆ. ರೋಹಿತ್ ಶರ್ಮಾ ಅಜೇಯ 153 ರನ್ ಗಳಿಸಿದರೆ, ಉಪನಾಯಕ ಅಜಿಂಕ್ಯ ರಹಾನೆ 59 ರನ್ ಗಳಿಸಿ ಆಡುತ್ತಿದ್ದಾರೆ.

ಟಾಪ್ ನ್ಯೂಸ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.