ನೀ ಬರಿಯೋ ಕವಿತೆಗಳ ಪ್ರತೀ ಸಾಲು ನನಗಿಷ್ಟ… ಕವಿಯೂ ಇಷ್ಟ !


Team Udayavani, Feb 14, 2021, 1:18 PM IST

valentine’s day special

ಹಸಿರ ಹುಲ್ಲು ಹಾಸಿನ ಮೇಲೆ ಮಲಗಿ ಮುಗಿಲ ಆಟವನು ನೋಡುತ್ತಿದ್ದವನಿಗೆ ಕೇಳಿದ್ದ ಆ ಗೆಜ್ಜೆ ಸದ್ದು ನಿನ್ನದೋ ಎಂಬ ಅನುಮಾನ, ಮೇಲೆದ್ದು ಸುತ್ತ ಹುಡುಕಿದವನಿಗೆ ಕಂಡಿದ್ದು ಭರಪೂರವಾಗಿ ತುಂಬಿದ್ದ ಹಸಿರು‌ ಮಾತ್ರ… ಮನಸು ನಾಚಿ ಮುಗುಳ್ನಕ್ಕು ನನ್ನ ಕೈಯಿಂದಲೆ ತಲೆಗೊಂದು ಏಟು ಕೊಡಿಸಿದಾಗ ಎಚ್ಚೆತ್ತ ಹೃದಯ ಕೇಳಿದ್ದೊಂದೆ ಪ್ರಶ್ನೆ! ಕೇಳಿದ ಗೆಜ್ಜೆ ಸದ್ದು ನಿನ್ನದು ಅಂತ ಅನಿಸಿದ್ದೇಕೆ?

ಅದೇ, ಪ್ರೀತಿ…

ಬಿಳಿಯ ಕಾಗದದಲಿ ಬರೆದು ಮುಗಿಸಲಾಗದಷ್ಟು ಅರ್ಥಗಳು, ಸರಿದ ನಿಮಿಷಗಳು ಮರೆಯದೇ ಇರುವಷ್ಟು ನೆನಪುಗಳು, ಹೇಳಿ ಮುಗಿಸಲಾರದಷ್ಟು ಭಾವನೆಗಳು, ಮನಸೊಳಗೆ ಅಳಿಸಲಾರದಷ್ಟು ಒಲವ ರೇಖೆಗಳು.

ಹಳೇ ಕಥೆಗಳನು ನೆನಪಿನ ರುಮಾಲಿನಲ್ಲಿ ಬಿಗಿಯಾಗಿ ಕಟ್ಟಿ ಕುಂತರೂ ರುಮಾಲಿನ ತುದಿಯೆಳೆದು ಮತ್ತೆ ಹೊರಬಂದು ಮನಸಿನಲಿ ಕುಣಿಯುತ್ತಿರುತ್ತದೆ. ಅದೇನು ಬಚ್ಚಿಟ್ಟು ಕೂರುವಂಥ ನೆನಪುಗಳೇ?!

ಕಾಲೇಜಿನಲ್ಲಿ ಯಾವುದೋ ಆಲೋಚನೆಯಲಿ ಕುಳಿತಿದ್ದವನ ಆಲೋಚನೆಗಳ ಕದಡಿಸಿ ನೀ ಹೇಳಿದ ಆ ಮಾತುಗಳು ಈಗಲೂ ಕೇಳಿಸುತ್ತಿವೆ. ನಿನ್ನ ಬಾಯಿಯಿಂದ ಬಂದ ಆ ಹೊಗಳಿಕೆ ‘ ನೀ ಬರಿಯೋ ಕವಿತೆಗಳ ಪ್ರತೀ ಸಾಲು ನನಗಿಷ್ಟ.. ದಿನವೂ ಓದುತ್ತಲೇ ಇರುತ್ತೇನೆ.. ಕವಿತೆಯ ಜೊತೆಗೆ ಕವಿಯೂ ಇಷ್ಟವಾದ.. ಮತ್ತೇನೂ ಹೇಳಬೇಕಿಲ್ಲ ಅಲ್ವಾ?’ ಅಂತ ಒಂಟಿ ಹುಬ್ಬೇರಿಸಿ ನಡೆದದ್ದು ನಿನಗೆ ನೆನಪಿದೆಯೋ ಇಲ್ವೋ, ನನಗಂತೂ ಅದುವೇ ಮಧುರ ಕ್ಷಣ. ಅದೇಕೋ ಸಿನಿಮಾ ಶೈಲಿಯಲ್ಲೇ ತಂಗಾಳಿ ಬಂದು ನಿನ್ನ ಮುಂಗುರಳ ನಡುವೆ ಹಾದು, ಕಿವಿಯೋಲೆಗಳ ಹಿಡಿದು ತೂಗಾಡಿ ಸಾಗಿತ್ತು. ಅದರ ರಭಸಕೆ ಮುಚ್ಚಿಕೊಂಡ ಕಣ್ರೆಪ್ಪೆ ನಿನ್ನ ಕಣ್ಣುಗಳ ನಗುವನ್ನೊಮ್ಮೆ ಮರೆಯಾಗಿಸಿ ಮತ್ತೆ ತೆರೆದುಕೊಂಡಿತ್ತು. ಪಕ್ಕದಲಿ ಕುಳಿತಿದ್ದ ಗೆಳೆಯರ ಕೂಗಾಟವೇ ಕೇಳಿಸದೆ, ನಿನ್ನ ತುಂಟ ನಗುವೇ ಕಿವಿಯೊಳಗೆ ಇಳಿದಿತ್ತು.

