ಶೌಚಗೃಹ ನಿರ್ಮಾಣ ವಿಳಂಬ ಖಂಡಿಸಿ ಸಭೆಯಲ್ಲೇ ಧರಣಿ

ಶಿಥಿಲಗೊಂಡ ವಿದ್ಯಾರ್ಥಿ ನಿಲಯಗಳ ಪಟ್ಟಿ ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸತೀಶ್‌ಗೆ ಅಧ್ಯಕ್ಷೆ ಸೂಚಿಸಿದರು

Team Udayavani, Feb 13, 2021, 4:48 PM IST

ಶೌಚಗೃಹ ನಿರ್ಮಾಣ ವಿಳಂಬ ಖಂಡಿಸಿ ಸಭೆಯಲ್ಲೇ ಧರಣಿ

ರಾಯಚೂರು: ಅನುದಾನ ಬಿಡುಗಡೆಯಾಗಿ ನಾಲ್ಕು ವರ್ಷ ಕಳೆದರೂ ಅಂಗನವಾಡಿ ಕೇಂದ್ರಗಳಲ್ಲಿ ಶೌಚಗೃಹ ನಿರ್ಮಿಸದ ಕಾಶ್ಯುಟೆಕ್‌ ಸೇರಿದಂತೆ ವಿವಿಧ ಏಜೆನ್ಸಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಥಾಯಿ ಸಮಿತಿಗಳ ಅಧ್ಯಕ್ಷರಿಬ್ಬರು ಜಿಪಂ ಸಭೆಯಲ್ಲೇ ಆಕ್ರೋಶ ವ್ಯಕ್ತಪಡಿಸಿದರು. ಜಿಪಂ ಸಭಾಂಗಣದಲ್ಲಿ ಶುಕ್ರವಾರ ಮಾಸಿಕ ಕೆಡಿಪಿ ಸಭೆಯಲ್ಲಿ ಆರಂಭದಲ್ಲೇ ಈ ಸಮಸ್ಯೆ ಪ್ರಸ್ತಾಪಿಸಿದ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎನ್‌. ಕೇಶವರೆಡ್ಡಿ ಹಾಗೂ ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಶಿವಜ್ಯೋತಿ ಶ್ರೀನಿವಾಸರೆಡ್ಡಿ ಕೆಳಗೆ ಕುಳಿತು ಪ್ರತಿಭಟಿಸಿದರು.

ಕಳೆದ ನಾಲ್ಕು ವರ್ಷದಿಂದ ಅಂಗನವಾಡಿ ಕೇಂದ್ರಗಳಲ್ಲಿ ಶೌಚಗೃಹ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದ್ದರೂ ನಿರ್ಮಿಸಿಲ್ಲ. ಜಿಲ್ಲೆಯಲ್ಲಿ ಕ್ಯಾಶುಟೆಕ್‌ಗೆ 345, ನಿರ್ಮಿತಿ ಕೇಂದ್ರದವರು 368 ಶೌಚಗೃಹ ನಿರ್ಮಿಸಿದ್ದು, 642 ಕಾಮಗಾರಿ ಬಾಕಿಯಿವೆ. ಹಣ ಬಿಡುಗಡೆಯಾಗಿ ನಾಲ್ಕು ವರ್ಷವಾಗಿದೆ. ಹೀಗಾಗಿ ಏಜೆನ್ಸಿಯಿಂದ ಬಡ್ಡಿ ಸಮೇತ ಹಣ ವಸೂಲಿ ಮಾಡುವಂತೆ ಒತ್ತಾಯಿಸಿದರು.

ಈ ವೇಳೆ ಅಧ್ಯಕ್ಷೆ ಆದಿಮನಿ ವೀರಲಕ್ಷ್ಲೀ, ಸಂಬಂಧಿಸಿದ ಅ ಧಿಕಾರಿಯನ್ನು ವಿಚಾರಿಸಿ ತರಾಟೆಗೆ ತೆಗೆದುಕೊಂಡರು. ಸಿಇಒ ಶೇಖ್‌ ತನ್ವಿರ್‌ ಆಸೀಫ್‌ ಮಾತನಾಡಿ, ನಾನು ಅಧಿ ಕಾರ ವಹಿಸಿಕೊಂಡು ಕೆಲವೆ ದಿನಗಳಾಗಿದೆ. ಈ ಬಗ್ಗೆ ಕೂಡಲೇ ಪರಿಶೀಲಿಸುತ್ತೇವೆ ಎಂದರು. ಅಲ್ಲಿಗೂ ಸದಸ್ಯರು
ಮೇಲೆಳಲಿಲ್ಲ. ಕೊನೆಗೆ ಅಧ್ಯಕ್ಷೆ, ಸಿಇಒ ಕೆಳಗಿಳಿದು ಬಂದು ಇಬ್ಬರು ಸದಸ್ಯರ ಮನವೊಲಿಸಿದರು. ಅಧ್ಯಕ್ಷೆ ಮಾತನಾಡಿ, ಬೇಸಿಗೆ ಸಮೀಪಿಸಿದ್ದು, ಗ್ರಾಮೀಣ ಭಾಗದಲ್ಲಿ ಕುಡಿವ ನೀರಿನ ಸಮರ್ಪಕ ಪೂರೈಕೆಗೆ ಕ್ರಮ ವಹಿಸಬೇಕು. ಜಿಲ್ಲೆಯ ಹಲವು ಗ್ರಾಮಗಳಲ್ಲಿ ಶುದ್ಧ ಕುಡಿವ ನೀರಿನ ಘಟಕಗಳು ದುರಸ್ತಿಯಲ್ಲಿದ್ದು, ಶೀಘ್ರ ಸರಿಪಡಿಸಬೇಕು. ಅಗತ್ಯವಿರುವೆಡೆ ಕೊಳವೆಬಾವಿ ಕೊರೆಸಿ ನೀರು ಪೂರೈಸಬೇಕು ಎಂದರು.

