19 ಲಕ್ಷ ರೂ. ವಿವೇಚನಾ ನಿಧಿ ಬಳಕೆಗೆ ಒಪ್ಪಿಗೆ

ಜಿಲ್ಲಾ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಸದಸ್ಯರಿಂದ ಸರ್ವಾನುಮತದ ಅನುಮತಿ

Team Udayavani, Feb 13, 2021, 4:11 PM IST

ZP CEO puvika

ಚಿಕ್ಕಮಗಳೂರು: ಜಿಪಂಗೆ ಸರ್ಕಾರ ಬಿಡುಗಡೆ ಮಾಡಿರುವ 19 ಲಕ್ಷ ರೂ. ಹಣ ಜಿಪಂ ಉಪಾಧ್ಯಕ್ಷರ ವಿವೇಚನಾ ನಿಧಿ ಬಳಕೆಗೆ ಜಿಪಂ ಸರ್ವಸದಸ್ಯರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು.

ಶುಕ್ರವಾರ ನಗರದ ಜಿಪಂ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸಭೆಯ ಪ್ರಾರಂಭದಲ್ಲಿ ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಜಿಪಂಗೆ ಸರ್ಕಾರ 19 ಲಕ್ಷ ರೂ. ನೀಡಿದ್ದು ಸರ್ಕಾರ ಯಾವುದೇ ಮಾರ್ಗಸೂಚಿ ನೀಡಿಲ್ಲವೆಂದು ತಿಳಿಸಿದರು.

19ಲಕ್ಷ ರೂ. ಹಣ ಕೆ-2ರಡಿಯಲ್ಲಿ ಬಿಡುಗಡೆಯಾಗಿದ್ದು, ಹಣ ಬಳಕೆಯ ಬಗ್ಗೆ ಸರ್ಕಾರ ಯಾವುದೇ  ಮಾರ್ಗಸೂಚಿ ನೀಡಿಲ್ಲವೆಂದು ಜಿಪಂ ಸಿಇಒ ಎಸ್‌.ಪೂವಿತಾ ಹೇಳಿದರು.

ಜಿಪಂ ಉಪಾಧ್ಯಕ್ಷ ಸೋಮಶೇಖರ್‌ ಮಾತನಾಡಿ, ಜಿಪಂ ಉಪಾಧ್ಯಕ್ಷರಿಗೆ ಅವರ ವಿವೇಚನೆಗೆ ಇದುವರೆಗೂ  ಹಣ ನೀಡಲಾಗಿದೆ. ನನ್ನ ಅವ ಧಿಯಲ್ಲಿ ಯಾವುದೇ ಹಣ ನೀಡಿಲ್ಲ. ಈಗಾಗಲೇ ಕ್ರಿಯಾಯೋಜನೆ ನೀಡಿದ್ದು ಹಣಬಳಕೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ಜಿಪಂ ಸದಸ್ಯ ಸದಾಶಿವ ಪಿ.ರಾಘವನ್‌ ಮಾತನಾಡಿ, ಹಣವನ್ನು ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಸಮಾನವಾಗಿ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು. ಉಪಾಧ್ಯಕ್ಷರ ವಿವೇಚನೆಗೆ ನೀಡಲು ಜಿಪಂ ಸದಸ್ಯರಾದ ಆನಂದಪ್ಪ, ಮಹೇಶ್‌ ಒಡೆಯರ್‌ ಸಮ್ಮತಿ ಸೂಚಿಸಿದರು.

ಜಿಪಂ ಸದಸ್ಯ ಶರತ್‌ ಕೃಷ್ಣಮೂರ್ತಿ ಮಾತನಾಡಿ, ಎಲ್ಲಾ ತಾಲೂಕುಗಳಿಗೆ ಹಣ ಹಂಚಿಕೆ ಮಾಡಿದರೆ 50 ಸಾವಿರ ಬರುತ್ತದೆ. ಈ ಹಣದಿಂದ ಏನೂ ಮಾಡಲು ಸಾಧ್ಯವಿಲ್ಲ. ಈ ಹಣದ ವಿನಿಯೋಗ ಅಧ್ಯಕ್ಷರ ವಿವೇಚನೆಗೆ ನೀಡಬೇಕು ಒತ್ತಾಯಿಸಿದರು.

ಹಣ ಬಳಕೆ ಉಪಾಧ್ಯಕ್ಷರ ವಿವೇಚನೆಗೆ ಒಳಪಡಿಸಲು ಕೆಲವರು ಸಮ್ಮತಿಸಿದರೆ ಹಣಬಳಕೆ ವಿಷಯವನ್ನು ಮತಕ್ಕೆ ಹಾಕುವಂತೆ ತಿಳಿಸಿದರು. ತುರ್ತು ಕೆಲಸಗಳಿದ್ದಲ್ಲಿ ಅಂತಹ ಸದಸ್ಯರು ಮನವಿ ಮಾಡಿದರೆ ಹಣ ನೀಡುವುದಾಗಿ ಉಪಾಧ್ಯಕ್ಷ ಸೋಮಶೇಖರ್‌ ಭರವಸೆ ನೀಡಿದರು.