ನಿನ್ನ ಹೆಸರೇ ನೆನಪಿರಲಿಲ್ಲ ಮೊದಲು. ನಿನ್ನ ಹೆಸರು ಬೇಕಾಗಿಯೂ ಇರಲಿಲ್ಲ. ನಿನ್ನ ಪ್ರೀತಿಗೆ, ಮಾತಾಡೋ ರೀತಿಗೆ, ನಗುವ ಕಂಗಳಿಗೆ ನಾನೇ ನೆನಪಾಗೋ ಹೆಸರಿಟ್ಟಾಗಿತ್ತು. ಮನಸು ಆ ಹೆಸರ ಕರೆಯುತ್ತಿತ್ತು ಬಿಟ್ಟರೆ ಹೊರಗೆ ಹೇಳಿದ್ದಿಲ್ಲ. ಭಾವನೆಗಳನ್ನು ನಿನ್ನಲ್ಲಿ ಹಂಚಿದಷ್ಟು ಇನ್ನೊಬ್ಬರಿಗೆ ತಿಳಿಸಿದ್ದಿಲ್ಲ.

ಬಹುಶಃ ನಮ್ಮ ಪ್ರೀತಿಗೆ ನಾವಿಬ್ಬರೂ ಆಡಿದ ಜಗಳಗಳೂ ಸಾಥ್ ಕೊಟ್ಟಿರಬೇಕು. ಅದ್ಯಾರೋ ಪ್ರೇಮಿಗಳು ಮೊದಲೇ ಹೇಳಿದ್ದಾರೆಲ್ಲವೇ, ಜಗಳವಾಡಿದ್ರೇನೆ ಪ್ರೀತಿ ಹೆಚ್ಚಾಗೋದಂತೆ; ಹಾಗೇನೆ. ಜಗಳದ ನಂತರ, ಮಾತು ನಿಂತಾದ ಮೇಲೆ, ಕ್ಷಣಗಳಿಗೊಮ್ಮೆ ಮನಸು ಭಾರವಾಗುತ್ತ ಹೋದಂತೆ ಅನಿಸಿದಾಗ ಕೇಳುವ ಆ ‘SORRY’ ಪದ ತನ್ನಲ್ಲೇ ಮುಗಿಯದಷ್ಟು ಪ್ರೀತಿ ತಂದಿರುತ್ತದೆ. ದೂರ ಹೋಗು ಅಂದಿದ್ದ ಹೃದಯ ಹತ್ತಿರ ಬಾ ಎಂದು ಕೂಗಿ ಕರೆಯುತ್ತದೆ.

ಭಾವನೆಗಳಿಗೆ ಬೇಕಾದ ಬಣ್ಣ ಹಚ್ಚಿ ನಮಗಿಬ್ಬರಿಗೆ ಮಾತ್ರ ಕಾಣುವಂತೆ ಚಿತ್ರಿಸಿ ದಿನವೂ ನೋಡಿ ಖುಷಿಪಡುತ್ತಿದ್ದಿದ್ದು ನೆನಪಿರಬಹುದು ನಿನಗೆ. ಹುಟ್ಟಿದ ಹಬ್ಬದ ದಿನ ನೀ ಹೇಳಿದ ಶುಭಾಶಯಗಳು, ನೀ ಕೊಡಿಸಿದ ನೀಲಿ ಬಣ್ಣದ ಲೇಖನಿಯಲ್ಲಿರೋ ನಿನ್ನ ಹಸ್ತಾಕ್ಷರ, ಸಂಜೆ ಕುಳಿತು ಕುಡಿದ ಕಾಫಿ, ಜೊತೆಗೆ ನಡೆದು ಸವೆಸಿದ ಹೆಜ್ಜೆಗಳು, ಹಾದಿಗಳು….ಪ್ರೀತಿಯ ಹಬ್ಬಗಳ ತುಂಬಿರೋ ಹೊಸ ಸಂವತ್ಸರ.

ಇನ್ನೇನಿದೆ ಹೇಳೋಕೆ?…

ಮನಸಿನ ಅಪ್ಸರೆಯೆ ಕನಸಲ್ಲೂ ಕನವರಿಸು

ನಾ ಬಂದು ಮುದ್ದಿಸುವೆ ಮನಸು ಹೇಳುವಷ್ಟು

ಹೃದಯದ ಅರಮನೆಯ ಬಾಗಿಲೊಳಗೆ ಕಾಲಿರಿಸು

ಕೈ ಹಿಡಿದು ಕರೆದೊಯ್ವೆ, ದಾರಿ ಮುಗಿಯದಷ್ಟು.

ನಿನ್ನ ಪ್ರೇಮಲೋಕದ ಕಥೆಗಾರ-  ಮೃಗಾಂಕ (ಶ್ರೀಶ)

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.