ಸಿಇಒ ಮಾತನಾಡಿ, ಸಾಕಷ್ಟು ಶುದ್ಧ ನೀರಿನ ಘಟಕ ಕೆಟ್ಟು ನಿಂತಿದ್ದು, ವಾರದೊಳಗೆ ವರದಿ ಅದರ ವಸ್ತುಸ್ಥಿತಿ ಆಧರಿತ ವರದಿ ಕೊಡಿ ಎಂದರು. ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳಲ್ಲಿ ಕೋವಿಡ್‌ ನಂತರ ವಿದ್ಯಾರ್ಥಿಗಳ ಹಾಜರಾತಿ ಬಗ್ಗೆ ಒತ್ತು ನೀಡಬೇಕು. ಮಕ್ಕಳಿಗೆ ವಸತಿ ನಿಲಯಗಳಲ್ಲಿ ಮೆನು ಪ್ರಕಾರ ಗುಣಮಟ್ಟದ ಊಟ, ಉಪಾಹಾರ ನೀಡಬೇಕು. ಶಿಥಿಲಗೊಂಡ ವಿದ್ಯಾರ್ಥಿ ನಿಲಯಗಳ ಪಟ್ಟಿ ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸತೀಶ್‌ಗೆ ಅಧ್ಯಕ್ಷೆ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬಂದಿದ್ದು, ಕಳೆದ ಮೂರ್‍ನಾಲ್ಕು ದಿನಗಳಿಂದ ಶೂನ್ಯ ಪಾಸಿಟಿವ್‌ ಪ್ರಕರಣಗಳು ವರದಿಯಾಗಿದೆ. 2ನೇ ಹಂತದ ಕೋವಿಶೀಲ್ಡ್‌ ವಿತರಣೆ ಸರಿಯಾಗಿ ನಡೆಯುತ್ತಿದೆ ಎಂದರು. ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.

ಗೈರಾದ ಅಧಿಕಾರಿಗಳಿಗೆ ನೋಟಿಸ್‌
ಸಭೆಗೆ ಸಾಕಷ್ಟು ಅಧಿಕಾರಿಗಳು ಗೈರಾಗಿದ್ದು, ಕಾರಣ ಕೇಳಿ ನೋಟಿಸ್‌ ನೀಡಬೇಕು. ಅವರ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅಧ್ಯಕ್ಷೆ ಆದಿಮನಿ ವೀರಲಕ್ಷಿ ಸೂಚಿಸಿದರು. ಕಳೆದ ಕೆಡಿಪಿ ಸಭೆಯಲ್ಲಿ ಆರು ಅಧಿ ಕಾರಿಗಳಿಗೆ ನೋಟಿಸ್‌ ನೀಡಿರುವ ಪೈಕಿ ನಾಲ್ವರು ಅಧಿಕಾರಿಗಳು ಈಗಾಗಲೇ ನೋಟಿಸ್‌ಗೆ ಉತ್ತರಿಸಿದ್ದಾರೆಂದು ಮುಖ್ಯ ಯೋಜನಾಧಿಕಾರಿ ಡಾ| ರೋಣಿ ಮಾಹಿತಿ ನೀಡಿದರು. ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ದೇವದುರ್ಗ, ಸಿಂಧನೂರಿನ ಎಇಇಗಳು ಉತ್ತರ ನೀಡಿಲ್ಲ. ಅವರಿಗೆ ಮತ್ತೂಮ್ಮೆ ನೋಟಿಸ್‌ ಕೊಡಿ ಎಂದು ಅಧ್ಯಕ್ಷೆ ಸೂಚಿಸಿದರು.

ಸಮಿತಿ ರಚಿಸಿ ತನಿಖೆ
ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಶಿವಜ್ಯೋತಿ ಮಾತನಾಡಿ, ಹೊಸಪೇಟೆ ಗ್ರಾಮದಲ್ಲಿ ಕುವೆಂಪು ವಸತಿ ಶಾಲೆ 2005ರಲ್ಲಿ ನಿರ್ಮಿಸಿದ್ದು, 2015ರಲ್ಲೇ ಕುಸಿದು ಬಿದ್ದಿದೆ. ಕೂಡಲೇ ನಿರ್ಮಿತಿ ಕೇಂದ್ರದ ಅ ಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಎಂದು ತಾಕೀತು ಮಾಡಿದರು. ಸಿಇಒ ಶೇಖ್‌ ತನ್ವೀರ್‌ ಆಸಿಫ್‌ ಮಾತನಾಡಿ, ಈ ಕುರಿತು 15 ದಿನದೊಳಗೆ ತನಿಖೆ ನಡೆಸಿ, ವರದಿ ಸಲ್ಲಿಸಬೇಕು. 10 ವರ್ಷದಲ್ಲಿ ಕಟ್ಟಡ ಕುಸಿದಿದೆ ಎಂದರೆ ಅದರ ಗುಣಮಟ್ಟದ ಸಮಗ್ರ ತನಿಖೆ ನಡೆಸಿ. ಈ ಬಗ್ಗೆ ಕುಲಂಕಷವಾಗಿ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ವರದಿ ನೀಡುವಂತೆ ತಿಳಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.