ಸದಸ್ಯ ಬೆಳವಾಡಿ ರವೀಂದ್ರ ಮಾತನಾಡಿ, ಲಕ್ಯಾ ಹೋಬಳಿ ಅನೇಕ ವರ್ಷಗಳಿಂದ ಬರಕ್ಕೆ ಸಿಲುಕಿದೆ. ಇದು ಹೋಬಳಿ ಕೇಂದ್ರವಾದರೂ ನಾಡಕಚೇರಿ ಇಲ್ಲ, ಪಶು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲ. ಹೆಚ್ಚಿನ ಜನಸಂಖ್ಯೆ ಹೊಂದಿದ್ದರೂ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಖರಾಯಪಟ್ಟಣ, ಲಕ್ಯಾ ಕೆಲವು ಪ್ರದೇಶಗಳನ್ನು ಸೇರಿಸಿ ಹೊಸ ತಾಲೂಕು ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.

ಸಮಯಕ್ಕೆ ಸರಿಯಾಗಿ ಕಡತಗಳು ಜಿಲ್ಲಾ ಖಜಾನೆಗೆ ಹೋದರೂ ನಿಗದಿತ ಸಮಯಕ್ಕೆ ಹಣ ಬಿಡುಗಡೆಯಾಗುತ್ತಿಲ್ಲ. ಈ ಸಂಬಂಧ ಅಧಿ ಕಾರಿಗಳನ್ನು ಕೇಳಿದರೆ ಸರಿಯಾಗಿ ಸ್ಪಂದಿ ಸುತ್ತಿಲ್ಲ. ಕಡತಗಳ ಹಣವನ್ನು ಜಿಲ್ಲಾ ಖಜಾನೆ ಇನ್ನೂ ಬಿಡುಗಡೆಗೊಳಿಸಿಲ್ಲವೆಂದು ಜಿಪಂ ಸಿಒಇ ಎಸ್‌. ಪೂವಿತಾ ಸಭೆಗೆ ತಿಳಿಸಿದರು. ಜಿಪಂ 30:54 ಯೋಜನೆಯಡಿಯ 4.86 ಕೋಟಿ ರೂ. ಮತ್ತು ಅಂಗವಿಕಲರಿಗೆ ಮೀಸಲಿಟ್ಟಿರುವ ಉಳಿಕೆ ಹಣ 11.80 ಲಕ್ಷ ರೂ.ಗಳನ್ನು ಆಶಾಕಿರಣ ಅಂಧಮಕ್ಕಳ ಶಾಲೆಗೆ ಕಾಂಪೌಂಡ್‌ ನಿರ್ಮಾಣಕ್ಕೆ ಉಪಯೋಗಿಸಲು ಸರ್ವಸದಸ್ಯರು ಸಭೆಯಲ್ಲಿ ಒಪ್ಪಿಗೆ ನೀಡಿದರು. ಹಡಗಲು ಗ್ರಾಮಕ್ಕೆ ಶುದ್ಧಗಂಗಾ ಘಟಕ ಮಂಜೂರು ಮಾಡಿಕೊಂಡುವಂತೆ ಅ ಧಿಕಾರಿಗಳಿಗೆ ಪತ್ರ ಬರೆದು ಇಂಕು ಖಾಲಿಯಾಯ್ತೆ ಹೊರತು ಸಮಸ್ಯೆ ಪರಿಹಾರವಾಗಿಲ್ಲ ಎಂದು ಚೌಳಿಹಿರಿಯೂರು ಕ್ಷೇತ್ರದ ಸದಸ್ಯೆ ವನಮಾಲಾ ದೇವರಾಜ್‌ ತಿಳಿಸಿದರು.

5 ಶುದ್ಧಗಂಗಾ ಘಟಕವನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದು, ಅದರಲ್ಲಿ 4 ಮಂಜೂರಾಯ್ತು, 1 ಬೇರೆ ಕಡೆ ಹೋಯ್ತು, ಜನರು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ಕೂಡಲೇ ಶುದ್ಧಗಂಗಾ ಘಟಕ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ:ಅಪರಿಚಿತ ವಾಹನ ಡಿಕ್ಕಿ : ಚಿರತೆ ಸಾವು

ಸಿಇಒ ಎಸ್‌. ಪೂವಿತಾ ಮಾತನಾಡಿ, ಬೇರೆ ಊರುಗಳಿಗೆ ಅನವಶ್ಯಕವಾಗಿರುವ ಘಟಕವನ್ನು ಹಡಗಲು  ಗ್ರಾಮಕ್ಕೆ ವಾರದೊಳಗೆ ಸ್ಥಳಾಂತರಿಸಲಾಗುವುದು ಎಂದರು.

ವನಮಾಲಾ ದೇವರಾಜ್‌ ಮಾತನಾಡಿ, ಈ ತಿಂಗಳ ಅಂತ್ಯದವರೆಗೂ ಕಾಯುವೆ. ಸ್ಥಳಾಂತರವಾಗದಿದ್ದರೆ ಗ್ರಾಮಸ್ಥರೊಂದಿಗೆ ಆಗಮಿಸಿ ಜಿಪಂ ಕಚೇರಿ ಎದುರು ಧರಣಿ ನಡೆಸುವುದಾಗಿ ಎಚ್ಚರಿಸಿದರು.

ಸಭೆಯಲ್ಲಿ ತರೀಕೆರೆ ಕ್ಷೇತ್ರದ ಶಾಸಕ ಡಿ.ಎಸ್‌. ಸುರೇಶ್‌, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಶಶಿಕಲಾ ಅವಿನಾಶ್‌, ಸುಧಾ ಯೋಗೀಶ್‌, ಮಹೇಂದ್ರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

1-wewewqe

Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

Good rain continues Chikkamagaluru

Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆಗಳು.. ವಾಹನ ಸವಾರರ ಪರದಾಟ

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆ… ಜೀವ ಭಯದಲ್ಲಿ ಸವಾರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.